ಗ್ರಾಮ ಠಾಣಾ ಆಸ್ತಿ ಸಮೀಕ್ಷೆಗೆ ಮಹಿಳಾ ಸ್ವಸಹಾಯ ಸಂಘಗಳು


Team Udayavani, Jul 4, 2020, 6:03 AM IST

grama-thana

ಬೆಂಗಳೂರು: ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಆಸ್ತಿಗಳ ಅಳತೆ ಹಾಗೂ ನೋಂದಣಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮುಂದಾಗಿದೆ.  ಕೋವಿಡ್‌ 19 ಲಾಕ್‌ಡೌನ್‌ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ದುಡಿಮೆಯ ಮಾರ್ಗ ಕಲ್ಪಿಸಿರುವ ಇಲಾಖೆ ಈ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶಗಳ ಆಸ್ತಿಗಳನ್ನು  ತೆರಿಗೆ ವ್ಯಾಪ್ತಿಗೆ ತರುವ ಗುರಿ ಹೊಂದಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಜತೆಗೂಡಿ ರಾಮನಗರದಲ್ಲಿ ಪ್ರಾಯೋಗಿ ಕವಾಗಿ ಈ ಯೋಜನೆ ಅನುಷ್ಠಾನ  ಗೊಳಿಸುತ್ತಿರುವ ಇಲಾಖೆ ಮುಂದೆ ರಾಜ್ಯಾದ್ಯಂತ ವಿಸ್ತರಿಸಲು ಯೋಜನೆ ರೂಪಿಸಿದೆ. ಖಾಲಿ ನಿವೇಶನ,  ಮನೆ, ವಾಣಿಜ್ಯ ಕಟ್ಟಡಗಳನ್ನು ಅಳತೆ ಮಾಡಿ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡುವು ದು, ಮಾಲೀಕರ ಸಹಿ ಹಾಗೂ ಮೇಲ್ವಿಚಾರಕ ಸಹಿ ಪಡೆಯುವುದು ಮಹಿಳಾ  ಸ್ವಸಹಾಯ ಸಂಘಗಳಿಗೆ ವಹಿಸಲಾಗಿದೆ.

ಮುಂದಿನ ಹಂತದಲ್ಲಿ ಗ್ರಾಮ ಪಂಚಾಯಿತಿಗಳು ಆಸ್ತಿಗಳಿಗೆ ತೆರಿಗೆ ನಿಗದಿಪಡಿಸಲಿದೆ. ಒಂದು ಮನೆಯ ಅಳತೆಗೆ 50 ರೂ.ನಂತೆ ಆಸ್ತಿ ಮಾಲೀಕರೇ ಮಹಿಳಾ ಸ್ವಸಹಾಯ ಸಂಘಗಗಳಿಗೆ ಹಣ  ನೀಡಬೇಕು. ಕೋವಿಡ್‌ 19 ಸಂದರ್ಭದಲ್ಲಿ ಪ್ರತಿ ಸದಸ್ಯರು 15 ರಿಂದ 20 ಸಾವಿರ ರೂ.ವರೆಗೆ ಆದಾಯ ಗಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆಸ್ತಿ ತೆರಿಗೆ ಪಾವತಿಯಾಗದೆ ಅಭಿವೃದ್ಧಿಗೂ ಹಿನ್ನೆಡೆಯುಂಟಾಗುತ್ತಿದ್ದು,

ಪ್ರತಿ ಆಸ್ತಿಯ ಅಳತೆ  ಮತ್ತು ನೋಂದಣಿ ಮಾಡಿಸಿ ಅದನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ತೆರಿಗೆ ವ್ಯಾಪ್ತಿಗೆ ತಂದು ಪ್ರತಿವರ್ಷ ಸರ್ಕಾರಕ್ಕೆ ತೆರಿಗೆ ಪಾವತಿಯಾಗುವಂತೆ ನೋಡಿಕೊಳ್ಳುವುದು ಇದರ ಉದ್ದೇಶ. ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ಮನೆಗಳು  ಆಸ್ತಿ ತೆರಿಗೆ ಪಾವತಿಸುತ್ತಿಲ್ಲ. ಜತೆಗೆ ಸಾಕಷ್ಟು ಮನೆಗಳ ಕಟ್ಟಡದ ಅಳತೆಯೂ ಪಂಚಾಯಿತಿಯಲ್ಲಿ ದಾಖಲಾಗಿಲ್ಲ. ಹೀಗಾಗಿ, ಮರು ಸಮೀಕ್ಷೆಗೆ ಸರ್ಕಾರ ತೀರ್ಮಾನಿಸಿ ಕೌಶಲ್ಯಾಭಿವೃದ್ಧಿ ಉದ್ಯಮಶೀ ಲತೆ ಮತ್ತು ಜೀವನೋಪಾಯ  ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಈ ಜವಾಬ್ದಾರಿ ವಹಿಸಿದೆ.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಪ್ರತಿ ಆಸ್ತಿಯ ಅಳತೆ ಮತ್ತು  ನೋಂದಣಿ ಮಾಡುವ ಬಗ್ಗೆ ತರಬೇತಿ ನೀಡಿ ಈ ಯೋಜನೆ ಪ್ರಾರಂಭಿಸಲಾಗಿದ್ದು, ರಾಜ್ಯಾದ್ಯಂತ ವಿಸ್ತರಿಸಿ ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಗ್ರಾಮೀಣ ಭಾಗದ ಆಸ್ತಿಗಳ ಅಳತೆ ಮತ್ತು ನೋಂದಣಿ ಕಾರ್ಯ  ಪೂರ್ಣಗೊಳಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಆದಾಯ ಗಳಿಕೆಗೆ ಅವಕಾಶ: ಈ ಕುರಿತು ರಾಮ  ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಪಾಶಾ, ಗ್ರಾಮೀಣ ಭಾಗಗಳಲ್ಲಿ ಬಹಳಷ್ಟು ವರ್ಷಗಳಿಂದ ಆಸ್ತಿ ನೋಂದಣಿ, ತೆರಿಗೆ ಪರಿಷ್ಕರಣೆ ಆಗಿರಲಿಲ್ಲ.  ಕೋವಿಡ್‌ 19 ಸಂದರ್ಭದಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಮಹಿಳಾ ಸ್ವಸಹಾಯ ಸಂಘಗಳು ಸಂಕಷ್ಟಕ್ಕೆ ಸಿಲುಕಿದ್ದವು. ಹೀಗಾಗಿ, ಅವರಿಗೂ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲು ಈ ಕಾರ್ಯಕ್ರಮ ರೂಪಿಸಲಾಯಿತು.  ಈಗಾಗಲೇ ರಾಮನಗರದ ಐದಾರು ಪಂಚಾಯಿತಿಗಳಲ್ಲಿ ಶೇ.90ರಷ್ಟು  ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಕೈಲಾಂಚಾ ಹೋಬಳಿಯಲ್ಲಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು 15 ರಿಂದ 20 ಸಾವಿರ ರೂ.ವರೆಗೂ ಆದಾಯ  ಗಳಿಸಿದ್ದಾರೆಂದು ವಿವರಿಸುತ್ತಾರೆ.

ಇದೊಂದು ವಿನೂತನ ಪ್ರಯೋಗ. ಕೋವಿಡ್‌ 19 ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ದುಡಿಮೆ ಮಾಡಲು ಅವಕಾಶ ಕಲ್ಪಿಸಲಾಯಿತು. ಗ್ರಾಮೀಣ ಭಾಗದ ಆಸ್ತಿ ಅಳತೆ ಮತ್ತು ನೋಂದಣಿಯ ಹೊಣೆಗಾರಿಕೆ ವಹಿಸಲಾಯಿತು. ರಾಮನಗರದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಯಶಸ್ವಿಯಾಗಿದ್ದು ರಾಜ್ಯಾದ್ಯಂತ ವಿಸ್ತರಿಸಲಾಗುವುದು.
-ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು.

* ಎಸ್.‌ ಲಕ್ಷಿನಾರಾಯಣ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.