ಕ್ವಾರಂಟೈನ್ಗೆ ಜನರ ವಿರೋಧ
Team Udayavani, May 25, 2020, 11:27 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜನವಸತಿ ಪ್ರದೇಶದಲ್ಲಿರುವ ಸರ್ಕಾರಿ ಸ್ವಾಮ್ಯದ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಬಾರದು ಎಂದು ವಿರೋಧಿಸಿ ಭಾನುವಾರ ಕೆ.ಬಿ. ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕೆ.ಬಿ. ಬಡಾವಣೆಯ 1ನೇ ಮುಖ್ಯ ರಸ್ತೆ, 1ನೇ ಕ್ರಾಸ್ನ ಎಲಿಗಾರ್ ಶಿವಪ್ಪ ರಸ್ತೆಯಲ್ಲಿರುವ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗುವುದು ಎಂಬ ವಿಷಯ ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ವಾರ್ಡ್ನ ಜನಪ್ರತಿನಿಧಿಗಳು, ಮುಖಂಡರ ಭೇಟಿ ಮಾಡಿ, ಇಲ್ಲಿ ಯಾವುದೇ ಕಾರಣಕ್ಕೂ ಕ್ವಾರಂಟೈನ್ ಮಾಡಲು ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದೇವೆ. ಆದರೂ ಕ್ವಾರಂಟೈನ್ಗಾಗಿ ಹಾಸ್ಟೆಲ್ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಬಾರದು ಎಂದು ಪ್ರತಿಭಟನಾಕಾರರು ತಾಕೀತು ಮಾಡಿದರು.
ಸರ್ಕಾರದ ಆದೇಶ, ನಿಯಮಗಳಿಗೆ ವಿರೋಧ ಇಲ್ಲ. ಆದರೆ ಜನನಿಬಿಡ ಪ್ರದೇಶಗಳ ಬದಲಿಗೆ ಇತರೆಡೆ ಕ್ವಾರಂಟೈನ್ ಮಾಡುವುದು ಸೂಕ್ತ. ಕೆ.ಬಿ. ಬಡಾವಣೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಯೋವೃದ್ಧರು, ಮಕ್ಕಳು ಇದ್ದಾರೆ. ಅತೀ ಸೂಕ್ಷ್ಮ ಪರಿಸ್ಥಿತಿ ಇರುವಾಗ ಕ್ವಾರಂಟೈನ್ ಮಾಡುವುದರಿಂದ ಇತರರಿಗೆ ತೊಂದರೆ ಆಗುತ್ತದೆ. ಅಲ್ಲದೆ ಕ್ವಾರಂಟೈನ್ ಮಾಡಬೇಕು ಎಂದುಕೊಂಡಿರುವ ಹಾಸ್ಟೆಲ್ನಲ್ಲೂ ಸಾಕಷ್ಟು ಸಮಸ್ಯೆಗಳಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಇಲ್ಲಿ ಕ್ವಾರಂಟೈನ್ ಮಾಡಬಾರದು. ಎಂತದ್ದೇ ಪರಿಸ್ಥಿತಿಯಲ್ಲಿ ಕ್ವಾರಂಟೈನ್ಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ