ನಿರ್ಮಾಣ ಹಂತದ ಆರೈಕೆ ಕೇಂದ್ರಕ್ಕೆ ಸಚಿವ ಭೇಟಿ
Team Udayavani, Jul 7, 2020, 6:16 AM IST
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋವಿಡ್ 19 ಸೋಂಕಿತರ ಆರೈಕೆಗಾಗಿ ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಿರ್ಮಿಸುತ್ತಿರುವ ಬೃಹತ್ ಆರೈಕೆ ಕೇಂದ್ರಕ್ಕೆ ಸೋಮವಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರ ನಿರ್ಮಿಸುತ್ತಿರುವ 10,100 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ ಭರದಿಂದ ಸಾಗುತ್ತಿದೆ. ಈ ಕಾರ್ಯದ ಜವಾಬ್ದಾರಿ ಹೊತ್ತಿರುವ ಕಾರ್ಯ ಪಡೆಯ ಅಧಿಕಾರಿಗಳಾದ ರಾಜೇಂದ್ರ ಕಟಾರಿಯ, ಸಫ್ರಾಜ್ ಖಾನ್ ಮೊದಲಾದವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಬಹಳ ರಭಸದಿಂದ ಕಾರ್ಯ ಸಾಗಿದೆ. ವ್ಯವಸ್ಥೆಯೂ ಬಹಳ ಅಚ್ಚುಕಟ್ಟಾಗಿ ಯೋಜಿಸಲಾಗಿದೆ. ಇಡೀ ದೇಶದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಇದಾಗಲಿದೆ ಎಂದರು.
ಇಎಸ್ಐ ಕೋವಿಡ್ ಆಸ್ಪತ್ರೆಗೆ ಭೇಟಿ: ರಾಜಾಜಿನಗರದ ಎಸ್ಐ ಕೊವೀಡ್ ಆಸ್ಪತ್ರೆಗೆ ಭೇಟಿದ ಅವರು, ಮುಖ್ಯಾಧಿಕಾರಿಗಳಾದ ಡಾ. ಇಮಿ¤ ಯಾಜ ಆಲೀ, ಆಸ್ಪತ್ರೆಯ ಡೀನ್ ಡಾ.ಜಿತೇಂದ್ರ ನಾಯಕ್, ನೋಡಲ್ ವೈದ್ಯ ಡಾ.ಸತ್ಯನಾರಾಯಣ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಇವರೆಗೆ ಇಲ್ಲಿನ ಕೋವಿಡ್ ಫೀವರ್ ಕ್ಲಿನಿಕ್ ನಲ್ಲಿ 26,911 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಜೂನ್ 29ನಂತರ ದಾಖಲಾದ 144 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 33 ಮಂದಿ ಗುಣಮುಖರಾಗಿದ್ದಾರೆ. 75 ಹಾಸಿಗೆ ವ್ಯವಸೆಯಿದ್ದು, ಇದರಲ್ಲಿ 15 ಐಸಿಯು ಹಾಸಿಗೆ ಹಾಗೂ 10 ವೆಂಟಿಲೇಟರ್ ಇದೆ. ಅನುಭವಿ ವೈದ್ಯರಿದ್ದು, ರೋಗಿಗಳ ಆರೈಕೆಯು ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ