ಜನರ ಬಳಿ ಜನಸೇವಕನಾಗಿ ಕೆಲಸ ಮಾಡುತ್ತಿದ್ದೇನೆ: ವಸತಿ ಸಚಿವ ವಿ.ಸೋಮಣ್ಣ
Team Udayavani, Jul 7, 2022, 3:21 PM IST
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂತರಪಾಳ್ಯದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕನಕಭವನ, ಚಂದ್ರಲೇಔಟ್ ಪ್ರಾಥಮಿಕ ಆರೋಗ್ಯ ಕೇಂದ್ರ, ಸ್ಪೆಕ್ಟ್ರಮ್ ಬೀದಿ ದೀಪಗಳ ಕಂಟ್ರೋಲ್ ರೂಮ್, ಎಂ.ಸಿ.ಬಡಾವಣೆ ಆಸ್ಪತ್ರೆ ಹಾಗೂ ಅಗ್ರಹಾರ ದಾಸರಹಳ್ಳಿ ಆಸ್ಪತ್ರೆ ಕಾಮಗಾರಿಗಳನ್ನ ಶಾಸಕ,ವಸತಿ ಸಚಿವರಾದ ವಿ.ಸೋಮಣ್ಣರವರುಪ್ರಗತಿ ಪರಿಶೀಲನೆ ಮಾಡಿದರು.
ವಿಶೇಷ ಆಯುಕ್ತರಾದ ತುಲಸಿ ಮದ್ದಿನೇನಿ, ವಿಶೇಷ ಆಯುಕ್ತರಾದ ತ್ರಿಲೋಕ ಚಂದ್ರ,ವಲಯ ಆಯುಕ್ತರಾದ ದೀಪಕ್, ಮುಖ್ಯ ಅಭಿಯಂತರಾದ ಡೊಡ್ಡಯ್ಯ, ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡರವರು,ಕುರುಬ ಸಮಾಜ ಮುಖಂಡರಾದ ಟಿ.ವಿ.ಬಳಗಾವಿ,ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷರಾದ ಡಾ|ಎಂ.ಸೋಮಶೇಖರ್,ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರಾಮಪ್ಪ,ಶ್ರೀಧರ್ ರವರು ವರು ಭಾಗವಹಿಸಿದ್ದರು.
ಸಚಿವ ವಿ.ಸೋಮಣ್ಣ ಮಾತನಾಡಿ ಜನ ಸೇವೆಯೆ ಜನಾರ್ಧನ ಸೇವೆ ,ಸೋಮಣ್ಣ ಎಂದರೆ ಕೆಲಸ,ಕೆಲಸವೆಂದರೆ ಸೋಮಣ್ಣ .ನಗರ ಬೆಳದಂತೆ ಸಮಸ್ಯೆಗಳು ನಿರಂತರ ಅದರೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು ಎಂದು ಗೋವಿಂದರಾಜನಗರ ವಿಧಾನಸಭಾ ಹಲವಾರು ಯೋಜನೆಗಳು ರೂಪಿಸಲಾಗಿದೆ.ಶಿಕ್ಷಣ,ಆರೋಗ್ಯ ಮತ್ತು ಪರಿಸರದ ವಿಶೇಷವಾಗಿ ಗಮನಹರಿಸಲಾಗಿದೆ .ಪಂತರಪಾಳ್ಳದಲ್ಲಿ 200ಹಾಸಿಗೆ ಮತ್ತು ದಾಸರಹಳ್ಳಿ 290ಹಾಸಿಗೆ ಸಾಮ್ಯರ್ಥವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೂರು ತಿಂಗಳಲ್ಲಿ ಲೋಕರ್ಪಣೆಯಾಗಲಿದೆ.ಆರ್ಥಿಕವಾಗಿ ಹಿಂದುಳಿದ ಮಕ್ಕಳು ಐ.ಎಎಸ್. ಮತ್ತು ಐ.ಪಿ.ಎಸ್.ಅಧಿಕಾರಿಯಾಗಬೇಕು ಮಕ್ಕಳ ಕನಸು, ಅವರ ಶಿಕ್ಷಣ ಆಸೆ ಈಡೇರಿಸಲು ದಾಸಶೇಷ್ಠ ಕನಕದಾಸರ ಸ್ಮರಣೆಯಲ್ಲಿ ಕನಕ ಭವನ ನಿರ್ಮಿಸಲಾಗಿದೆ .ಇದೇ ತಿಂಗಳು 15ರಂದು ಮುಖ್ಯಮಂತ್ರಿಗಳಾದ ಬಸವರಾಜ್.ಬೊಮ್ಮಾಯಿರವರು ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಸ್ಪೆಕ್ಟೃಮ್ ತಂತ್ರಜ್ಞಾನ ಬಳಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬೀದಿ ದೀಪಾಗಳ ಸಮಗ್ರ ಮಾಹಿತಿ ಮಾಹಿತಿ,ಬೀದಿ ದೀಪಗಳ ನಿರ್ವಹಣೆ,ದುರಸ್ತಿಗೆ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೆ ಸಮರ್ಪಕ ಮೂಲಭೂತ ಸೌಲಭ್ಯಗಳು ಲಭಿಸಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
MUST WATCH
ಹೊಸ ಸೇರ್ಪಡೆ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!