ನಿಲ್ಲದ ಕೋವಿಡ್ ಸಾವು-ನೋವು
ದಾವಣಗೆರೆ ಜಿಲ್ಲೆಯಲ್ಲಿ ವೃದ್ಧೆ ಸಾವು ಹೊಸದಾಗಿ ಹನ್ನೆರಡು ಜನರಿಗೆ ವಕ್ಕರಿಸಿದ ಸೋಂಕು
Team Udayavani, Jul 1, 2020, 12:13 PM IST
ದಾವಣಗೆರೆ: ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ವಿನೋಬ ನಗರ 2ನೇ ಮುಖ್ಯ ರಸ್ತೆಯ 9ನೇ ಕ್ರಾಸ್ನಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು. ನಗರಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್ ಉಸ್ತುವಾರಿ ವಹಿಸಿದ್ದರು
ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 12 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 50 ವರ್ಷದ ವೃದ್ಧೆ (ರೋಗಿ ನಂಬರ್ 14411)ಯನ್ನು ಸೋಮವಾರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಮಂಗಳವಾರ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 8ಕ್ಕೇರಿದೆ.
ರೋಗಿ ನಂಬರ್ 9890ರ ಸಂಪರ್ಕದಿಂದ 40 ವರ್ಷದ ಮಹಿಳೆ (ರೋಗಿ ನಂಬರ್ 14400), 16 ವರ್ಷದ ಬಾಲಕಿಗೆ (ರೋಗಿ ನಂಬರ್ 14401) ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್ 10387ರ ಸಂಪರ್ಕದಿಂದ 50 ವರ್ಷದ ಮಹಿಳೆ (ರೋಗಿ ನಂಬರ್ 14406), 27 ವರ್ಷದ ವ್ಯಕ್ತಿ (ರೋಗಿ ನಂಬರ್ 14407), 26 ವರ್ಷದ ಮಹಿಳೆ (ರೋಗಿ ನಂಬರ್ 14408), 76 ವರ್ಷದ ವೃದ್ಧೆ (ರೋಗಿ ನಂಬರ್ 14409) ಸೋಂಕಿಗೆ ಒಳಗಾಗಿದ್ದಾರೆ. 75 ವರ್ಷದ ವೃದ್ಧ (ರೋಗಿ ನಂಬರ್ 14402), 35 ವರ್ಷದ ಮಹಿಳೆ (ರೋಗಿ ನಂಬರ್ 14403), 43 ವರ್ಷದ ವ್ಯಕ್ತಿ (ರೋಗಿ ನಂಬರ್ 14404), 9 ವರ್ಷದ ಬಾಲಕಿ (ರೋಗಿ ನಂಬರ್ 14405) ಸೋಂಕು ಕಾಣಿಸಿಕೊಂಡಿದೆ.
ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ 34 ವರ್ಷದ ವ್ಯಕ್ತಿ (ರೋಗಿ ನಂಬರ್ 14410) ಸೋಂಕು ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 50 ವರ್ಷದ ವೃದ್ಧೆ (ರೋಗಿ ನಂಬರ್ 14411) ಸೋಂಕಿಗೆ ತುತ್ತಾಗಿ, ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮೃತ ವೃದ್ಧೆಯಲ್ಲಿ ಸೋಂಕು ಇದ್ದಿದ್ದು ಖಚಿತವಾಗಿದೆ.
ಕೋವಿಡ್ ನಿಂದ ಗುಣಮುಖರಾದ ರೋಗಿ ನಂಬರ್ 9889, 9894,9893, 9892, 10385, 10388, 10387, 10389 ಮಂಗಳವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 309 ಜನರಿಗೆ ಸೋಂಕು ತಗುಲಿದ್ದು, ಮಂಗಳವಾರ 8 ಜನರು ಒಳಗೊಂಡಂತೆ 265 ಜನರು ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎಂಟು ಜನರು ಮೃತಪಟ್ಟಿದ್ದು, 36 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ