ಈಗಲಾದರೂ ಮನೆಯಿಂದ ಹೊರಗೆ ಬರಬೇಡಿ..

ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಳ್ಳಿ ದಾವಣಗೆರೆ ಜನತೆಗೆ ಸಂಸದ ಸಿದ್ದೇಶ್ವರ್‌ ಮನವಿ

Team Udayavani, May 4, 2020, 11:23 AM IST

04-May-04

ದಾವಣಗೆರೆ: ಸಿಬ್ಬಂದಿಯೊಬ್ಬರು ಗ್ಯಾಸ್‌ ಸಿಲಿಂಡರ್‌ಗಳಿಗೆ ರಾಸಾಯನಿಕ ಸಿಂಪಡಣೆ ಮಾಡಿದರು.

ದಾವಣಗೆರೆ: ದಾವಣಗೆರೆಯಲ್ಲಿ ಭಾನುವಾರ ಒಂದೇ ದಿನ 21 ಜನರಲ್ಲಿ ಕೋವಿಡ್ ಪಾಸಿಟಿವ್‌(ಪ್ರಾಥಮಿಕ ವರದಿ) ಪತ್ತೆಯಾಗಿರುವುದು ಅತ್ಯಂತ ನೋವಿನ ವಿಚಾರ. ಜನರು ಈಗಲಾದರೂ ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಂಡು ಮನೆಯಿಂದ ಹೊರ ಬರಬಾರದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಕಳಕಳಿಯ ಮನವಿ ಮಾಡಿದ್ದಾರೆ.

ದಾವಣಗೆರೆಯಲ್ಲಿ ಒಟ್ಟಾರೆ 7 ಸಕ್ರಿಯ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೊಸದಾಗಿ ಯಾವುದೇ ಪ್ರಕರಣಗಳು ಆಗದಂತೆ ನಡೆಸಿದ ತುರ್ತುಸಭೆಯ ಮುಕ್ತಾಯ ಹಂತದಲ್ಲಿ 21 ಜನರಿಗೆ ಕೋವಿಡ್ ಪಾಸಿಟಿವ್‌ ಎಂಬ ಪ್ರಾಥಮಿಕ ವರದಿ ಬಂದಿತು. ನಿಜಕ್ಕೂ ಅತೀ ನೋವಿನ ವಿಚಾರ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು. ಕಳೆದ ಭಾನುವಾರ ದಾವಣಗೆರೆ ಜಿಲ್ಲೆ ಹಸಿರು ವಲಯದಲ್ಲಿತ್ತು. ಹಾಗಾಗಿ ವಾಣಿಜ್ಯ ಚಟುವಟಿಕೆಗೆ ಅನುಮತಿ ನೀಡಲಾಗಿತ್ತು. ಕೆಲವೇ ಗಂಟೆಯಲ್ಲೇ ಒಬ್ಬರಲ್ಲಿ ಕೊರೊನಾ ಪಾಸಿಟಿವ್‌ ಎಂಬ ವರದಿ ಬಂದ ನಂತರ ಎಲ್ಲವನ್ನೂ ಮುಚ್ಚಬೇಕಾಯಿತು ಎಂದು ತಿಳಿಸಿದರು.

ಈಗ ಪ್ರಾಥಮಿಕ ವರದಿ ಪ್ರಕಾರ 21 ಜನರಲ್ಲಿ ಕೋವಿಡ್ ಪಾಸಿಟಿವ್‌ ಬಂದಿದೆ. ಇನ್ನೂ ಹೆಚ್ಚಾಗದಂತೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕರೆ ನೀಡಿರುವಂತೆ ಕೋವಿಡ್ ವಿರುದ್ಧ ಯುದ್ಧವನ್ನೇ ಮಾಡಬೇಕಾಗಿದೆ. ಅದರಂತೆ ಎಲ್ಲರೂ ಕೆಲಸ ಮಾಡೋಣ ಎಂದು ಮನವಿ ಮಾಡಿದರು. ಒಂದೇ ದಿನ 21ಪ್ರಕರಣಗಳ ವರದಿ ಬಂದಿರವುದರಿಂದ ಸರ್ಕಾರ ದಾವಣಗೆರೆಯನ್ನ ಕಂಟೈನ್‌ಮೆಂಟ್‌ ಮಾಡಬಹುದು. ಇಲ್ಲವೇ ರೆಡ್‌ ಝೋನ್‌ ಎಂದು ಪರಿಗಣಿಸಬಹುದು. ಮುಂದೆ ಪರಿಸ್ಥಿತಿ ಗಂಭೀರವಾಗಬಹುದು. ಇಡೀ ದಾವಣಗೆರೆಯನ್ನೇ ಸೀಲ್‌ಡೌನ್‌ ಮಾಡಿದರೂ ಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಜನರು ಪರಿಸ್ಥಿತಿಯ ಗಂಭೀರತೆಯ ಅರ್ಥ ಮಾಡಿಕೊಂಡು ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರಲೇಕೂಡದು.

ಅಗತ್ಯ ವಸ್ತುಗಳನ್ನು ಮನೆಯ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಜನರು ಆನ್‌ಲೈನ್‌ ಮೂಲಕ ಇಲ್ಲವೇ ಜಿಲ್ಲಾಡಳಿತ ಪ್ರಾರಂಭಿಸಿರುವ ಹೆಲ್ಪ್ಲೈನ್‌ (ಸಹಾಯವಾಣಿ) ಸಂಪರ್ಕಿಸಿ ಹಾಲು, ಔಷಧಿ, ದಿನಸಿ ಪಡೆದುಕೊಳ್ಳಬೇಕು. ಜಿಲ್ಲಾಡಳಿತ, ಮಹಾನಗರ ಪಾಲಿಕೆ ಎಲ್ಲಾ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಕೆ. ಅಬ್ದುಲ್‌ ಜಬ್ಟಾರ್‌
ಮಾತನಾಡಿ, ಕೋವಿಡ್‌-19 ಹರಡದಂತೆ ಪ್ರತಿಯೊಬ್ಬರು ಜಾಗ್ರತೆಯಿಂದ ಇರಬೇಕು. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದು ಕೋರಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.