Highcourt: ಎಂಟು ನಾಯಿಮರಿ ಕೊಂದಿದ್ದ ವೃದ್ಧೆಗೆ ದಂಡ ಹೆಚ್ಚಿಸಲು ಹೈಕೋರ್ಟ್‌ ನಕಾರ

ಹೈಕೋರ್ಟ್‌ಗೆ ಸಲ್ಲಿಸಿದ್ದ ಕ್ರಿಮಿನಲ್‌ ಪುನರ್‌ ಪರಿಶೀಲನಾ ಅರ್ಜಿ ತಿರಸ್ಕಾರ

Team Udayavani, Jan 18, 2024, 2:13 PM IST

8highcourt

ಬೆಂಗಳೂರು: ಎಂಟು ನಾಯಿಮರಿಗಳ ಸಾವಿಗೆ ಕಾರಣವಾಗಿದ್ದ 72 ವರ್ಷದ ವೃದ್ಧೆಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಂದು ಸಾವಿರ ರೂ.ಗಳ ದಂಡವನ್ನು ಹೆಚ್ಚಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಯಸ್ಸು ಮತ್ತು ತಪ್ಪೊಪ್ಪಿಗೆ ಕಾರಣಗಳನ್ನು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣ ಹೆಚ್ಚಳ ಮಾಡ ಬೇಕು ಎಂಬ ಮನವಿಯನ್ನು ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಾಣಿಕಲ್ಯಾಣ ಅಧಿಕಾರಿ ಕೆ.ಬಿ.ಹರೀಶ್‌ ಹೈಕೋರ್ಟ್‌ಗೆ ಕ್ರಿಮಿನಲ್‌ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜೆ.ಎಂ.ಖಾಜಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಆರೋಪಿತರಾದ ಪೊನ್ನಮ್ಮಗೆ ಘಟನೆ ನಡೆದಾಗ 65 ವರ್ಷ ವಾಗಿತ್ತು. ಪ್ರಸ್ತುತ 72 ವಯಸ್ಸು ಆಗಿದೆ. ಜತೆಗೆ ಆಕೆ ತಪ್ಪೊಪ್ಪಿಕೊಂಡಿದ್ದಾರೆ. ವಿಚಾರಣಾ ನ್ಯಾಯಾಲಯದ ನ್ಯಾಯಾ ಧೀಶರ ವಿವೇಚನಾಧಿಕಾರ ಬಳಸಿ ಆಕೆಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತವನ್ನೂ ಪಾವತಿ ಮಾಡಲಾಗಿದೆ ಎಂದು ತಿಳಿಸಿದ ನ್ಯಾಯ ಪೀಠ, ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುವುದಕ್ಕೆ ನಿರಾಕರಿಸಿದೆ. ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರೋಪಿಯ ಅಪರಾಧಕ್ಕೆ ಅನುಗುಣವಾಗಿ ಆರೋಪಿತರಿಗೆ ಶಿಕ್ಷೆ ವಿಧಿಸಿಲ್ಲ. ಜಗತ್ತಿನ ಎಲ್ಲ ಜೀವಿಯ ಕುರಿತು ಕರುಣೆ ಹಾಗೂ ಸಹಾನೂಭೂತಿ ತೋರುವುದು ನಾಗರಿಕನ ಕರ್ತವ್ಯ. ಆದ್ದರಿಂದ ಆಕೆಗೆ ವಿಧಿಸಿದ್ದ ದಂಡ ಹೆಚ್ಚಿಸಬೇಕು ಎಂದು ನ್ಯಾಯಪೀಠಕ್ಕೆ ಕೋರಿದ್ದರು.

ಪ್ರಕರಣದ ಹಿನ್ನೆಲೆ ಏನು? 2016 ರ ಮಾ.15 ರಂದು ಆರೋಪಿ ಪೊನ್ನಮ್ಮರ ಮನೆಯ ಮುಂದೆ ನಾಯಿಯೊಂದು ಎಂಟು ಮರಿಗಳನ್ನು ಹಾಕಿತ್ತು. ಅದರ ಗದ್ದಲದಿಂದ ಬೇಸತ್ತ ಮಹಿಳೆ ಆ ನಾಯಿಮರಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಿ ಖಾಲಿ ನಿವೇಶನದಲ್ಲಿರಿಸಿದ್ದರು. ಇದರಿಂದ ತಾಯಿ ನಾಯಿಗೆ ಮರಿಗಳ ಬಳಿ ಬರಲು ಅಥವಾ ಮರಿಗಳಿಗೆ ತಾಯಿಯ ಬಳಿ ಹೋಗಲು ಸಾಧ್ಯವಾಗಲಿಲ್ಲ. ಇದರಿಂದ ತಾಯಿಯ ಪಾಲನೆ ಸಿಗದೆ ಮರಿಗಳು ಸಾವನ್ನಪ್ಪಿದ್ದವು.

ಈ ಹಿನ್ನೆಲೆಯಲ್ಲಿ ಹರೀಶ್‌ ಪೊಲೀಸರಿಗೆ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದರು. ಬಳಿಕ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ಐಪಿಸಿ, ಕರ್ನಾಟಕ ಪೊಲೀಸ್‌ ಕಾಯ್ದೆ, ಪ್ರಾಣಿಗಳ ಮೇಲಿನ ಕ್ರೌರ್ಯತಡೆ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯಕ್ಕೆ ಹಾಜರಾದ ಪೊನ್ನಮ್ಮ, ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಈ ಅಂಶವನ್ನು ದಾಖಲಿಸಿಕೊಂಡಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರು, ಒಂದು ಸಾವಿರ ದಂಡ ವಿಧಿಸಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಹರೀಶ್‌ ಸೆಷನ್ಸ್‌ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಸೇಷನ್ಸ್‌ ನ್ಯಾಯಾಲಯ ಸಹ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹರೀಶ್‌ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.