ಹರಿಯಾಣದಲ್ಲಿ ಕರ್ತವ್ಯದಲ್ಲಿದ್ದ ದಾವಣಗೆರೆ ಮೂಲದ ಸಿಐಎಸ್ಎಫ್ ಯೋಧ ಆತ್ಮಹತ್ಯೆಗೆ ಶರಣು
Team Udayavani, Apr 3, 2023, 12:11 AM IST
ದಾವಣಗೆರೆ: ಪಂಜಾಬ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ಕರ್ತವ್ಯದಲ್ಲಿದ್ದ ದಾವಣಗೆರೆ ಜಿಲ್ಲೆಯ ಮೂಲದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ತಾಲೂಕಿನ ಹದಡಿ ನಾಗರಾಜು ಸಾವಿಗೆ ಶರಣಾದ ಯೋಧ ಎಂದು ಗುರುತಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಚಂಡೀಗಢದಲ್ಲಿರುವ ಪಂಜಾಜ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ನಾಗರಾಜು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.
ಭಾನುವಾರ ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಾಗರಾಜ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಸ್ವಗ್ರಾಮ ಹದಡಿಗೆ ತರಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.
ಇದನ್ನೂ ಓದಿ: ವಿದೇಶಗಳಲ್ಲಿದ್ದಾರೆ 28 ಖಲಿಸ್ಥಾನಿ ಉಗ್ರರು; ಕೇಂದ್ರ ಗೃಹ ಸಚಿವಾಲಯ ವರದಿಯಲ್ಲಿ ಉಲ್ಲೇಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ