ಯುಗಾದಿ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು, ಬೆಲೆ ಏರಿಕೆ ಬಿಸಿ

ಬೆಂಡೆಕಾಯಿ 40 ರೂ., ಕ್ಯಾರೆಟ್‌, ಬೀಟ್‌ ರೋಟ್‌ 30 ರೂ.ಗೆ ಮಾರಾಟವಾಯಿತು

Team Udayavani, Apr 1, 2022, 5:40 PM IST

ಯುಗಾದಿ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು, ಬೆಲೆ ಏರಿಕೆ ಬಿಸಿ

ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಕೆ.ಆರ್‌.ಮಾರುಕಟ್ಟೆ, ಕಲಾಸಿಪಾಳ್ಯ, ಮಲ್ಲೇಶ್ವರ, ಬನಶಂಕರಿ, ಕೆ.ಆರ್‌.ಪುರ, ಗಾಂಧಿ ಬಜಾರ್‌ ಸೇರಿದಂತೆ ಮತ್ತಿತರ ಮಾರುಕಟ್ಟೆಗಳಲ್ಲಿ ಖರೀದಿಯ ಭರಾಟೆ ಜೋರಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿಯೂ ತಾಗಿದೆ.

ಯುಗಾದಿಯ ವಿಶೇಷ ಮಾವು, ಬೇವಿನ ಸೊಪ್ಪಿನ ಖರೀದಿ ಭರಾಟೆ ಜೋರಾಗಿತ್ತು. ಒಂದು ಕಟ್ಟು ಮಾವಿನ ಸೊಪ್ಪು 20 ರೂ. ಮತ್ತು ಬೇವಿನ ಸೊಪ್ಪು 30 ರೂ.ಗೆ ಮಾರಾಟವಾಯಿತು. ಹೂವಿನ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂತು. ಸೇವಂತಿಗೆ ಹೂವು ಕೆ.ಜಿ. 180 ರಿಂದ 200 ರೂ., ಕನಕಾಂಬರ ಹೂವು ಕೆ.ಜಿ.ಗೆ 600 ರೂ., ಮಲ್ಲಿಗೆ ಮೊಗ್ಗು 300 ರೂ.ಗೆ ಮಾರಾಟ ವಾಯಿತು. ಹಾಗೆಯೇ ಕನಕಾಂಬರ ಹೂವು ಮಾರಿಗೆ 80 ರೂ. ಮತ್ತು ಮಲ್ಲಿಗೆ ಹೂವು ಮಾರಿಗೆ 40-50 ರೂ. ವರೆಗೂ ಖರೀದಿ ಆಯಿತು. ಸೇಬು ಹಣ್ಣು ಕೆ.ಜಿ.ಗೆ 110 ರೂ., ದ್ರಾಕ್ಷಿ 75 ರೂ., ಬಾಳೆ ಹಣ್ಣು 40 ರೂ., ಕಿತ್ತಳೆ ಹಣ್ಣು 60 ರೂ., ದಾಳಿಂಬೆ 80 ರೂ.ಗೆ ಮಾರಾಟ ವಾಯಿತು ಎಂದು ವ್ಯಾಪಾರಿಗಳು ತಿಳಿಸಿದರು.

80 ರೂ.ದಾಟಿದ ಬೀನ್ಸ್‌: ಈ ಹಿಂದೆ ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಗ್ರಾಹಕರ ಕೈ ಸುಡುತ್ತಿತ್ತು. ಇದರ ಜತೆಗೆ ಬೀನ್ಸ್‌, ತೊಂಡೆಕಾಯಿ ಸೇರಿದಂತೆ ಮತ್ತಿತರ ತರಕಾರಿಗಳ ಬೆಲೆಗಳು ಶತಕದ ಗಡಿ ದಾಟಿದ್ದವು. ಪ್ರತಿ ಕೆ.ಜಿ.ಗೆ 40 ರಿಂದ 50 ರೂ.ಗೆ ಮಾರಾಟವಾಗುತ್ತಿದ್ದ ಬೀನ್ಸ್‌ ಗುರುವಾರ 60 ರಿಂದ 80 ರೂ.ವರೆಗೂ ಖರೀದಿ ಆಯಿತು. ಬೆಂಡೆಕಾಯಿ 40 ರೂ., ಕ್ಯಾರೆಟ್‌, ಬೀಟ್‌ ರೋಟ್‌ 30 ರೂ.ಗೆ ಮಾರಾಟವಾಯಿತು. ಹಬ್ಬದ ಹಿನ್ನೆಲೆಯಲ್ಲಿ ತರಕಾರಿ
ಬೆಲೆಗಳಲ್ಲಿ ಕೊಂಚ ಏರಿಕೆಯಾಗಿದೆ ಎಂದು ತಳ್ಳುಗಾಡಿ ವ್ಯಾಪಾರಿ ಪೀಣ್ಯದ ಜಗದೀಶ್‌ ಹೇಳುತ್ತಾರೆ.

ಅಕಾಶ್‌ ಮೆಣಸಿನ ಕಾಯಿ ದರ 100-120 ರೂ.
ಹಸಿ ಮೆಣಸಿನ ಕಾಯಿ ಮತ್ತು ಬೀನ್ಸ್‌ ಸೇರಿದಂತೆ ಕೆಲವು ಪದಾರ್ಥಗಳ ಬೆಲೆಗಳಲ್ಲಿ ಮತ್ತೆ ಬೆಲೆ ಏರಿಕೆಯಾಗಿದ್ದು ಈ ಹಿಂದೆ ಮಾರುಕಟ್ಟೆಯಲ್ಲಿ ಹಸಿ ಮೆಣಸಿನ ಕಾಯಿ ಬೆಲೆ ಕೆ.ಜಿ.ಗೆ 50 ರಿಂದ 60 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಹಸಿ ಮೆಣಸಿನ ಕಾಯಿ ಪೂರೈಕೆ ಕಡಿಮೆಯಾಗಿದ್ದು, ಆ ಹಿನ್ನೆಲೆಯಲ್ಲಿ ಉತ್ತಮ ಗುಣಮಟ್ಟದ ಮೆಣನಸಿನ ಕಾಯಿ ಪ್ರತಿ ಕೆ.ಜಿ.ಗೆ 80 ರಿಂದ ರೂ.ಗೂ ಖರೀದಿ ಆಗುತ್ತಿದೆ.

ಆಕಾಶ್‌ ಎಂಬ ವಿಶೇಷ ಮೆಣಸಿನ ಕಾಯಿ ತಳಿಯ ಬೆಲೆ ಪ್ರತಿ ಕೆ.ಜಿ.ಗೆ 100 ರಿಂದ 120 ರೂ.ವರೆಗೂ ಖರೀದಿ ಆಯಿತು. ಆಕಾಶ್‌ ಮೆಣಸಿನ ಕಾಯಿ(ಡೆಮನ್‌ ತಳಿ)ಯನ್ನು ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತ ಕೆಲವು ಪ್ರದೇಶಗಳಲ್ಲಿ ರೈತರು ಬೆಳೆಯುತ್ತಾರೆ.

ಈ ಮೆಣಸಿನಲ್ಲಿ ಹಲವು ಪೌಷ್ಟಿಕಾಂಶದ ಗುಣಗಳಿದ್ದು, ಎಲ್ಲಕ್ಕಿಂತ ಮಿಗಿಲಾಗಿ ನಮ್ಮ ದೇಹದಲ್ಲಿರುವ ಕೋಲೆಸ್ಟ್ರಾಲ್‌ ಬರ್ನ್ ಮಾಡುವ ಶಕ್ತಿ ಈ ಮೆಣಸಿನ ತಳಿಗೆ ಇದೆ ಎನ್ನುತ್ತಾರೆ ಕಲಾಸಿಪಾಳ್ಯ ಮಾರುಕಟ್ಟೆಯ ಹೋಲ್‌ ಸೇಲ್‌ ವ್ಯಾಪಾರಿ ರವಿರಾಜ್‌.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.