ವಾಶಿಂಗ್‌ ಮಷಿನ್‌ ದುರಸ್ತಿ; 3 ಲಕ್ಷ ಪರಿಹಾರ ಕೇಳಿದ ವ್ಯಕ್ತಿ


Team Udayavani, Jun 13, 2022, 12:05 PM IST

8

ಬೆಂಗಳೂರು: ವಾಶಿಂಗ್‌ ಮಷಿನ್‌ ವಿಸ್ತೃತ (ಎಕ್ಸೈಂಡೆಡ್‌) ಸೇವೆಯನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ತನ್ನ ಪತ್ನಿ ಒತ್ತಾಯಪೂರ್ವಕವಾಗಿ ಕೈಯಿಂದ ಬಟ್ಟೆಗಳನ್ನು ತೊಳೆಯುವಂತಾಗಿದೆ. ಇದರಿಂದ ಆಕೆಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಇದಕ್ಕೆ ಕಾರಣವಾದ ಎಲೆಕ್ಟ್ರಾನಿಕ್‌ ಕಂಪೆನಿಯಿಂದ 3.7 ಲಕ್ಷ ರೂ. ಪರಿಹಾರ ಕಲ್ಪಿಸುವಂತೆ ಗ್ರಾಹಕರೊಬ್ಬರು ವ್ಯಾಜ್ಯಗಳ ಪರಿಹಾರ ನ್ಯಾಯಾಲಯ (ಕಂಜೂಮರ್‌ ಕೋರ್ಟ್‌) ಮೆಟ್ಟಿಲೇರಿದ ಪ್ರಕರಣ ನಡೆದಿದೆ.

ಬೆಂಗಳೂರು ನಗರ 2ನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ಇಲೆಕ್ಟ್ರಾನಿಕ್‌ ತಯಾರಿಕಾ ಕಂಪೆನಿ ದೂರುದಾರನಿಗೆ 20,015 ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ಬಲಗೆರೆಯ ನಿವಾಸಿ 2011ರಲ್ಲಿ ವೈಟ್‌ ಫೀಲ್ಡ್‌ನಲ್ಲಿರುವ ಇಲೆಕ್ಟ್ರಾನಿಕ್‌ ಕಂಪೆನಿಯೊಂದರ ಫ್ರಂಟ್‌ ಲೋಡ್‌ ಫ‌ುಲ್‌ ಆಟೋಮ್ಯಾಟಿಕ್‌ ವಾಶಿಂಗ್‌ ಮಷಿನ್‌ ಖರೀದಿಸಿದ್ದರು. ಈ ವೇಳೆ 5,015ರೂ. ಹೆಚ್ಚುವರಿ ಹಣ ನೀಡಿ 2 ವರ್ಷದ ವಿಸ್ತೃತ ಸೇವೆ ಪಡೆದುಕೊಂಡಿದ್ದರು. ಇದರ ಅವಧಿಯು 2018ರಿಂದ 2020 ವರೆಗೆ ಇತ್ತು. ಷರತ್ತಿನ ಅನ್ವಯ ಎರಡು ವರ್ಷದ ಅವಧಿಯಲ್ಲಿ ಉಚಿತವಾಗಿ ಗ್ರಾಹಕರಿಗೆ ಸೇವೆಯನ್ನು ಸಂಸ್ಥೆಯು ತ್ವರಿತವಾಗಿ ನೀಡಬೇಕಿತ್ತು. ಈ ನಡುವೆ ದೂರುದಾರ ಖರೀದಿಸಿದ ವಾಶಿಂಗ್‌ ಮಷಿನ್‌ ಓವರ್‌ ಹಿಟ್‌ನಿಂದಾಗಿ ಡೋರ್‌ ಹಾಳಾಗಿದ್ದು, ಬಟ್ಟೆಗಳು ಹರಿದು ಹೋಗುತ್ತಿತ್ತು. ಈ ಬಗ್ಗೆ ಎಲೆಕ್ಟ್ರಾನಿಕ್‌ ಸಂಸ್ಥೆಯ ಸರ್ವೀಸ್‌ ಸೆಂಟರ್‌ಗೆ ದೂರು ದಾಖಲಿಸಿದ್ದರು.

ಸತತ ಅನೇಕ ಬಾರಿ ದೂರು ನೀಡಿದ ಬಳಿಕ ಸರ್ವೀಸ್‌ ಸೆಂಟರ್‌ ಸಿಬ್ಬಂದಿ ಭೇಟಿ ಮಾಡಿ ವಾಶಿಂಗ್‌ ಮಷಿನ್‌ ಫೋಟೋ ತೆಗೆದುಕೊಂಡು ಹೋಗಿದ್ದಾರೆ. ಅಂದಿನಿಂದ 2020ರ ಜನವರಿ ತನಕ ಸರ್ವೀಸ್‌ ಸೆಂಟರ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಬಗ್ಗೆ ಸರ್ವೀಸ್‌ ಸೆಂಟರ್‌ಗೆ ಮೇಲ್‌ ಮೂಲಕ ದೂರು ಸಹ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಗ್ರಾಹಕರ ಕೋರ್ಟ್‌ ಮೊರೆ ಹೋಗಿದ್ದಾರೆ.

ಕೋರಿದ್ದು 3 ಲಕ್ಷ: ದೂರುದಾರರು ಕಂಪೆನಿಯಿಂದ ಒಟ್ಟು 3.7 ಲಕ್ಷ ರೂ. ಪರಿಹಾರ ಕೋರಿ ಪ್ರಕರಣವನ್ನು ದಾಖಲಿಸಿದ್ದಾರೆ. ದೂರಿನಲ್ಲಿ 5015 ರೂ. ಸರ್ವಿàಸ್‌ ವಾರೆಂಟಿ ವಿಸ್ತರಿಸಿದ ಮೊತ್ತಕ್ಕೆ ಶೇ.12 ಬಡ್ಡಿ, ಡೋರ್‌ ಗ್ಲಾಸ್‌ 562 ರೂ., ವಾಶಿಂಗ್‌ ಮಷಿನ್‌ ಹಾಳಾದ ಸಮಯದಲ್ಲಿ ಬಟ್ಟೆಗಳನ್ನು ಕೈನಲ್ಲಿ ತೊಳೆದಿರುವುದರಿಂದ ಹೆಂಡತಿಗೆ ಬೆನ್ನು ನೋವು ಉಂಟಾಗಿರುವುದರ ಪರಿಹಾರ 2 ಲಕ್ಷ, ವ್ಯಾಜ್ಯ ಸಂಬಂಧಿಸಿದಂತೆ 1 ಲಕ್ಷ ರೂ. ಪರಿಹಾರ ಕೋರಿದ್ದಾರೆ.

ಸಿಕ್ಕಿದ್ದು 20,015 ರೂ. ಪರಿಹಾರ: ನ್ಯಾಯಾಲಯ ಎರಡು ಕಡೆ ವಾದ ಪರಿಶೀಲನೆ ನಡೆಸಿ, ದೂರುದಾರರು ಖರೀದಿಸಿದ 2 ವರ್ಷದ ಸರ್ವೀಸ್‌ ವಾರೆಂಟಿ ಮೊತ್ತ 5,019ರೂ.ಗೆ ದೂರು ದಾಖಲಾದ ದಿನದಿಂದ ಪರಿಹಾರ ಪಾವತಿಯಾಗುವವರೆಗೆ ಶೇ.9 ಬಡ್ಡಿ ದರದಲ್ಲಿ ಹಣ ಹಿಂದಕ್ಕೆ, ಜತೆಗೆ ಪರಿಹಾರವಾಗಿ 10,000 ರೂ. ಮತ್ತು 5,000 ರೂ. ವ್ಯಾಜ್ಯಕ್ಕೆ ಸಂಬಂಧಿಸಿದ ಖರ್ಚು ಸೇರಿದಂತೆ ಒಟ್ಟು 20,015 ರೂ ನೀಡುವಂತೆ ತೀರ್ಪು ನೀಡಿದೆ.

ಟಾಪ್ ನ್ಯೂಸ್

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.