ಅವಾಂತರ ಸೃಷ್ಟಿಸಿದ ವರ್ಷಧಾರೆ


Team Udayavani, May 30, 2020, 6:01 AM IST

tree rain

ಬೆಂಗಳೂರು: ನಗರದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮತ್ತೆ 46ಕ್ಕೂ ಅಧಿಕ ಮರ ಮತ್ತು ರೆಂಬೆಗಳು ನೆಲಕಚ್ಚಿವೆ. ಇದರಿಂದ ಹಲವು ವಾಹನಗಳು ಜಖಂಗೊಂಡಿದ್ದು, ಕೆ.ಆರ್‌. ವೃತ್ತ ಮತ್ತು ಜಯಮಹಲ್‌ನ ನಂದಿದುರ್ಗದಲ್ಲಿ ಚಲಿಸುತ್ತಿದ್ದ ಎರಡು ಆಟೋಗಳ ಮೇಲೆಯೇ ಮರದ ರೆಂಬೆ ಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂ‌ವಿಸಿಲ್ಲ.

ಮೂರು ದಿನಗಳ ಅಂತರದಲ್ಲಿ ಚಲಿಸುವ ಮೇಲೆ ರೆಂಬೆ ಬೀಳುತ್ತಿರುವುದು ಎರಡನೇ ಘಟನೆ ಇದಾಗಿದೆ. ಗಾಳಿ  ಸಹಿತ ಮಳೆ ಹಾಗೂ ಪರಿಣಾಮ ಧರೆಗುರುಳುವ ಮರಗಳಿಗೆ ಇತ್ತೀಚೆಗೆ ವಾಹನಗಳು ಜಖಂಗೊಳ್ಳುತ್ತಿರುವು  ದರಿಂದ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಮಲ್ಲೇಶ್ವರ, ಸುಬ್ರಹ್ಮಣ್ಯ ನಗರ,  ಟಿ.ಆರ್‌. ಮಿಲ್‌,  ಬಸವೇಶ್ವರನಗರ ಸೇರಿದಂತೆ ಹಲವೆಡೆ ರಸ್ತೆ ಬದಿ ನಿಂತಿದವಾಹನಗಳ ಮೇಲೆಯೇ ಮರ ಮತ್ತು ಮರದ ರೆಂಬೆಗಳು ಬಿದ್ದಿವೆ.

ಇದರಿಂದ ವಾಹನಗಳು ಜಖಂಗೊಂಡಿವೆ. ಸಂಜೆ ಕೆ.ವೃತ್ತದಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ರೆಂಬೆ ಬಿದ್ದಿದೆ. ಆಟೋದಲ್ಲಿ ಯಾರೂ ಹಾಗೂ ಹಿಂಭಾಗದಲ್ಲಿ ರೆಂಬೆ ಬಿದ್ದಿದ್ದರಿಂದ ಅನಾಹುತ ತಪ್ಪಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಮಾಹಿತಿ ನೀಡಿದರು. ವಿದ್ಯಾರಣ್ಯಪುರದಲ್ಲೂ ಮರದ ಕೊಂಬೆ ಬಿದ್ದು, ಆಟೋ ಜಖಂಗೊಂಡಿದೆ.  ನಗರದ ಉತ್ತರ ಭಾಗದಲ್ಲಿ ಕನಿಷ್ಠ 30ರಿಂದ ಗರಿಷ್ಠ 70 ಮಿ.ಮೀ. ಮಳೆ ದಾಖಲಾಗಿದೆ.

ಈ ಭಾಗದ ಹೆಬ್ಟಾಳ ಮೇಲ್ಸೇತುವೆ ಬಳಿ ಎಸ್ಟೀಮ್‌ ಮಾಲ್‌ ಎದುರು ರಸ್ತೆ ಜಲಾವೃತಗೊಂಡಿತು. ಅದೇ ರೀತಿ, ಕೆ.ಆರ್‌. ವೃತ್ತ ಒಳಗೊಂಡಂತೆ  ಪ್ರಮುಖ ಅಂಡರ್‌ಪಾಸ್‌ಗಳು, ಗ್ರೇಡ್‌ ಸಪರೇಟರ್‌ಗಳು, ಜಂಕ್ಷನ್‌ಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತಡೆಯುಂಟಾಯಿತು. ಪೀಕ್‌ ಅವರ್‌ನಲ್ಲಿ ಮಳೆ ಶುರುವಾಗಿದ್ದರಿಂದ ಹಾಗೂ ಖಾಸಗಿ ವಾಹನಗಳ  ಸಂಚಾರವೇ ಹೆಚ್ಚಿದ್ದುದರಿಂದ ವಾಹನ ಸವಾರರಿಗೆ ಇದರ ಬಿಸಿ ತುಸು ಜೋರಾಗಿಯೇ ತಟ್ಟಿತು.

ಮರಗಳು ಧರೆಗೆ – ವಿದ್ಯುತ್‌ ಕಡಿತ: ಅಲ್ಲಲ್ಲಿ ಮರ ಮತ್ತು ಮರದ ರೆಂಬೆಗಳು ಬಿದ್ದಿದ್ದರಿಂದ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕಾಯಿತು. ಪರಿಣಾಮ ಅಲ್ಲೆಲ್ಲಾ ಸಂಚಾರದಟ್ಟಣೆ ಉಂಟಾಯಿತು. ನಗರಟಿ.ಆರ್‌. ಮಿಲ್‌,  ಶಿವಾಜಿನಗರ, ಪಟ್ಟೇಗಾರಪಾಳ್ಯ, ಬಸವೇಶ್ವರನಗರ, ರಾಜಾಜಿನಗರ 1ನೇ ಬ್ಲಾಕ್‌, ಮಾಗಡಿ ರಸ್ತೆ, ಜೆ.ಸಿ. ನಗರ, ಚಾಮರಾಜಪೇಟೆ, ಸೆಂಟ್‌ ಜೋಸೆಫ್ ಕಾಲೇಜು ಬಳಿ, ಲುಂಬಿನಿ ಗಾರ್ಡನ್‌, ವೆಸ್ಟ್‌ ಆಫ್ ಕಾರ್ಡ್‌ ರೋಡ್‌, ಜಿಪಿಒ, ಶೇಷಾದ್ರಿಪುರ,

ಸದಾಶಿವನಗರ, ಡಾ.ರಾಜಕುಮಾರ್‌ ರಸ್ತೆ, ಬಿಇಎಂಎಲ್‌ ಲೇಔಟ್‌ ಸೇರಿದಂತೆ ವಿವಿಧೆಡೆ ಮರ ಮತ್ತು ರೆಂಬೆಗಳು ಬಿದ್ದ ಬಗ್ಗೆ ವರದಿಯಾಗಿದೆ ಎಂದು ಬಿಬಿಎಂಪಿ ನಿಯಂತ್ರಣಾ ಕೊಠಡಿ ಮಾಹಿತಿ ನೀಡಿದೆ. ಈ ಮಧ್ಯೆ  ಬೆಸ್ಕಾಂಗೆ ಗ್ರಾಹಕರು ದೂರುಗಳ ಮಳೆಗರೆದಿದ್ದಾರೆ. ಕೆಲವೆಡೆ ವಿದ್ಯುತ್‌ ತಂತಿಗಳ ಮೇಲೆ ಮರದ ರೆಂಬೆಗಳು ಬಿದ್ದಿದ್ದರಿಂದ ನಗರದ ಹಲವು ಪ್ರದೇಶಗಳಲ್ಲಿ ಕತ್ತಲೆ ಆವರಿಸಿತ್ತು. ಗಂಟೆಗಟ್ಟಲೆ ಕರೆಂಟ್‌ ಇಲ್ಲದ್ದರಿಂದ ಸಹಾಯವಾಣಿ, ಬೆಸ್ಕಾಂ  ಕಚೇರಿಗಳಿಗೆ ನೂರಾರು ಕರೆ ಬಂದಿವೆ.

ಎಲ್ಲೆಲ್ಲಿ ಟ್ರಾಫಿಕ್‌ ಜಾಮ್‌?: ಭಾರೀ ಮಳೆಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಶಿವಾನಂದ ವೃತ್ತ, ಮೆಜೆಸ್ಟಿಕ್‌, ಯಶವಂತಪುರ, ನಾಗವಾರ, ಮೈಸೂರು ರಸ್ತೆ, ಎಲೆಕ್ಟ್ರಾನಿಕ್‌ ಸಿಟಿ, ಹೊಸೂರು ರಸ್ತೆ, ವಿಮಾನ  ನಿಲ್ದಾಣ ರಸ್ತೆ, ಕೆ.ಆರ್‌. ವೃತ್ತ, ಮಾರುಕಟ್ಟೆ ಎಂ.ಜಿ.ರಸ್ತೆ ಸೇರಿ ಸಾಕಷ್ಟು ಪ್ರದೇಶಗಳಲ್ಲಿ ಭಾರೀ ಸಂಚಾರ ಠಾಣೆ ಉಂಟಾಗಿತ್ತು. ಪರಿಣಾಮ ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸ ಪಟ್ಟರು. ಶಿವಾನಂದ ವೃತ್ತದ ಕೆಳ ಭಾಗದಲ್ಲಿ ನೀರು  ಬಿದ್ದು, ಅದರ ಮಧ್ಯೆಯೇ ಸವಾರರು ವಾಹನ ಚಲಾಯಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.