ಪಾಲಿಕೆ ಜಾಗ ಪರಭಾರೆ ಸಲ್ಲ : ಆಯುಕ್ತರಿಗೆ ಅಣ್ಣಾ ಹಜಾರೆ ಹೋರಾಟ ಸಮಿತಿ ಮನವಿ
Team Udayavani, Dec 2, 2021, 4:12 PM IST
ಶಿವಮೊಗ್ಗ: ಮಹಾನಗರ ಪಾಲಿಕೆಗೆ ಸೇರಿದ ಜಾಗವನ್ನು ಯಾರಿಗೂ ಪರಭಾರೆ ಮಾಡಬಾರದು ಎಂದು ಆಗ್ರಹಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ತಾಲ್ಲೂಕು ನಿ ಗೆ ಹೋಬಳಿ ಊರುಗಡೂರು ಗ್ರಾಮದ ಸರ್ವೇ ನಂ.17/6ರಲ್ಲಿ 1.2 ಎಕರೆ ಮಹಾನಗರ ಪಾಲಿಕೆಗೆ ಸೇರಿದ ಉದ್ಯಾನವನ ಇದ್ದು, ಈ ಹಿಂದೆ ಅದನ್ನು ಪರಭಾರೆ ಮಾಡಲಾಗಿತ್ತು. ಆದರೆ ನಂತರ ಜಿಲ್ಲಾ ಧಿಕಾರಿ, ಉಪವಿಭಾಗಾ ಧಿಕಾರಿ ಹಾಗೂ ತಹಶೀಲ್ದಾರ್ ಅವರು ಖಾಸಗಿ ವ್ಯಕ್ತಿಗೆ ಅಕ್ರಮವಾಗಿ ಭೂ ಪರಿವರ್ತನೆ ಮಾಡಿ ಕೊಟ್ಟಿದ್ದನ್ನು ಈಗಿನ ಜಿಲ್ಲಾ ಧಿಕಾರಿಗಳು ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಈ ಹಿಂದೆ ನೀಡಿದ ಭೂಪರಿವರ್ತನೆ ಆದೇಶವನ್ನು ಸಂಪೂರ್ಣವಾಗಿ ರದ್ದು ಮಾಡಿರುವುದರಿಂದ ಅದನ್ನು ತಕ್ಷಣ ಪಾಲಿಕೆ ಆಸ್ತಿಯೆಂದು ಬದಲಾಯಿಸಿಕೊಳ್ಳುವ ಕೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಊರುಗಡೂರು ಗ್ರಾಮದ ಈ ಜಾಗವು ಪಾಲಿಕೆಗೆ ಸೇರಿದ್ದು ಎಂದು ದಾಖಲೆಗಳ ಆಧಾರದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಮಹಾರಾಜರ ಕಾಲದಲ್ಲಿಯೇ ಸದರಿ ಜಾಗವನ್ನು ಉದ್ಯಾನವನಕ್ಕಾಗಿ ನೀಡಲಾಗಿತ್ತು. ಆದರೆ ಈ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಪಾಲಿಕೆಯ ಸ್ವತ್ತಿನಲ್ಲಿ ಪರವಾನಗಿ ಪಡೆಯದೇ ಕಳೆದ 5 ವರ್ಷದಿಂದ ಕಟ್ಟಡ ಕಾಮಗಾರಿ ನಡೆಸಿಕೊಂಡು ಬರುತ್ತಿದ್ದಾರೆ. ಈಗಾಗಲೇ ಅವರಿಗೆ ನಗರಪಾಲಿಕೆಯಿಂದ 5 ಬಾರಿ ನೋಟಿಸ್ ನೀಡಲಾಗಿದೆ. ಇದು ಮಹಾನಗರ ಪಾಲಿಕೆ ಆಸ್ತಿ ಎಂದು ಅರ್ಜಿದಾರರಿಗೆ ಹಿಂಬರ ನೀಡಿದ್ದಾರೆ. ಆದರೂ ಕೂಡ ಅವರು ಈ ಜಾಗದಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಸದರಿ ಜಾಗಕ್ಕೆ ಯಾವುದೇ ರಸ್ತೆ ಸಂಪರ್ಕ ಇಲ್ಲದಿದ್ದರೂ ಅಲ್ಲಿ ಕಚ್ಚಾ ರಸ್ತೆಯನ್ನು ನಿರ್ಮಿಸಲಾಗಿದೆ. ಆದ್ದರಿಂದ ಜಿಲ್ಲಾ ಧಿಕಾರಿಗಳು ಪಾಲಿಕೆಯ ದಾಖಲೆಗಳಲ್ಲಿ ಸದರಿ ಸ್ವತ್ತನ್ನು ಪಾಲಿಕೆ ಆಸ್ತಿಗೆ ಸೇರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಅಶೋಕ್ ಯಾದವ್, ಪ್ರಮುಖರಾದ ಶಿವಕುಮಾರ್ ಕಸೆಟ್ಟೆ, ಡಾ| ಚಿಕ್ಕಸ್ವಾಮಿ, ವೆಂಕಟನಾರಾಯಣ, ಜನಾರ್ದನ ಪೈ, ಚನ್ನವೀರಪ್ಪ ಗಾಮನಕಟ್ಟಿ, ಕಾಮ್ರೇಡ್ ಲಿಂಗಪ್ಪ, ಪ್ರಭಾಕರ್, ತಿಮ್ಮಪ್ಪ, ಓಂಗಣೇಶ್ಶೇಟ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ