ಟೋಟಲ್‌ ಸ್ಟೇಷನ್‌ ಸರ್ವೆ ಅವ್ಯವಹಾರದಲ್ಲಿ ಅಧಿಕಾರಿ?


Team Udayavani, Jul 2, 2020, 5:44 AM IST

total-sation

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳ ವಿಸ್ತೀರ್ಣ ಪತ್ತೆಗೆ ನಡೆಸಲಾದ ಟೋಟಲ್‌ ಸ್ಟೇಷನ್‌ ಸರ್ವೆ ಆಧರಿಸಿ ವ್ಯತ್ಯಾಸ ವಿಸ್ತೀರ್ಣ ತೆರಿಗೆ ನಿಗದಿ ಮಾಡುವುದರಲ್ಲಿ ಆಗಿರುವ ಅವ್ಯವಹಾರದಲ್ಲಿ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರ ಸಹೋದರರ ಹೆಸರು (ಅವರೂ ಅಧಿಕಾರಿ) ಕೇಳಿಬರುತ್ತಿದ್ದು, ಇದರಿಂದಲೇ ವರದಿ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಟೋಟಲ್‌ ಸ್ಟೇಷನ್‌ ಸರ್ವೆ ವರದಿಗೆ ಸಂಬಂಧಿಸಿದಂತೆ ಜೂನ್‌ 12 ಮತ್ತು  30ರಂದು ಎರಡು ಬಾರಿ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ಕೌನ್ಸಿಲ್‌ ಸಭೆಯಲ್ಲಿ ಟೋಟಲ್‌ ಸ್ಟೇಷನ್‌ ಸರ್ವೆಯ ಬಗ್ಗೆ ವರದಿ ಮಂಡನೆ ಮಾಡಿದ್ದರು. “ಈ ಅವ್ಯವಹಾರದ ಹಿಂದೆ ಕಂದಾಯ ವಿಭಾಗದ ಹಿರಿಯ ಅಧಿಕಾರಿಯ ಸಹೋದರರೊಬ್ಬರು ಬಿಬಿಎಂಪಿಯ ವಲಯ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿದ್ದು, ಅವರೂ ಇದರಲ್ಲಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ವರದಿ ನೀಡುವುದಕ್ಕೆ ವಿಳಂಬವಾಗುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ಪಾಲಿಕೆ ಸದಸ್ಯರೊಬ್ಬರು ಹೇಳಿದರು.

ಇದಕ್ಕೆ ಪುಷ್ಟಿ ನೀಡುವಂತೆ ಎರಡೆರಡು ಬಾರಿ ವರದಿ ಮಂಡನೆಯಾದರೂ, ಇದರಲ್ಲಿ ಪೂರ್ಣ ಮಾಹಿತಿ ನೀಡದೆ ಇರುವುದು ಅನುಮಾನಕ್ಕೆ ಕಾರಣವಾಗಿದೆ. ಬಿಬಿಎಂಪಿಗೆ ಟೋಟಲ್‌ ಸ್ಟೇಷನ್‌ ಸರ್ವೆ ಒಟ್ಟು  321 ಕೋಟಿ ರೂ. ನಷ್ಟ ಉಂಟಾಗಿದೆ. ಆದರೆ, ಜೂನ್‌ 12ಕ್ಕೆ ಮಂಡನೆಯಾದ ವರದಿಯಲ್ಲಿ ಅಂದಾಜು 41.47 ಕೋಟಿ ರೂ. ಎಂದು ಉಲ್ಲೇಖ ಮಾಡಲಾಗಿತ್ತು. ಒಟ್ಟು ಮೊತ್ತ ಉಲ್ಲೇಖ ಮಾಡಿರಲಿಲ್ಲ. ಅದೇ ರೀತಿ, ಜೂನ್‌ 30ಕ್ಕೆ ಮಂಡನೆ  ಮಾಡಿದ ವರದಿಯಲ್ಲಿ 2017-18ನೇ ಸಾಲಿನವರಗೆ ಮಾತ್ರ ವರದಿಯನ್ನು ಪರಿಶೀಲನೆ ಮಾಡಲಾಗಿದ್ದು, ಇದರಲ್ಲಿ 251 ಕೋಟಿ ರೂ. ನಷ್ಟ ಉಂಟಾಗಿದೆ. ಉಳಿದ ವರದಿಯನ್ನು ಮುಂದಿನ ಕೌನ್ಸಿಲ್‌ ಸಭೆಯಲ್ಲಿ ಮಂಡನೆ ಮಾಡುವುದಾಗಿ  ಆಯುಕ್ತರು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?: ನಗರದಲ್ಲಿ ಆಸ್ತಿ ತೆರಿಗೆ ಮಾಲಿಕರು ಸ್ವಯಂಘೋಷಿತ ಆಸ್ತಿ ತೆರಿಗೆ ವ್ಯವಸ್ಥೆ (ಎಸ್‌ಎಎಸ್‌) ಅಡಿ ತಪ್ಪು ಮಾಹಿತಿ ನೀಡಿರುವುದನ್ನು ಪತ್ತೆಹಚ್ಚುವ ಉದ್ದೇಶದಿಂದ ಬಿಬಿಎಂಪಿ ಟೋಟಲ್‌ ಸ್ಟೇಷನ್‌ ಸರ್ವೆ  (ಟಿಎಸ್‌ಎಸ್‌) ಯೋಜನೆಯನ್ನು ಪರಿಚಯಿಸಿತ್ತು. ಆದರೆ, ಇದರಲ್ಲಿಯೂ ಅವ್ಯವಹಾರ ನಡೆದಿದ್ದು, ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವುದ ರಿಂದ ಪಾಲಿಕೆಗೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆ ಎಂದು ವಿರೋಧ ಪಕ್ಷದ ಮಾಜಿ  ನಾಯಕ ಪದ್ಮನಾಭರೆಡ್ಡಿ ಅವರು ಆರೋಪಿಸಿದ್ದರು. ಈ ಸಂಬಂಧ ಬಿಬಿಎಂಪಿ ಆಯುಕ್ತರು ಪ್ರತ್ಯೇಕ ಉಪ ಸಮಿತಿ ರಚಿಸಿದ್ದರು.

ನಗರದಲ್ಲಿನ ಕಟ್ಟಡಗಳ ಟೋಟಲ್‌ ಸ್ಟೇಷನ್‌ ಸರ್ವೆ ನಡೆದ ನಂತರದ ಎಸ್‌ಎಎಸ್‌ ಹಾಗೂ ಟಿಎಸ್‌ ಎಸ್‌ನಲ್ಲಿನ ವ್ಯತ್ಯಾಸದ ಆಧಾರದ ಮೇಲೆ ಆಸ್ತಿ ತೆರಿಗೆ  ಪರಿಷ್ಕರಿಸಿ, ವಿಶೇಷ ಸೂಚನಾ ಪತ್ರ ನೀಡಲಾಗುತ್ತಿದೆ. ಆದರೆ, ಈ ರೀತಿ ಮರುಪರಿಶೀಲನೆ ಮಾಡುವ ಹಂತದಲ್ಲಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು 2019ರ  ಅಕ್ಟೋಬರ್‌ನಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ, ಈ ಸಂಬಂಧ ಆತಂರಿಕ ತನಿಖೆ ನಡೆದಿದ್ದು, ಅವ್ಯವಹಾರದ ಬಗ್ಗೆ ಹಂತ ಹಂತವಾಗಿ ವರದಿ ಮಂಡನೆಯಾಗುತ್ತಿದೆ.

ಟೋಟಲ್‌ ಸ್ಟೇಷನ್‌ ಸರ್ವೆ ವರದಿ ಸಂಬಂಧ ಇದೇ ಶನಿವಾರ ಮೇಯರ್‌ ಎಂ. ಗೌತಮ್‌ಕುಮಾರ್‌ ಹಾಗೂ ವಿರೋಧ ಪಕ್ಷದ ಮಾಜಿ ನಾಯಕ ಪದ್ಮನಾಭ ರೆಡ್ಡಿ ಅವರೊಂದಿಗೆ ಚರ್ಚೆ ಮಾಡಲಾಗುವುದು. ಸಂಪೂರ್ಣ ವರದಿಯನ್ನು  ಮುಂದಿನ ಕೌನ್ಸಿಲ್‌ ಸಭೆಯಲ್ಲಿ ಮಂಡನೆ ಮಾಡಲಾಗುವುದು. 
-ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.