ಸೋಂಕು ನಿವಾರಕ ಮಾರ್ಗಕ್ಕೆ ಚಾಲನೆ

ಇಂಜಿನಿಯರಿಂದ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣಎರಡು ಭಾಗದಲ್ಲಿ ಕಾರ್ಯನಿರ್ವಹಣೆ

Team Udayavani, Apr 10, 2020, 11:19 AM IST

10-April-03

ಚಿತ್ರದುರ್ಗ: ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ರಚಿಸಿರುವ ಸೋಂಕು ನಿವಾರಕ ಮಾರ್ಗದಲ್ಲಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹಾಗೂ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸಂಚರಿಸಿದರು.

ಚಿತ್ರದುರ್ಗ: ನಗರದಲ್ಲಿ ಹೆಚ್ಚು ಜನ ಸೇರುವ ಜಾಗಗಳನ್ನು ಗುರುತಿಸಿ ಸೋಂಕು ನಿವಾರಕ ಮಾರ್ಗಗಳನ್ನು ನಿರ್ಮಿಸುತ್ತಿದ್ದು, ಈಗ ಎರಡು ಮಾರ್ಗಗಳು ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಿದ್ಧಪಡಿಸಿರುವ ಸೋಂಕು ನಿವಾರಕ ಮಾರ್ಗಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌-19 ವೈರಸ್‌ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಮಿಳುನಾಡು ಹಾಗೂ ಮೈಸೂರುಗಳಲ್ಲಿ ಮಾಡಿರುವ ಪ್ರಯೋಗವನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಡಿದ್ದು, ನಗರಸಭೆಯ ಇಂಜಿನಿಯರಗಳೇ ಸೇರಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಮಾರ್ಗ ನಿರ್ಮಿಸಿದ್ದಾರೆ ಎಂದರು.

ಈಗಾಗಲೇ ನಗರದ ಮುರುಘರಾಜೇಂದ್ರ ಮೈದಾನದಲ್ಲಿ ಸ್ಟೆ çನ್‌ಲೆಸ್‌ ಸ್ಟೀಲ್‌ ಬಳಸಿ 87 ಸಾವಿರ ವೆಚ್ಚದಲ್ಲಿ ಸೋಂಕು ನಿವಾರಕ ಮಾರ್ಗ ರಚಿಸಲಾಗಿತ್ತು. ಈಗ ಪ್ಲಾಸ್ಟಿಕ್‌ ಪೈಪ್‌ಗ್ಳನ್ನು ಬಳಸಿಕೊಂಡು 5 ಸಾವಿರ ವೆಚ್ಚದಲ್ಲೇ ಮತ್ತೂಂದು ಮಾರ್ಗವನ್ನು ಇಂಜಿನಿಯರುಗಳು ಸಿದ್ಧಪಡಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲೂ ಎರಡು ಸೋಂಕು ನಿವಾರಕ ಮಾರ್ಗ ಮಾಡಿಕೊಡಲು ಬೇಡಿಕೆ ಇದೆ. ಈ ಬಗ್ಗೆ ನಗರಸಭೆಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ವೈರಸ್‌ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಆದರೂ ಸಾರ್ವಜನಿಕರು ಸೋಂಕು ಹರಡದಂತೆ ತಡೆಯಲು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು. ಹೊರಗೆ ಬಂದರೂ ಸಾಮಾಜಿಕ ಅಂತರದ ಕಡೆ ಗಮನ ಇರಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಮಾತನಾಡಿ, ಕೋವಿಡ್‌-19 ಸಂಬಂಧಪಟ್ಟಂತೆ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಸೋಂಕು ನಿವಾರಕ ಮಾರ್ಗ ಮಾಡಲಾಗಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ ಕೆಲವರು ಮಾತ್ರ ಹೊರಗಡೆ ಬರುತ್ತಿದ್ದಾರೆ. ಸಾರ್ವಜನಿಕರು ಆದಷ್ಟು ಮನೆಯಲ್ಲಿ ಇರುವುದು ಉತ್ತಮ ಎಂದು ಹೇಳಿದರು. ಗ್ರಾಮೀಣ ಮತ್ತು ನಗರದ ಪ್ರದೇಶದ ವಾರ್ಡ್‌ ವ್ಯಾಪ್ತಿಗಳಲ್ಲಿ ಶಿಕ್ಷಕರನ್ನು ನಿಯೋಜನೆ ಮಾಡಿ, ಅಲ್ಲಿನ ಪ್ರದೇಶಗಳ ಕುಂದು ಕೊರತೆಗಳ ಮಾಹಿತಿ ಸಂಗ್ರಹಿಸಿ, ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ. ಸಾರ್ವಜನಿಕರು ಇದೇ ಮಾರ್ಗದ ಮೂಲಕ ಸಂಚರಿಸಬೇಕು. ಈ ಮಾರ್ಗದಲ್ಲಿ ಸೋಡಿಯಂ ಹೈಪೊಕ್ಲೋರೈಡ್‌ ಹಾಗೂ ನೀರಿನಿಂದ ಸೋಂಕು ನಿವಾರಕ ದ್ರಾವಣವನ್ನು ಸಿದ್ಧಪಡಿಸಲಾಗಿದೆ. ಸೋಂಕು ನಿವಾರಕ ಮಾರ್ಗ ಬೆಳಗ್ಗೆ 4ರಿಂದ 9 ರವರೆಗೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್‌ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.