ಮತ್ತೊಂದು ಕೋವಿಡ್ ಪಾಸಿಟಿವ್
ಜಾಲಿ ನಗರದ ವೃದ್ಧೆಗೆ ಸೋಂಕು83ಕ್ಕೇರಿದ ಸಕ್ರಿಯ ಪ್ರಕರಣಗಳ ಸಂಖ್ಯೆ
Team Udayavani, May 17, 2020, 10:33 AM IST
ದಾವಣಗೆರೆ: ಜಾಲಿನಗರ ಕಂಟೇನ್ಮೆಂಟ್ ಝೋನ್ಗೆ ಶನಿವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲಿಸಿದರು. ಜಾಲಿನಗರ ಇನ್ಸಿಡೆಂಟ್ ಕಮಾಂಡರ್ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಘವೇಂದ್ರಸ್ವಾಮಿ ಇತರರು ಇದ್ದರು.
ದಾವಣಗೆರೆ: ದಾವಣಗೆರೆಯಲ್ಲಿ ಶನಿವಾರ ಹೊಸದಾಗಿ ಒಂದು ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, ಈಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸಕ್ರಿಯ ಪ್ರಕರಣ 83ಕ್ಕೇರಿದೆ.
ಜಾಲಿನಗರದ 65 ವರ್ಷದ ಮಹಿಳೆಗೆ (ರೋಗಿ ನಂಬರ್-1061) ಸೋಂಕು ತಗುಲಿದೆ. ಅವರಿಗೆ ರೋಗಿ ನಂಬರ್ -533(ಸ್ಟಾಫ್ ನರ್ಸ್) ಸಂಪರ್ಕದಿಂದ ಕೋವಿಡ್ ಸೋಂಕು ವ್ಯಾಪಿಸಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟಿರುವ ವ್ಯಕ್ತಿಗಳು ವಾಸಿಸುವ ಒಟ್ಟು ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ಗಳನ್ನಾಗಿ ಆದೇಶಿಸಲಾಗಿದೆ. ಬಾಷಾನಗರ, ಜಾಲಿನಗರ, ಇಮಾಂ ನಗರ, ಬೇತೂರು ರಸ್ತೆ, ಎಸ್.ಪಿ.ಎಸ್.ನಗರ, ಶಿವನಗರ, ಕೆಟಿಜೆ ನಗರ ಹಾಗೂ ರೈತರ ಬೀದಿ ಕಂಟೈನ್ಮೆಂಟ್ ಝೋನ್ಗಳಾಗಿವೆ. ಈ ಝೋನ್ಗಳಲ್ಲಿನ ವಾಸಿಗಳ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮನೆಯಲ್ಲಿ ಪ್ರತ್ಯೇಕವಾಗಿ ಒಟ್ಟು 145 ಹಾಗೂ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ 465 ಮಂದಿಯನ್ನು ಇರಿಸಲಾಗಿದೆ. ಕೋವಿಡ್ ಸೋಂಕು ಪರೀಕ್ಷೆ ಸಂಬಂಧ ಶನಿವಾರ ಒಟ್ಟು 374 ಮಂದಿಯ ಗಂಟಲು ಸ್ವಾಬ್ ಸಂಗ್ರಹಿಸಲಾಗಿದ್ದು, ಇದುವರೆಗೆ ಒಟ್ಟು 3250 ಮಂದಿ ಗಂಟಲು ಸ್ವಾಬ್ ಸಂಗ್ರಹಿಸಿದಂತಾಗಿದೆ. 201 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಎಂಬುದಾಗಿ ಬಂದಿದ್ದು, ಇದುವರೆಗೂ ಲ್ಯಾಬ್ಗೆ ಕಳುಹಿಸಲಾದ ಸ್ಯಾಂಪಲ್ಗಳಲ್ಲಿ ಒಟ್ಟು 2065 ಸ್ಯಾಂಪಲ್ ನೆಗೆಟಿವ್ ಎಂಬ ವರದಿ ಬಂದಿವೆ.
ಇನ್ನೂ 1096 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ. ರೋಗಿ ನಂಬರ್-1061 ಸೇರಿ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಸೋಂಕಿತರ ಒಟ್ಟು 89 ಆಗಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?