ಕ್ವಾರಂಟೈನ್ ವಿರೋಧಿಸಿದವರಿಗೆ ಲಾಠಿ ರುಚಿ
Team Udayavani, May 2, 2020, 11:25 AM IST
ದಾವಣಗೆರೆ: ಶಾಂತಿನಗರ ಹಾಸ್ಟೆಲ್ ಬಳಿ ಜಮಾವಣೆಗೊಂಡಿದ್ದ ಜನರನ್ನು ಪೊಲೀಸರು ಚದುರಿಸಿದರು.
ದಾವಣಗೆರೆ: ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಗೆ ಶಾಂತಿನಗರದ ಹಾಸ್ಟೆಲ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದ ಘಟನೆ ನಡೆದಿದೆ. ಶಾಂತಿನಗರದ ಹಾಸ್ಟೆಲ್ನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಮಾವಣೆಗೊಂಡಿದ್ದ ಜನರು ಆರೋಪಿಸಿದರು.
ಈ ಭಾಗದಲ್ಲಿ ಯಾರನ್ನೂ ಯಾವುದೇ ಕಾರಣಕ್ಕೂ ಕ್ವಾರಂಟೈನ್ ಮಾಡಬಾರದು. ಹಾಗೆ ಮಾಡುವುದರಿಂದ ನಮ್ಮ ಭಾಗಕ್ಕೂ ವೈರಸ್ ಹರಡಬಹುದು ಎಂದು ತಿಳಿಸಿದರು. ಹಾಸ್ಟೆಲ್ನಲ್ಲಿ ಯಾರನ್ನೂ ಕ್ವಾರಂಟೈನ್ ಮಾಡಲಾಗುತ್ತಿಲ್ಲ. ಆಶಾ ಕಾರ್ಯಕರ್ತೆಯರು ಮತ್ತು ಇತರರಿಗೆ ಆಹಾರ ತಯಾರಿಸಿ, ಇಲ್ಲಿಂದ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟರು. ಹಾಸ್ಟೆಲ್ನಲ್ಲಿ ಅಡುಗೆ ಮಾಡುವುದು, ಸಾಮಾನುಗಳನ್ನು ಚೆಲ್ಲುವುದರಿಂದ ವೈರಸ್ ಹರಡಬಹುದು. ಹಾಗಾಗಿ ಇಲ್ಲಿ ಏನನ್ನೂ ಮಾಡಲೇಕೂಡದು ಎಂದು ನೆರೆದಿದ್ದಂತಹ ಜನರು ಪಟ್ಟು ಹಿಡಿದರು.
ಅಧಿಕಾರಿಗಳು ಎಷ್ಟೇ ಮನವರಿಕೆ ಮಾಡಿಕೊಟ್ಟರೂ ಜನರು ಒಪ್ಪಲೇ ಇಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಹಾಸ್ಟೆಲ್ನಲ್ಲಿ ಅಡುಗೆ ಮಾತ್ರವೇ ಮಾಡಲಾಗುತ್ತದೆ. ಯಾರನ್ನೂ ಕ್ವಾರಂಟೈನ್ ಮಾಡಲಾಗುತ್ತಿಲ್ಲ ಎಂದು ಹಲವಾರು ಬಾರಿ ಮನವರಿಕೆ ಮಾಡಿಕೊಟ್ಟರೂ ಜನರು ಪಟ್ಟು ಸಡಿಲಿಸಲೇ ಇಲ್ಲ. ಕೊನೆಗೆ ಪೊಲೀಸರು ಲಾಠಿ ರುಚಿ ತೋರಿಸಿ ಜನರನ್ನ ಚದುರಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮಣ ಎಂಬಾತನ ಕೈಗೆ ಗಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ