ಜಲಮೂಲ ಸಂರಕ್ಷಣೆಗೆ ಕ್ರಮ

"ಅಂತರ್ಜಲ ಚೇತನ' ಯೋಜನೆಯಡಿ ಜಿಲ್ಲೆಯಲ್ಲಿ 46 ಸಾವಿರ ಕಾಮಗಾರಿ: ತಿಪ್ಪಾರೆಡ್ಡಿ

Team Udayavani, May 6, 2020, 11:11 AM IST

5-May-04

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಅಂತರ್ಜಲ ಚೇತನ ಯೋಜನೆಯಡಿ ಜಿಲ್ಲೆಯ ಜಲಮೂಲಗಳ ಸಂರಕ್ಷಣೆ ಹಾಗೂ ಜಲಚಕ್ರ ವ್ಯವಸ್ಥೆ ಸುಧಾರಣೆಗಾಗಿ 270 ಕೋಟಿ ರೂ. ವೆಚ್ಚದಲ್ಲಿ ಸುಮಾರು 46 ಸಾವಿರ ಕಾಮಗಾರಿಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಜಿಪಂ ಸಭಾಂಗಣದಲ್ಲಿ “ಅಂತರ್ಜಲ ಚೇತನ’ ಯೋಜನೆ ಕುರಿತು ಪಿಡಿಒ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಬರಪೀಡಿತ ಚಿತ್ರದುರ್ಗ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ಯ ಇಲಾಖೆ, ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ನೆರವಿನೊಂದಿಗೆ ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಗಾಗಿ “ಅಂತರ್ಜಲ ಚೇತನ’ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯೂ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದೆ. ಅಂತರ್ಜಲ ಮಟ್ಟ ಸುಧಾರಣೆಗಾಗಿ ಸಾಕಷ್ಟು ತಜ್ಞರು ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಹೀಗಾಗಿ ಜಿಲ್ಲೆಯ ಪಾಲಿಗೆ ಈ ಯೋಜನೆ ವರದಾನವಾಗಲಿದೆ ಎಂದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಲ್ಲಿ, ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಅಭಿಪ್ರಾಯಪಟ್ಟರು. ಆರ್ಟ್‌ ಆಫ್‌ ಲಿವಿಂಗ್‌ನ ಕಾರ್ಯಾಚರಣೆ ನಿರ್ದೇಶಕ ರವೀಂದ್ರ ದೇಸಾಯಿ, ಚಿತ್ರದುರ್ಗ, ಚಳ್ಳಕೆರೆ, ಪಾವಗಡ, ಶಿರಾ ಬರಡು ಪ್ರದೇಶಗಳಾಗಿವೆ. ಇಲ್ಲಿ ಅಂತರ್ಜಲ ಮಟ್ಟ ತೀರಾ ಕೆಳಗೆ ಕುಸಿದಿದೆ. ಈ ಮೊದಲು ಪ್ರಕೃತಿಯೇ ಮಳೆ ನೀರಿನ ಜಲ ಮರುಪೂರಣ ಮಾಡುತ್ತಿತ್ತು. ಆದರೆ ಕಾಡಿನ ನಾಶ ಹಾಗೂ ಪ್ರಕೃತಿ ಮೇಲೆ ಮನುಷ್ಯನ ಪ್ರಭಾವ ಹೆಚ್ಚಾದ ಕಾರಣದಿಂದ ಜಲಮೂಲಗಳನ್ನು ನಾವೇ ಸಂರಕ್ಷಿಸುವ ಅಗತ್ಯತೆ ಬಂದಿದೆ. ಅಂತರ್ಜಲಕ್ಕೂ, ಮೇಲ್ಮೈ ನೀರು ಹರಿಯುವಿಕೆಗೂ ಒಂದಕ್ಕೊಂದು ಸಂಬಂಧವಿದೆ. ನದಿಯ ಹರಿಯುವಿಕೆ ಆಧಾರದಲ್ಲಿ ಅಂತರ್ಜಲವೂ ಇದೆ. ಸದ್ಯ ಕೆರೆಗಳಲ್ಲಿ ನೀರಿನ ಆವಿಯ ಪ್ರಮಾಣ ಹೆಚ್ಚಿದ್ದು, ಈ ಭಾಗದಲ್ಲಿ ಪ್ರಕೃತಿಗೆ ಮೋಡಗಳನ್ನು ತಡೆದು ಮಳೆ ಸುರಿಸುವ ಶಕ್ತಿ ಕುಸಿದಿದೆ. ಹೀಗಾಗಿ ಜಲಚಕ್ರ ವ್ಯವಸ್ಥೆ ಏರುಪೇರಾಗಿದೆ ಎಂದರು.

ಈಗಾಗಲೇ ಅಂತರ್ಜಲ ಚೇತನ ಯೋಜನೆಗೆ ಗ್ರಾಮ ಪಂಚಾಯತ್‌ ವಾರು ಕ್ರಿಯಾ ಯೋಜನೆ ಸಿದ್ಧವಾಗಿದೆ. ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲಿ ಸಂಯೋಜಕರನ್ನು ಹಾಗೂ ಕಾಯಕ ಬಂಧುಗಳನ್ನು ನಿಯೋಜಿಸಲಾಗಿದೆ. ಯೋಜನೆ ಜಾರಿಯಿಂದ ಜಿಲ್ಲೆಯಲ್ಲಿ ಜಲಸಂರಕ್ಷಣೆಯ ಜೊತೆಗೆ ಅಂತರ್ಜಲ ಮಟ್ಟ ಗಣನೀಯವಾಗಿ ಹೆಚ್ಚಳವಾಗುವುದರಲ್ಲಿ ಸಂಶಯವಿಲ್ಲ. ಶೀಘ್ರದಲ್ಲಿಯೇ ಯೋಜನೆಯನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಜಿಪಂ ಸಿಇಒ ಹೊನ್ನಾಂಬ, ಉಪಕಾರ್ಯದರ್ಶಿ ಡಾ| ರಂಗಸ್ವಾಮಿ ಉಪಸ್ಥಿತರಿದ್ದರು.

ಅಂತರ್ಜಲ ಚೇತನ ಯೋಜನೆಯಡಿ ಇಡೀ ಜಲಾನಯನ ಪ್ರದೇಶದಲ್ಲಿ ನೀರನ್ನು ಇಂಗಿಸುವುದು, ಭೂಮಿಯ ಸವಕಳಿ ತಡೆಯುವ ಕಾರ್ಯವನ್ನು ವೈಜ್ಞಾನಿಕವಾಗಿ ಕೈಗೊಳ್ಳಲಾಗುವುದು. ಇದಕ್ಕೆ ಉಪಗ್ರಹ ಆಧಾರಿತ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ರವೀಂದ್ರ ದೇಸಾಯಿ,
ಆರ್ಟ್‌ ಆಫ್‌ ಲಿವಿಂಗ್‌
ಕಾರ್ಯಾಚರಣೆ ನಿರ್ದೇಶಕ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.