ಗೇಟ್‌ ತಳ್ಳಾಡಿ ವಲಸೆ ಕಾರ್ಮಿಕರ ಆಕ್ರೋಶ


Team Udayavani, May 24, 2020, 4:28 AM IST

tallladi

ಬೆಂಗಳೂರು: ನಗರದಿಂದ ಬೇರೆ ರಾಜ್ಯಗಳಿಗೆ ತೆರಳಲು ಸಾವಿರಾರು ಸಂಖ್ಯೆಯಲ್ಲಿ ಅರಮನೆ ಮೈದಾನದಲ್ಲಿ ಸೇರಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ವ್ಯವಸ್ಥೆ ಕುರಿತು ಪಾಲಿಕೆ ಅಧಿಕಾರಿಗಳು ಸೂಕ್ತ ಮಾಹಿತಿ  ನೀಡದ ಹಿನ್ನೆಲೆಯಲ್ಲಿ ಶನಿವಾರ ಗೊಂದಲ, ಆತಂಕದ ವಾತಾವರಣ ನಿರ್ಮಾಣವಾಗಿತ್ತು.  ವಲಸೆ ಕಾರ್ಮಿಕರಿಗೆ ಅರಮನೆ ಮೈದಾನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಶನಿವಾರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಶ್ರಮಿಕ  ರೈಲಿನಲ್ಲಿ ಕಳುಹಿಸುವ ಬಗ್ಗೆ ಹಲವರಿಗೆ ಮೆಸೇಜ್‌ ಮೂಲಕ ದೃಢಪಡಿಸಲಾಗಿತ್ತು. ಆದರೆ, ನಿಗದಿಗಿಂತ ಹೆಚ್ಚು ಜನ ಸೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಯಿತು. ಅಲ್ಲದೆ, ವಲಸೆ ಕಾರ್ಮಿಕರಲ್ಲಿ ಹಲವರು ಬಾಡಿಗೆಗೆ ಇದ್ದ ಮನೆಗಳನ್ನು ಖಾಲಿ ಮಾಡಿಕೊಂಡು ಬಂದಿದ್ದರು.  ಶನಿವಾರ ಊರುಗಳಿಗೆ ಕಳುಹಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಂತೆಯೇ ವಲಸೆ ಕಾರ್ಮಿ  ಕರು, ಗೇಟ್‌ ತಳ್ಳಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ  ಪ್ರತಿಕ್ರಿಯಿಸಿದ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಜಂಟಿ ಆಯುಕ್ತ ಸಫ‌ರಾಜ್‌ಖಾನ್‌, ಶ್ರಮಿಕ ರೈಲು ರದ್ದಾದ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿ  ಯಾಯಿತು. ಎಲ್ಲರಿಗೂ ಸಂದೇಶ ಬಂದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಒಂದೆಡೆ  ಸೇರಿದ್ದರು. ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸುವ   ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಅರಮನೆ ಮೈದಾನದಲ್ಲಿ ಒಟ್ಟು 6 ಸಾವಿರ ವಲಸೆ ಕಾರ್ಮಿಕರು ಸೇರಿದ್ದು, ಇವರನ್ನು 2-3 ದಿನಗಳಲ್ಲಿ ಹಂತ ಹಂತವಾಗಿ  ಅವರ ಊರುಗಳಿಗೆ ಕಳುಹಿಸಲಾಗುವುದು.

ಅಲ್ಲಿಯವರೆಗೆ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಪಾಲಿಕೆ ಮಾಡಿ ಕೊಂಡಿದೆ ಎಂದು ಹೇಳಿದರು. ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿದ್ದ ಅಸ್ಸಾಂ ನ 60 ಮಂದಿ ವಲಸೆ  ಕಾರ್ಮಿಕರು, ಬಸ್‌ನಲ್ಲಿ ಅವರ ಊರುಗಳಿಗೆ ತೆರಳಿದ್ದಾರೆ.  ಅರಮನೆ ಮೈದಾನ ದಿಂದ300 ಜನರನ್ನು ಹಾಗೂ  ಯಲಹಂಕದ ಮ್ಯಾನ್ಫೋ ಕನ್ವೆನನ್‌ ಸೆಂಟರ್‌ನಿಂದ 1,500 ಜನರನ್ನು ಜಾರ್ಖಂಡ್‌ಗೆ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ವಲಸಿಗರಿಗೆ ಚಪಾತಿ ಆಸರೆ: ನಗರ ಜಿಲ್ಲಾಡಳಿತದ ವ್ಯಾಪ್ತಿಯ ಸ್ತ್ರೀ ಸ್ವಸಹಾಯ ಸಂಘಗಳು ವಲಸಿಗರ ಹಸಿವು ನೀಗಿಸುವಲ್ಲಿ ನಿರತವಾಗಿವೆ. ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆ ಗ್ರಾಪಂನ ಸ್ನೇಹ ಸಿOಉàಶಕ್ತಿ ಸ್ವಸಹಾಯ  ಸಂಘ ಉತ್ತರ ಭಾರತದ ಮೂಲದ ವಲಸಿಗರಿಗೆ ಚಪಾತಿ ತಯಾರಿಸಿ ಉಚಿತವಾಗಿ ನೀಡುತ್ತಿದೆ.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಸರೆ ಪಡೆದಿರುವ ಒಡಿಶಾ, ಜಾರ್ಖಂಡ್‌, ಪಶ್ಚಿಮ ಬಂಗಾಳದ 200 ಮಂದಿ ಕೂಲಿ ಮತ್ತು  ಕಟ್ಟಡ ಕಾರ್ಮಿಕರು ಅಲ್ಲಿದ್ದು ಅವರೆಲ್ಲ ರಿಗೂ ಒಂದು ಸಲ ಸುಮಾರು 800 ರಿಂದ 1000 ವರೆಗೂ ಚಪಾತಿಗಳನ್ನು ತಯಾರು ಮಾಡಲಾ ಗುತ್ತದೆ ಎಂದು ಸ್ನೇಹ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸಂಚಾಲಕಿ ಭವಾನಿ ಹೇಳಿದ್ದಾರೆ. ತಮ್ಮೂರಿಗೆ ತೆರಳಲು ರೈಲುಗಾಗಿ ಕಾಯುತ್ತಿದ್ದು ಅವರೆಲ್ಲರ ಹಸಿವು ನೀಗಿಸುವ ಕೆಲಸವನ್ನು ಸ್ಥಳೀಯ ಸಿOಉà ಶಕ್ತಿ ಸಂಘಗಳು ಮಾಡುತ್ತಿವೆ.

ಕುಸಿದು ಬಿದ್ದ ವ್ಯಕ್ತಿ: ಸ್ಥಳದಲ್ಲಿ ಊರಿಗೆ ಹಿಂತಿರುಗಲು ಆಗಮಿಸಿದ್ದ ಒಡಿಶಾ ಮೂಲದ ಕಾರ್ಮಿಕನೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದ ವ್ಯಕ್ತಿಗೆ ಸಚಿವ ಡಾ. ಕೆ. ಸುಧಾಕರ್‌ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ  ಕಳುಹಿಸಿಕೊಟ್ಟರು.  ಒಡಿಶಾ ಮೂಲದ ಎರ್ಸಾದ್‌ ಎಂಬಾತ ದಿಢೀರ್‌ ಎಂದು ಕುಸಿದು ಬಿದ್ದು ಒದ್ದಾಡತೊಡಗಿದ್ದನ್ನು ಗಮನಿಸಿದ ಸಚಿವರು ತಕ್ಷಣ  ಆತನಲ್ಲಿಗೆ ತೆರಳಿ ಆತನನ್ನು ಪರೀಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಆತನನ್ನು ಪೊಲೀಸ್‌ ವಾಹನದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲು ಸಚಿವರು ಸೂಚನೆ ನೀಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.