ಲಾರಿಯಲ್ಲಿ ಯುಪಿಗೆ ಹೊರಟವರಿಗೆ‌ ತಡೆ


Team Udayavani, May 16, 2020, 12:08 PM IST

16-May-2

ದಾವಣಗೆರೆ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ (ಕಾಶಿ) ಹೊರಟಿದ್ದವರನ್ನು ಶಿವಪ್ಪಯ್ಯ ಸರ್ಕಲ್‌ ಬಳಿ ವಿಚಾರಣೆಗೊಳಪಡಿಸಿದ ಸಂದರ್ಭ.

ದಾವಣಗೆರೆ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ (ಕಾಶಿ) ಮತ್ತು ಪ್ರತಾಪಘಡಕ್ಕೆ ತೆರಳುತ್ತಿದ್ದ 70ಕ್ಕೂ ಹೆಚ್ಚು ಜನರನ್ನು ಶುಕ್ರವಾರ ನಗರದಲ್ಲಿ ಪೊಲೀಸರು ತಡೆ ಹಿಡಿದ ಘಟನೆ ನಡೆದಿದೆ.

ದಾವಣಗೆರೆ ನಗರದ ರಸ್ತೆ ಬದಿಗಳಲ್ಲಿ ಪಾನಿಪುರಿ, ಟೀ ಮಾರಾಟ ಮಾಡುತ್ತಿದ್ದವರು ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಹೇಗಾದರೂ ಮಾಡಿ ತಮ್ಮ ಸ್ವಂತ ಊರುಗಳಿಗೆ ತೆರಳಬೇಕೆಂದು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಶಿವಪ್ಪಯ್ಯ ವೃತ್ತದ ಬಯಲು ಜಾಗದಲ್ಲಿ ಲಾರಿಯೊಂದರಲ್ಲಿ ತೆರಳುತ್ತಿರುವ ಬಗ್ಗೆ ಮಾಹಿತಿ ಪಡೆದ ಕೆಟಿಜೆ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಎಲ್ಲರ ವಿಚಾರಣೆ ನಡೆಸಿದರು.

ದಾವಣಗೆರೆಯಲ್ಲಿ ಹಲವಾರು ದಿನಗಳಿಂದ ಪಾನಿಪುರಿ, ಟೀ ಮಾರಾಟ ಇತರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಲಾಕ್‌ ಡೌನ್‌ ಆದ ಮೇಲೆ ವ್ಯಾಪಾರ ನಡೆಸಲು ಆಗುತ್ತಲೇ ಇಲ್ಲ. ಎಷ್ಟು ದಿನಗಳ ಕಾಲ ಕೆಲಸ ಇಲ್ಲದೆ ಮನೆಯಲ್ಲಿ ಇರಲಿಕ್ಕಾಗುತ್ತದೆ. ಬೇರೆ ರಾಜ್ಯದಲ್ಲಿ ದುಡಿಮೆ ಇಲ್ಲದೆ ಜೀವನ ನಡೆಸುವುದು ಆಗುವುದೇ ಇಲ್ಲ. ಹಾಗಾಗಿ ಏನಾದರೂ ಮಾಡಿ ನಮ್ಮ ಊರಿಗೆ ಹೋಗಬೇಕು ಅಂದುಕೊಂಡಿದ್ದೇವೆ. ಏನೇ ಆದರೂ ಊರಿಗೆ ಹೋಗಿಯೇ ಹೋಗುತ್ತೇವೆ ಎಂದು ತಮ್ಮ ಊರಿಗೆ ತೆರಳು ಅಣಿಯಾಗಿದ್ದ ಅನೇಕರು ತಿಳಿಸಿದರು.

ಎಂಸಿಸಿ ಎ, ಬಿ ಬ್ಲಾಕ್‌ನಲ್ಲಿ ತಿಂಗಳಿಗೆ 6,500 ರೂಪಾಯಿ ಬಾಡಿಗೆಯಂತೆ ಇದ್ದೇವೆ. ನಮ್ಮ ಮನೆಯ ಮಾಲಿಕರು ಮನೆ ಖಾಲಿ ಮಾಡುವಂತೆ ಹೇಳಿಲ್ಲ. ಮನೆ ಬಿಡುವಂತೆಯೂ ಒತ್ತಾಯ ಮಾಡುತ್ತಿಲ್ಲ. ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ. ನಿಮ್ಮ ಕೈಯಲ್ಲಿ ದುಡ್ಡು ಇದ್ದರೆ ಬಾಡಿಗೆ ಕೊಡಿ, ಇಲ್ಲ ಅಂದರೆ ಮುಂದೆ ಕೊಡಿ ಎಂದು ಹೇಳುತ್ತಾರೆ. ದುಡಿಮೆಯೇ ಇಲ್ಲ ಎಂದ ಮೇಲೆ 2-3 ತಿಂಗಳ ಬಾಡಿಗೆ ನೀಡಲು ಆಗುವುದೇ ಇಲ್ಲ. ಹಾಗಾಗಿ ನಮ್ಮ ಊರಿಗೆ ಹೋಗುತ್ತಿದ್ದೇವೆ ಎಂದು ಅಳಲು ವ್ಯಕ್ತಪಡಿಸಿದರು.

ಕಾಶಿ (ಪ್ರಯಾಗ್‌ರಾಜ್‌), ಪ್ರತಾಪ್‌ಘಡ್‌ ಗೆ ಹೋಗಬೇಕು ಎಂದು ಸೇವಾ ಸಿಂಧು ಯೋಜನೆಯಡಿ ಅಪ್ಲಿಕೇಷನ್‌ ಹಾಕಿದ್ದೇವೆ. ಮೂರು ದಿನಗಳಿಂದ ಜಿಲ್ಲಾಧಿಕಾರಿ ಆμàಸ್‌ಗೆ ನಡೆದುಕೊಂಡು ಹೋಗುವುದು, ರಾತ್ರಿ ತನಕ ಕಾಯುವುದು, ಪುನಃ ಬರುವುದೇ ಆಗುತ್ತಿದೆ. ಜಿಲ್ಲಾಡಳಿತ ನಮಗೆ ಅನುಮತಿಯನ್ನೇ ನೀಡುತ್ತಿಲ್ಲ. ನಮಗೆ ಅನುಮತಿ ಕೊಟ್ಟರೆ ನಮ್ಮ ಊರುಗಳಿಗೆ ಹೋಗಿ ಹೇಗೋ ಜೀವನ ಮಾಡುತ್ತೇವೆ. ನಮಗೇನು ಬೇಡ. ಊರಿಗೆ ಹೋಗಲಿಕ್ಕೆ ಅವಕಾಶ ಕೊಟ್ಟರೆ ಸಾಕು ಎಂದು ಗೋಗರೆದರು.

ನಮ್ಮ ಊರುಗಳಿಗೆ ಹೋದರೂ ನಮ್ಮ ಮನೆಗೆ ಹೋಗಲಿಕ್ಕೆ ಆಗುವುದಿಲ್ಲ. 14 ದಿನ ಕ್ವಾರಂಟೈನ್‌ನಲ್ಲಿ ಇರಬೇಕು ಎಂಬುದು ಗೊತ್ತಿದೆ. ಅಲ್ಲಿ ಕಷ್ಟವಾದರೂ ಪರವಾಗಿಲ್ಲ. ನಾವು ಹೋಗಲಿಕ್ಕೆ ಅವಕಾಶ ಕೊಟ್ಟರೆ ಸಾಕು. ನನ್ನ ಮಗ ಬಹಳ ದಿನ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ದುಡ್ಡೇ ಇಲ್ಲ. ಹಂಗಾಗಿ ಹಾಸ್ಪಿಟಲ್‌ ಗೆ ಅಡ್ಮಿಟ್‌ ಮಾಡಲಿಕ್ಕೂ ಆಗುತ್ತಿಲ್ಲ ಎಂದು ಅಜಯ್‌ ಕುಮಾರ್‌ ಎಂಬಾತ ಅಳಲು ತೋಡಿಕೊಂಡರು. ಹೆಂಗೋ ಊರಿಗೆ ಹೋಗುತ್ತೇವೆ ಅಂತ ಮನೆ ಖಾಲಿ ಮಾಡಿಕೊಂಡು ಸಾಮಾನು ಎಲ್ಲಾ ತೆಗೆದುಕೊಂಡು ಬಂದಿದ್ದೇವೆ. ಆ ಕಡೆ ಊರಿಗೆ ಹೋಗುವಂತೆ ಇಲ್ಲ. ಈ ಕಡೆ ನಾವು ಬಾಡಿಗೆ ಇದ್ದ ಮನೆಗೂ ಹೋಗುವಂತಿಲ್ಲ.
ಸಣ್ಣ ಮಕ್ಕಳನ್ನು ಕಟ್ಟಿಕೊಂಡು ಎಲ್ಲಿ ಅಂತಾ ಇರೋದು ಎಂದು ಪ್ರಶ್ನಿಸಿದರು.

70 ಜನ ಇದ್ದರು
ತಮ್ಮ ಊರುಗಳಿಗೆ ಹೋಗಬೇಕು ಎಂದು ನಿರ್ಧರಿಸಿದವರು ಪ್ರತಿ ದಿನ ಮಾರುಕಟ್ಟೆಗೆ ಹೋಗಿ ತಮ್ಮ ರಾಜ್ಯಕ್ಕೆ ಹೋಗುವ ಲಾರಿ ಇತರೆ ವಾಹನ ಹುಡುಕಾಟ ನಡೆಸುತ್ತಿದ್ದರು. ಕೊನೆಗೂ ಉತ್ತರ ಪ್ರದೇಶಕ್ಕೆ ವಾಪಾಸ್ಸಾಗುವ ಲಾರಿ ಸಿಕ್ಕಿದೆ. ಚಾಲಕನೊಂದಿಗೆ ಮಾತುಕತೆ ಮುಗಿಸಿಕೊಂಡು ಊರಿಗೆ ತೆರಳಲು ಸಜ್ಜಾಗಿ ಶಿವಪ್ಪಯ್ಯ ವೃತ್ತದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಲಾರಿ ಹತ್ತಲು ಬಂದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.  70ಕ್ಕೂ ಹೆಚ್ಚು ಜನರು ಹೊರಟ್ಟಿದ್ದರು

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

5-dvg

Davangere: ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮತ ಬೇಟೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.