BBMP: ನಗರಕ್ಕೆ ಬಿಬಿಎಂಪಿಯೇ ಮೊದಲ ಶತ್ರು: “ಹೈ’ ತರಾಟೆ

ಅನಧಿಕೃತ ಜಾಹಿರಾತು ಫ‌ಲಕಗಳ ಕಡಿವಾಣಕ್ಕೆ ವಿಫ‌ಲ

Team Udayavani, Oct 12, 2023, 9:55 AM IST

5-high-court

ಬೆಂಗಳೂರು: ರಾಜಧಾನಿಯಲ್ಲಿ ಅನಧಿಕೃತ ಜಾಹಿರಾತು ಫ‌ಲಕಗಳ ಹಾವಳಿಗೆ ಕಡಿವಾಣ ಹಾಕಲು ವಿಫ‌ಲವಾಗಿರುವ ಪಾಲಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, “ಬಿಬಿಎಂಪಿ ಬೆಂಗಳೂರಿಗೆ ಮೊದಲ ಶತ್ರುವಾಗಿ ಪರಿಣಮಿಸಿದೆ’ ಎಂದು ಕಟು ಮಾತುಗಳನ್ನು ಹೇಳಿದೆ.

ನಗರದಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಮತ್ತು ಹೋರ್ಡಿಂಗ್‌ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಮಾಯಿಗೇಗೌಡ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಅಧಿಕಾರಿಗಳ ವಿರುದ್ಧ ಕ್ರಮ: ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ ನಗರದಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಮತ್ತು ಹೋರ್ಡಿಂಗ್‌ ಹಾವಳಿ ತಡೆಯಲು ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾ ಗು ವುದು. ಈಗಾಗಲೇ ಅಂತಹ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿದೆ. ಈ ವಿಚಾರವನ್ನು ಪಾಲಿಕೆ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿದೆ ಎಂದು ಹೇಳಿದರು.

ನಿಖರ ಮಾಹಿತಿ ಇಲ್ಲ: ಈ ವೇಳೆ ಅರ್ಜಿದಾರರೊಬ್ಬರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿ, ನಗರ ದಲ್ಲಿ ವಾಣಿಜ್ಯ ಜಾಹಿರಾತು ಫ‌ಲಕಗಳು ಅಳವಡಿಸ ಬೇಕಾದರೆ ನಿರ್ದಿಷ್ಟ ಶುಲ್ಕ ಪಾವತಿಸಿ ಆಯುಕ್ತ ರಿಂದ ಅನುಮತಿ ಪಡೆದುಕೊಳ್ಳಬೇಕು. ಆದರೆ, ಈ ರೀತಿ ಎಷ್ಟು ಅನುಮತಿಗಳನ್ನು ನೀಡಲಾಗಿದೆ, ಅದರಿಂದ ಶುಲ್ಕದ ರೂಪದಲ್ಲಿ ಎಷ್ಟು ಹಣ ಪಾಲಿಕೆ ಗೆ ಬಂದಿದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ತೆರಿಗೆ ಸಂಗ್ರಹಿಸಲು ವಿಫ‌ಲ: ಅದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಅನಧಿಕೃತ ಜಾಹಿರಾತು ಫ‌ಲಕಗಳಿಗೆ ಅವಕಾಶ ಮಾಡಿಕೊಡುವುದು ಪಾಲಿಕೆಗೆ ಕೋಟ್ಯಂತರ ರೂಪಾಯಿ ಆದಾಯ ಖೋತಾ ಆಗುವುದರ ಜೊತೆಗೆ ನಗರದ ಸೌಂದರ್ಯ ವಿಕಾರಗೊಳ್ಳುವುದಕ್ಕೂ ದಾರಿ ಆಗುತ್ತದೆ. ಅಕ್ರಮ ಜಾಹಿರಾತು ಫ‌ಲಕಗಳಿಂದ ಪಾಲಿಕೆಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಶುಲ್ಕ ಪಡೆದುಕೊಳ್ಳಲು ಅವಕಾಶವಿದ್ದರೂ ಅದನ್ನು ಪಾಲಿಕೆ ಕೈಚೆಲ್ಲಿದಂತಿದೆ. ಒಂದು ಕಡೆ ಆದಾಯ ಬರುವುದನ್ನು ತಪ್ಪಿಸಿಕೊಳ್ಳುವ ಪಾಲಿಕೆ, ಮತ್ತೂಂದೆಡೆ ನಗರದ ಮೂಲಸೌಕರ್ಯಗಳ ಅಭಿವೃದ್ಧಿ ವಿಚಾರ ಬಂದಾಗ ಹಣ ಇಲ್ಲವೆಂದು ಬೆನ್ನು ತಿರುಗಿಸುತ್ತದೆ, ಕೈ ಎತ್ತುತ್ತದೆ. ತೆರಿಗೆ ಸಂಗ್ರಹಿಸಲು ವಿಫ‌ಲವಾಗಿರುವ ಪಾಲಿಕೆ, ಅದರ ಹೊರೆಯನ್ನು ನಾಗರಿಕರ ಮೇಲೆ ಹೊರಿಸುತ್ತಿದೆ. ಈ ರೀತಿ “ಬಿಬಿಎಂಪಿ ನಗರಕ್ಕೆ ಮೊದಲ ಶತ್ರುವಾಗಿ ಪರಿಣಮಿಸಿದೆ’ ಎಂದು ಖಾರವಾಗಿ ನುಡಿಯಿತು.

ಮೂರು ವರ್ಷದ ವರದಿ ಕೊಡಿ: ಕಳೆದ ಮೂರು ವರ್ಷಗಳಲ್ಲಿ ವಾಣಿಜ್ಯ ಜಾಹಿರಾತು ಫ‌ಲಕಗಳ ಅಳವಡಿಕೆಗೆ ಅನುಮತಿ ಕೋರಿ ಆಯುಕ್ತರಿಗೆ ಎಷ್ಟು ಪ್ರಸ್ತಾವನೆಗಳು ಬಂದಿವೆ. ಅವುಗಳನ್ನು ಎಷ್ಟು ಪ್ರಸ್ತಾವನೆಗಳಿಗೆ ಅನುಮತಿ ನೀಡಲಾಗಿದೆ. ಅನುಮತಿ ನೀಡಲಾದ ಪ್ರಸ್ತಾವನೆಗಳಿಂದ ಕಟ್ಟಿಸಿಕೊಳ್ಳಲಾದ ಒಟ್ಟು ಶುಲ್ಕದ ಮೊತ್ತವೆಷ್ಟು. ಅವಧಿ ಮುಗಿದ ಬಳಿಕವೂ ಎಷ್ಟು ಜಾಹಿರಾತು ಫ‌ಲಕಗಳನ್ನು ಮುಂದುವರಿ ಸಲಾಗಿದೆ. ಅದರ ವಿರುದ್ಧ ಕೈಗೊಂಡ ಕ್ರಮ ಗಳೇನು, ಅನುಮತಿ ಪಡೆದು ಶುಲ್ಕ ಕಟ್ಟದವರ ವಿರುದ್ಧ ಯಾವ ಕ್ರಮ ಜರುಗಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಸಮಗ್ರ ವರದಿ ಸಲ್ಲಿಸಬೇಕು ಎಂದು ಪಾಲಿಕೆಗೆ ನಿರ್ದೇಶನ ನೀಡಿದ ಹೈಕೋರ್ಟ್‌ ವಿಚಾರಣೆಯನ್ನು ನವೆಂಬರ್‌ 28ಕ್ಕೆ ಮುಂದೂಡಿತು.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.