ಅನವಶ್ಯಕವಾಗಿ ವಾಹನ ಬಳಸಿದರೆ ಜಪ್ತಿ: ಆಯುಕ್ತ
Team Udayavani, Jul 5, 2020, 5:25 AM IST
ಬೆಂಗಳೂರು: ಕೋವಿಡ್ 19 ಸೋಂಕು ಹಬ್ಬುವುದಕ್ಕೆ ಕಡಿವಾಣ ಹಾಕಲು ಸರ್ಕಾರ ಶನಿವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದು, ಈ ಅವಧಿಯಲ್ಲಿ ಅನವಶ್ಯಕವಾಗಿ ವಾಹನ ಬಳಸಿದರೆ ವಾಹನ ಜಪ್ತಿ ಆಗಲಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್ಅನಿಲ್ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಗರದ ಜನತೆ ನಿಯಮ ಮೀರಿ ಅನಗತ್ಯವಾಗಿ ಓಡಾಡಿದರೆ ಕೇಸು ದಾಖಲಾಗುತ್ತದೆ. ಲಾಕ್ಡೌನ್ ಇರುವುದ ರಿಂದ ಅಗತ್ಯ ಸೇವೆಗಳ ವಾಹನ ಹೊರತುಪಡಿಸಿ ಬೇರೆ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಒಂದು ವೇಳೆ ಲಾಕ್ಡೌನ್ ನಿಯಮ ಮೀರಿ ವಾಹನಗಳನ್ನು ಹೊರಗೆ ತಂದಲ್ಲಿ ಅಂತಹ ವಾಹನಗಳನ್ನು ಪೊಲೀಸರು ಜಪ್ತಿ ಮಾಡಲಿದ್ದಾರೆ.
ನಂತರ ನ್ಯಾಯಾಲಯದ ಮೂಲಕ ವಾಹನ ಗಳನ್ನು ಬಿಡಿಸಿಕೊಳ್ಳಬೇಕಾಗುತ್ತದೆ. ಈ ವೇಳೆ ನ್ಯಾಯಾಲಯ ಸೂಚಿಸಿದಷ್ಟು ದಂಡವನ್ನೂ ಪಾವತಿಸಬೇಕು ಎಂದರು. ಭಾನುವಾರ ಅಗತ್ಯ ಸೇವೆಗಳ ಮಾರಾಟಕ್ಕೆ ಮಾತ್ರ ಅವಕಾಶ. ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ, ಮಾಂಸದಂಗಡಿ, ಔಷಧಿ ಮಳಿಗೆ ತೆರೆದಿರುತ್ತವೆ. ಸಾರ್ವಜನಿಕರು ನಿಯಮ ಪಾಲಿಸ ಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ