ವೈರಾಣು ಹರಡದಂತೆ ಕ್ರಮ ಕೈಗೊಳ್ಳಿ


Team Udayavani, Jul 2, 2020, 11:42 AM IST

02-July-04

ಜಗಳೂರು: ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಎಸ್‌.ವಿ. ರಾಮಚಂದ್ರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.

ಜಗಳೂರು: ಕೋವಿಡ್ ವೈರಾಣು ಹರಡದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್‌.ವಿ. ರಾಮಚಂದ್ರ ಸೂಚಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರಸೀಕೆರೆ ಪೊಲೀಸ್‌ ಸಿಬ್ಬಂದಿ ಹಾಗೂ ಪಟ್ಟಣದ ಪೌರ ಕಾರ್ಮಿಕ , ಚಿಕ್ಕಉಜ್ಜಿನಿಯ 11 ವರ್ಷದ ಬಾಲಕಿ ಸೇರಿದಂತೆ 4 ಜನರಿಗೆ ಕೋವಿಡ್ ಧೃಢಪಟ್ಟಿದೆ. 270 ಸೋಂಕಿತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.

ಕ್ವಾರಂಟೈನ್‌ನಲ್ಲಿರುವವರಿಗೆ ಊಟದ ವ್ಯವಸ್ಥೆ ಮಾಡಬೇಕೆಂದರು. ಡಿಎಚ್‌ಒಗೆ ದೂರವಾಣಿ ಕರೆ ಮಾಡಿದ ಶಾಸಕರು, ಮಾಸ್ಕ್, ಪಿಪಿ ಕಿಟ್‌, ಹ್ಯಾಂಡ್‌ಗ್ಲೌಸ್‌ ಸೇರಿದಂತೆ ಸುರಕ್ಷತಾ ಕಿಟ್‌ಗಳನ್ನು ಕಳುಹಿಸಿಕೊಡುವಂತೆ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ವೈರಸ್‌ ಹಾವಳಿ ಉಲ್ಬಣಗೊಂಡರೆ ಪಂಚಾಯಿತಿಯಲ್ಲಿನ 14ನೇ ಹಣಕಾಸಿನಡಿ ಹಣ ಬಳಕೆ ಮಾಡಿಕೊಂಡು ಸ್ಯಾನಿಟೈಸರ್‌, ಮಾಸ್ಕ್ ಖರೀದಿಸಿ. ಬೇಡಿಕೆಗಳಿದ್ದರೆ ಸರ್ಕಾರದಿಂದ ಒದಗಿಸಲು ಸಿದ್ಧನಾಗಿದ್ದು, ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.

ಸಿಪಿಐ ದುರುಗಪ್ಪ ಮಾತನಾಡಿ, ಈಗಾಗಲೇ 3 ಕಡೆ ಸೀಲ್‌ಡೌನ್‌ ಮಾಡಲಾಗಿದೆ. ಕ್ವಾರಂಟೈನ್‌ ಹಾಗೂ ಸೀಲ್‌ಡೌನ್‌ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಕಂಟೇನ್ಮೆಂಟ್‌ ಝೋನ್‌ ನಲ್ಲಿ ಶುದ್ಧ ಆಹಾರ, ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಜನರು ವಿನಾಕಾರಣ ತಿರುಗಾಡಿ ಕಾನೂನು ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರಾಜ್‌ ಮಾತನಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರ ಮೂಲಕ ಸೀಲ್‌ಡೌನ್‌ ಪ್ರದೇಶದ ನಿವಾಸಿಗಳ ಗರ್ಭಿಣಿ, ಮಕ್ಕಳ ವೃದ್ಧರ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು. ಪ್ರಭಾರಿ ತಹಶೀಲ್ದಾರ್‌ ಗಿರೀಶ್‌ಬಾಬು, ತಾಪಂ ಇಒ ಮಲ್ಲಾ ನಾಯ್ಕ, ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕಾರ್‌, ಸಮಾಜಕಲ್ಯಾಣ ಇಲಾಖೆಯ ಮಹೇಶ್‌, ಪಿಡಬ್ಲ್ಯೂಡಿ ಎಇಇ ರುದ್ರಪ್ಪ, ಅರಣ್ಯ  ಇಲಾಖೆಯ ಶ್ವೇತಾ, ಡಾ| ಮಲ್ಲಪ್ಪ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.