ಕೃಷಿ ಪರಿಕರ ಮಾರಾಟಕ್ಕಿಲ್ಲ ಆತಂಕ
ಜಿಲ್ಲಾಡಳಿತದ ಸಂಪೂರ್ಣ ಬೆಂಬಲಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ದಾಸ್ತಾನಿಗೆ ಸೂಚನೆ
Team Udayavani, Apr 13, 2020, 11:21 AM IST
ದಾವಣಗೆರೆ: ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿದರು
ದಾವಣಗೆರೆ: ಕೃಷಿ ಪರಿಕರ ಮಾರಾಟಗಾರರಿಗೆ ಯಾವುದೇ ಆತಂಕ ಬೇಡ. ಜಿಲ್ಲಾಡಳಿತದ ಸಂಪೂರ್ಣ ಬೆಂಬಲ ಸದಾ ಇರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ರೈತರಿಗೆ ಭರವಸೆ ನೀಡಿದ್ದಾರೆ.
ಭಾನುವಾರ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೃಷಿ ಪರಿಕರ ಮಾರಾಟಗಾರರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದ್ಯದಲ್ಲೇ ಮುಂಗಾರು ಹಂಗಾಮು ಆರಂಭವಾಗಲಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬ, ಕೀಟನಾಶಕ, ಯಂತ್ರೋಪಕರಣ ಸೇರಿದಂತೆ ಎಲ್ಲವನ್ನೂ ಮೇ 15ರೊಳಗಾಗಿ ದಾಸ್ತಾನು ಮಾಡಿಕೊಳ್ಳುವಂತೆ ತಿಳಿಸಿದರು.
ಕೃಷಿ ಚಟುವಟಿಕೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಆದಷ್ಟು ಕಡಿಮೆ ಸಿಬ್ಬಂದಿಯಿಂದ ಕಾರ್ಯ ನಿರ್ವಹಿಸಬೇಕು. ಸಿಬ್ಬಂದಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಮುಂತಾದ ಸುರಕ್ಷಾ ಪರಿಕರ ನೀಡಬೇಕು. ಕೃಷಿ ಇಲಾಖೆಯಿಂದ ಅಗತ್ಯವಿರುವ ಪಾಸ್ ನೀಡಲಾಗುವುದು. ಹಮಾಲಿಗಳಿಗೆ ತಮ್ಮ ಅಂಗಡಿ ವತಿಯಿಂದಲೇ ಐಡಿ ಕಾರ್ಡ್ ಅಥವಾ ಅನುಮತಿ ಪತ್ರ ನೀಡಿ. ಈ ಕ್ಷಣದಿಂದ ಯಾವುದೇ ನಿರ್ಬಂಧ ಇರುವುದಿಲ್ಲ. ಕೃಷಿಕರು ಮತ್ತು ಕೃಷಿ ಸಂಬಂ ಧಿತರನ್ನು ಲಾಕ್ಡೌನ್ ಕ್ರಮದಿಂದ ಸಡಿಲಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಗುರುತಿನ ಚೀಟಿ ನೀಡಿರಿ. ಚೆಕ್ಪೋಸ್ಟ್ಗಳಲ್ಲಿ ತಡೆಯದಂತೆ ಪೊಲೀಸರಿಗೆ ಸೂಚನೆ ನೀಡಲಾಗುವುದು. ಆದರೆ, ಗುರುತಿನ ಚೀಟಿಗಳು ಯಾವುದೇ ಕಾರಣಕ್ಕೂ ದುರುಪಯೋಗವಾಗಬಾರದು. ಕೃಷಿಗೆ ಪೂರಕವಾದ ಟ್ರ್ಯಾಕ್ಟರ್ ರಿಪೇರಿ, ಬಿಡಿ ಭಾಗಗಳ ಮಾರಾಟಕ್ಕೆ ಅನುಮತಿ ಇದ್ದು, ಹಾಗೂ ಕೆಲವೊಂದು ಕೊಯ್ಲು ಯಂತ್ರಗಳನ್ನು ಆಂಧ್ರ ಪ್ರದೇಶದಿಂದ ತರಿಸಿಕೊಳ್ಳಬೇಕಾಗುತ್ತದೆ. ಅದಕ್ಕಾಗಿ ಅಲ್ಲಿನ ಜಿಲ್ಲಾ ಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದು ತಿಳಿಸಿದರು.
ಕೃಷಿ ಪರಿಕರ ವರ್ತಕರ ಸಂಘದ ಅಧ್ಯಕ್ಷ ನಾಗರಾಜು ಮಾತನಾಡಿ, 500 ಸರಬರಾಜುದಾರರಿದ್ದು, ಅವರ ಬಳಿ ಸಹಾಯಕರಾಗಿ ಒಂದಿಬ್ಬರು ಕೆಲಸ ಮಾಡಬೇಕಾಗುತ್ತದೆ. ಅವರಿಗೆ ಪಾಸ್ ವ್ಯವಸ್ಥೆ ಮಾಡಬೇಕು. ಟ್ರಾÂಕ್ಟರ್ ಗ್ಯಾರೇಜ್ಗಳನ್ನು ನಿರ್ದಿಷ್ಟ ಅವ ಧಿಯಲ್ಲಿ ಅಥವಾ ದಿನ ಪೂರ್ತಿ ತೆರೆಯುವಂತೆ ನೋಡಿಕೊಳ್ಳಬೇಕು. ಹಮಾಲಿಗಳಿಗೆ ಗುರುತಿನ ಚೀಟಿ ವಿತರಿಸಬೇಕು. ಬಿತ್ತನೆ ಬೀಜ ಹೊರರಾಜ್ಯದಿಂದ ಬರಬೇಕಾಗಿದ್ದು, ಇದಕ್ಕೆ ಅವಕಾಶ ಮಾಡಿಕೊಡಬೇಕು. ಹಮಾಲರಿಗೆ 1 ಸಾವಿರದಷ್ಟು ಆಹಾರದ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಕೃಷಿಗೆ ಸಂಬಂಧಿಸಿದ ಯಾವುದೇ ರೀತಿಯ ತೊಂದರೆಗಳಿದ್ದಲ್ಲಿ, ಚೆಕ್ಪೋಸ್ಟ್ಗಳಲ್ಲಿ ಕೃಷಿಗೆ ಸಂಬಂಧಿ ಸಿದ ಗಾಡಿಗಳನ್ನು ತಡೆದರೆ ಸಹಾಯವಾಣಿ 1077ಗೆ ಕರೆ ಮಾಡಿ ತಿಳಿಸಿದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮಿಕಾಂತ್ ಬೊಮ್ಮನ್ನಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್