ಸ್ಪೀಕರ್ ವಿರುದ್ಧ ಹಕ್ಕುಚ್ಯುತಿಗೆ ಚಿಂತನೆ: ಎಚ್ಕೆಪಿ
Team Udayavani, May 31, 2020, 5:22 AM IST
ಬೆಂಗಳೂರು: ಸದನ ಸಮಿತಿಯ ಕಾರ್ಯಭಾರಕ್ಕೆ ಮೊದಲ ಬಾರಿಗೆ ಅಡ್ಡಿಯಾಗಿದ್ದು, ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಚಿಂತನೆ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್. ಕೆ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿ ಭೇಟಿಗೆ ಸ್ಪೀಕರ್ ಅವಕಾಶ ನಿರಾಕರಿಸುವ ಮೂಲಕ ಶಾಸನ ಸಭೆಯ ಕರ್ತವ್ಯಕ್ಕೆ ಧಕ್ಕೆಯುಂಟು ಮಾಡಿದ್ದಾರೆ ಎಂದು ದೂರಿದ ಅವರು, ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಸಂಬಂಧ ಜೂ.2ರ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕವಾಗಿ ಬಹಿರಂಗಪಡಿಸಿ: ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸರ್, ಮಾಸ್ಕ್ , ವೆಂಟಿಲೇಟರ್ ಗಳನ್ನು ಎಷ್ಟು ಹಣಕ್ಕೆ ಖರೀದಿ ಮಾಡಲಾಗಿದೆ ಎಂಬುದರ ಬಗ್ಗೆ ವಿವರವಾದ ವರದಿಯನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಒಪ್ಪಿಸಿ, ಆರೋಗ್ಯ ಮತ್ತು ವೈದ್ಯಕೀಯ ಪರಿಕರಗಳ ಖರೀದಿ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ ಎಂದು ಸಚಿವ ಬಿ.ಶ್ರೀರಾಮುಲುಗೆ ಅವರು ಸವಾಲು ಹಾಕಿದರು.
ಸ್ಪೀಕರ್ ಸ್ಪಷ್ಟನೆ: ವಿಧಾನಮಂಡಲ ಸಮಿತಿಯ ಭೇಟಿ ಹಾಗೂ ಪರಿಶೀಲನೆ ಕೈಗೊಳ್ಳ ಬಾರದು ಎಂದು ಸೂಚಿಸಿದ್ದ ಸಂಬಂಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಸ್ಪಷ್ಟೀಕರಣ ನೀಡಿದೆ. ಮೇಲ್ಕಂಡ ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾ ಗಿದೆಯೇ ಹೊರತು ಯಾವುದೇ ದುರುದ್ದೇಶ ಇಲ್ಲವೆಂದು ಈ ಮೂಲಕ ಸ್ವಷ್ಟಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭ್ರಷ್ಟಾಚಾರ ಸಾಬೀತುಪಡಿಸಲಿ: ಆರೋಗ್ಯ ಪರಿಕರಗಳು ಹಾಗೂ ಉಪಕರಣಗಳ ಖರೀದಿ ಯಲ್ಲಿ ಅವ್ಯವಹಾರ ಆಗಿಲ್ಲ. ಎಲ್ಲವೂ ಪಾರದರ್ಷಕವಾಗಿ ನಡೆದಿದ್ದು, ಈ ಬಗ್ಗೆ ಆರೋಪಿಸುವವರು ಭ್ರಷ್ಟಾಚಾರ ಸಾಬೀತುಪಡಿಸಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಎಚ್. ಕೆ.ಪಾಟೀಲ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಆವರು, ಕೊರೊನಾ ಸೋಂಕು ತಡೆಗಟ್ಟಲು ಕೈಗೊಂಡ ಕ್ರಮಗಳು, ಖರೀದಿಗೆ ಸಂಬಂಧಿಸಿದ ದಾಖಲೆಗಳೆಲ್ಲವೂ ಸಾರ್ವಜನಿಕ ಆಸ್ತಿಯಾಗಿದ್ದು, ಇಲಾಖೆ ಅಂತರ್ಜಾಲ ತಾಣ (ಪಬ್ಲಿಕ್ ಡೊಮೇನ್) ದಲ್ಲಿ ಲಭ್ಯ ಇದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ