ಕುಂಬಳಕಾಯಿ ಬೆಳೆದವರಿಗೆ ಸಿಹಿ ಉಣಿಸಿದ ರೈತ ಸೇತು


Team Udayavani, Apr 27, 2020, 11:35 AM IST

3

ಚಿತ್ರದುರ್ಗ: ಮಲ್ಲಪ್ಪನಹಳ್ಳಿ ರೈತರ ಜಮೀನಿನಲ್ಲಿ ಬೆಳೆದಿದ್ದ ಸಿಹಿ ಕುಂಬಳ ಖರೀದಿಸಿ ಲಾರಿಗೆ ತುಂಬಿಸಲಾಯಿತು.

ಚಿತ್ರದುರ್ಗ: ಕೋವಿಡ್ ತಡೆಗಾಗಿ ಲಾಕ್‌ಡೌನ್‌ ಘೋಷಿಸಿದ ನಂತರ ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ನೆರವು ನೀಡುವ ಉದ್ದೇಶದಿಂದ “ಉದಯವಾಣಿ’  ರೂಪಿಸಿದ “ರೈತಸೇತು’ ಜಿಲ್ಲೆಯ ರೈತರ ಬದುಕಿನಲ್ಲಿ ಸಿಹಿ ತಂದಿದೆ. ಹೊಸದುರ್ಗ ತಾಲೂಕು ಮಲ್ಲಪ್ಪನಹಳ್ಳಿ ಗ್ರಾಮದ ಆನಂದ್‌ ಹಾಗೂ ಎಂ.ಕೆ. ಕಾಂತರಾಜು ಎಂಬುವವರು ಒಟ್ಟು ಐದು ಎಕರೆಯಲ್ಲಿ ಬೆಳೆದಿದ್ದ ಸಿಹಿ ಕುಂಬಳಕ್ಕೆ ಮಾರುಕಟ್ಟೆ ಒದಗಿಸಿಕೊಟ್ಟಿದೆ. ಸಿಹಿ ಕುಂಬಳದ ಬೀಜ ನಾಟಿ ಮಾಡಿದ
ದಿನ ದಿಂದಲೂ ಉತ್ತಮ ಲಾಭದ ಕನಸು ಕಾಣುತ್ತಿದ್ದ ರೈತರಿಗೆ ಕೋವಿಡ್ ಲಾಕ್‌ಡೌನ್‌ ಸಂಕಷ್ಟಕ್ಕೆ ಸಿಲುಕಿಸಿತು. ಇದರಿಂದ ಕಂಗೆಟ್ಟಿದ್ದ ಆನಂದ್‌ ಹಾಗೂ ಕಾಂತರಾಜು ಪತ್ರಿಕೆಯನ್ನು ಸಂಪರ್ಕಿಸಿ ತಮ್ಮ ಬೆಳೆ ವಿವರಗಳನ್ನು ನೀಡಿದ್ದರು.

ಪತ್ರಿಕೆಯಲ್ಲಿ ರೈತರ ಊರು, ಬೆಳೆದಿರುವ ಬೆಳೆಯ ಹೆಸರು, ಅದರ ಪ್ರಮಾಣ ಹಾಗೂ ರೈತ ಅದಕ್ಕೆ ನಿಗ ದಿ ಮಾಡಿರುವ ಬೆಲೆ ಅವರ ಮೊಬೈಲ್‌ ಸಂಖ್ಯೆಯನ್ನು ರೈತಸೇತು ಅಂಕಣದಲ್ಲಿ ಪ್ರಕಟಿಸಿತ್ತು. ಈ ವಿಷಯವನ್ನು ಗಮನಿಸಿದ ಬೆಂಗಳೂರು ಮೂಲದ ಶರತ್‌ ಎಂಬುವವರು ಪ್ರತಿ ವಾರ ಮೂರು ಟನ್‌ನಂತೆ ಇಬ್ಬರೂ ರೈತರಿಂದ ಸಿಹಿ ಕುಂಬಳ ಖರೀದಿ  ಮಾಡಿ ತಮ್ಮ ಹಂದಿ ಫಾರಂಗೆ ಬಳಕೆ ಮಾಡಿಕೊಳ್ಳಲು ಮುಂದೆ ಬಂದಿದ್ದಾರೆ. ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿ ರೈತರು ಪ್ರತಿ ವರ್ಷವೂ ಸಿಹಿಕುಂಬಳ ಬೆಳೆಯುತ್ತಾರೆ. ಎಕರೆಗೆ 25 ರಿಂದ 30 ಸಾವಿರ ಖರ್ಚು ಬರುತ್ತದೆ. ಇದರಿಂದ ಒಂದು ಲಕ್ಷದವರೆಗೆ ಲಾಭ ಸಿಗುತ್ತದೆ. ಪ್ರತಿ ಎಕರೆಗೆ 6 ರಿಂದ 7 ಟನ್‌ ಇಳುವರಿ ಬಂದರೆ ಪ್ರತಿ ಕೆಜಿಗೆ 15 ರೂ.ವರೆಗೆ ಬೆಲೆ ಇರುತ್ತದೆ. ಮಲ್ಲಪ್ಪನಹಳ್ಳಿ ರೈತ ಆನಂದ್‌ ಮೂರು ಎಕರೆಯಲ್ಲಿ ಬೆಳೆ ಬೆಳೆದಿದ್ದಾರೆ. ಕಾಂತರಾಜು ಎರಡು ಎಕರೆಯಲ್ಲಿ ಬೆಳೆದಿದ್ದಾರೆ. ಸದ್ಯ 6 ರೂ.ನಂತೆ ಪ್ರತಿ ಕೆಜಿ ಸಿಹಿ ಕುಂಬಳ ಖರೀದಿಯಾಗುತ್ತಿದೆ.

ನಮ್ಮ ಬೆಳೆ ಹೊಲದಲ್ಲೇ ಕೊಳೆಯುತ್ತದೆ ಎಂಬ ಆತಂಕದಲ್ಲಿದ್ದಾಗ “ಉದಯವಾಣಿ’ ಪತ್ರಿಕೆಯ ರೈತಸೇತು ಅಂಕಣ ನಮಗೆ ಹೊಸ ದಾರಿ ತೋರಿಸಿದೆ. ಲಾಭ
ಬಾರದಿದ್ದರೂ ಪರವಾಗಿಲ್ಲ, ನಷ್ಟವಾಗದಂತೆ ಕಾಪಾಡಿದೆ. ರೈತರು ಮಾರಾಟಗಾರರ ನಡುವಿನ ಸೇತುವೆಯಾದ ಪತ್ರಿಕೆಗೆ ಆಭಾರಿ.
ಎಂ.ಕೆ. ಕಾಂತರಾಜು,
ಮಲ್ಲಪ್ಪನಹಳ್ಳಿ ರೈತ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.