ಮಲ್ಲಾಪುರ ಕೆರೆಯಲ್ಲಿ ಮೀನುಗಳ ಸಾವು
ದುರ್ವಾಸನೆಗೆ ಮೂಗು ಮುಚ್ಚಿ ಓಡಾಡುವ ಸ್ಥಿತಿ ನಿರ್ಮಾಣ
Team Udayavani, Apr 9, 2020, 11:05 AM IST
ಚಿತ್ರದುರ್ಗ: ಮಲ್ಲಾಪುರ ಕೆರೆಯಲ್ಲಿ ಸತ್ತಿರುವ ಮೀನುಗಳ ರಾಶಿ.
ಚಿತ್ರದುರ್ಗ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13ರ ಪಕ್ಕದಲ್ಲೇ ಇರುವ ಮಲ್ಲಾಪುರ ಕೆರೆಯಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದುದ್ದು, ದುರ್ವಾಸನೆ ಬರುತ್ತಿದೆ. ಇದರಿಂದ ಮಲ್ಲಾಪುರ ಸೇರಿದಂತೆ ಸುತ್ತಮುತ್ತಲಿನ ಜನತೆ ಕೆರೆ ಬಳಿ ಹಾದು ಹೋಗುವುದು ಕಷ್ಟವಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ನಗರಕ್ಕೆ ಬರುವವರು ಕೂಡಾ ವಾಸನೆಗೆ ಮೂಗು ಮುಚ್ಚಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕೋವಿಡ್-19 ವೈರಸ್ನಿಂದ ಭಯಭೀತರಾಗಿರುವ ಜನರಿಗೆ ಮೀನುಗಳು ಸಾವಿರಾರು ಸಂಖ್ಯೆಯಲ್ಲಿ ಸತ್ತು ಕೆಟ್ಟ ವಾಸನೆ ಬರುತ್ತಿರುವುದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಚಿತ್ರದುರ್ಗದ ನಗರದ ಎಲ್ಲಾ ತ್ಯಾಜ್ಯ ಮಲ್ಲಾಪುರ ಕೆರೆಯ ಒಡಲು ಸೇರುತ್ತಿದ್ದು, ಆಳುವ ವರ್ಗದವರು ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೆರೆಯಲ್ಲಿ ಶೇಖರಣೆಯಾಗುತ್ತಿರುವ ಮಲೀನ ಹಾಗೂ ವಿಷಯುಕ್ತ ನೀರು ಕೂಡಾ ಮೀನುಗಳ ಮಾರಣ ಹೋಮಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದು, ಇತ್ತೀಚೆಗೆ ಸುರಿದ ಮಳೆಯ ಕಾರಣಕ್ಕೆ ಈ ರೀತಿ ಮೀನುಗಳು ಸಾಯುತ್ತಿರಬಹುದು ಎಂದು ಅಂದಾಜಿಸಲಾಗಿದೆ. ತಕ್ಷಣ ಈ ಮೀನುಗಳನ್ನು ಹಿಡಿದು ಹೂಳಬೇಕು. ಜತೆಗೆ ಕೆರೆಯಲ್ಲಿರುವ ಇತರೆ ಮೀನುಗಳನ್ನು ಹಿಡಿದು ಮಾರಾಟ ಮಾಡಬೇಕು. ಆಗ ಕೆರೆಯಲ್ಲಿನ ಮೀನುಗಳ ಪ್ರಮಾಣ ಕಡಿಮೆಯಾಗಿ ಉಸಿರಾಟಕ್ಕೆ ಅನುಕೂಲವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೆರೆಯಲ್ಲಿ ಮೀನುಗಾರಿಕೆ ನಡೆಸಲು ಸಾಕಷ್ಟು ಹಣ ಹೂಡಿ ಗುತ್ತಿಗೆ ಪಡೆದಿದ್ದವರು ಕೂಡಾ ಇದರಿಂದ ಕಂಗಾಲಾಗಿದ್ದು, ಈಗ ಲಾಕ್ ಡೌನ್ ಇರುವುದರಿಂದ ಮೀನು ಮಾರಾಟ ಕೂಡಾ ಕಷ್ಟವಾಗಲಿದೆ. ಈ ಸಂದರ್ಭದಲ್ಲಿ ಮೀನುಗಳು ಸಾಯುತ್ತಿರುವುರು ಆತಂಕವನ್ನು ಹೆಚ್ಚಿಸಿದೆ.
ಮಳೆ ಬಂದಾಗ ಹೊಸ ನೀರು ಹರಿದು ಬರುವುದರಿಂದ ಈ ರೀತಿ ಮೀನುಗಳು ಮರಣ ಹೊಂದುತ್ತವೆ ಎಂದು ತಜ್ಞರು ಹೇಳುತ್ತಿದ್ದಾರೆ. ಈಗ ಸತ್ತಿರುವ ಮೀನುಗಳನ್ನು ನಾವೇ ತೆಗೆದು ಹಾಕುತ್ತಿದ್ದೇವೆ. ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಕಳೆದ ಐದು ವರ್ಷದಿಂದ ಕೆರೆ ಸ್ವತ್ಛವಾಗಿಲ್ಲ. ಈ ಎಲ್ಲಾ ಕಾರಣಕ್ಕೆ ಇಷ್ಟು ಪ್ರಮಾಣದಲ್ಲಿ ಮೀನು ಗಳು ಸಾಯುತ್ತಿರಬಹುದು ಎಂದು ಮಹಾತ್ಮಾ ಗಾಂಧಿ ಕೆರೆ ಬಳಕೆದಾರರ ಸಂಘದ ಅಧ್ಯಕ್ಷೆ ಸಿದ್ದಲಿಂಗಮ್ಮ, ಖಜಾಂಚಿ ಸಿದ್ದಪ್ಪ ಪಿಳ್ಳಿಕೇರೆನಹಳ್ಳಿ ಹಾಗೂ ಕಾರ್ಯದರ್ಶಿ ಬಸವರಾಜ್ “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ