ಸಾರಿಗೆ: ವೇತನ ರಹಿತ ರಜೆಗೆ ವಿರೋಧ
Team Udayavani, Jul 11, 2020, 5:22 AM IST
ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳು, ಅಧಿಕಾರಿ ಮತ್ತು ನೌಕರರಿಗೆ ಒಂದು ವರ್ಷ ಕಾಲ ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಿದ್ದು, ಈ ಸಂಬಂಧ ಕೆಎಸ್ಆರ್ಟಿಸಿಯು ಉಳಿದ ಮೂರು ಸಾರಿಗೆ ನಿಗಮಗಳಿಗೆ ಅಭಿಪ್ರಾಯ ತಿಳಿಸುವಂತೆ ಪತ್ರ ಬರೆದಿದೆ. ಕೊರೊನಾ ಸೋಂಕು ಹರಡುತ್ತಿರುವುದರಿಂದ ಬಸ್ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿಲ್ಲ
. ನೌಕರರ ಆರೋಗ್ಯ ಮತ್ತು ನಿಗಮಗಳ ಆರ್ಥಿಕ ದೃಷ್ಟಿಯಿಂದ ಷರತ್ತುಗಳೊಂದಿಗೆ ಒಂದು ವರ್ಷದ ವಿಶೇಷ ರಜೆ ಮಂಜೂರು ಮಾಡಲು ಈ ಆಲೋಚನೆ ಮಾಡಲಾಗಿದೆ. ರಜೆ ಪಡೆದವರ ಹುದ್ದೆಯ ಹಕ್ಕು ನಿಗಮದಲ್ಲೇ ಉಳಿಯಲಿದೆ. ಸಿಬ್ಬಂದಿ ಕೋರಿದರೆ ಮಾತ್ರ ರಜೆ ಮಂಜೂರು ಮಾಡಲು ಉದ್ದೇಶಿಸಲಾಗಿದೆ. ಬಯಸಿದವರಿಗಷ್ಟೇ ರಜೆ ಮಂಜೂರು ಮಾಡಲಾಗುವುದು.
ಈ ಸಂಬಂಧ ಇನ್ನೂ ಆದೇಶ ಆಗಿಲ್ಲ. ಬಿಎಂಟಿಸಿ, ವಾಯವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಂದ ಅಭಿಪ್ರಾಯ ಕೇಳಲಾಗಿದೆ’ ಎಂದು ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸ್ಪಷ್ಟಪಡಿಸಿದ್ದಾರೆ. ಸಾರಿಗೆ ನಿಗಮಗಳ ಈ ಚಿಂತನೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ (ಸಿಐಟಿಯು)ದಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು,
“ನೌಕರರು ಈಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ಷಗಟ್ಟಲೇ ವೇತನ ಇಲ್ಲದ ಪರಿಸ್ಥಿತಿ ನಿರ್ಮಿಸಿದರೆ, ಅವರ ಕುಟುಂಬಗಳನ್ನು ಬೀದಿಗೆ ತಳ್ಳಿದಂತೆ ಆಗಲಿದೆ’ ಎಂದು ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ