ಮೂವರಿಗೆ ಪಾಸಿಟಿವ್‌-ಐವರು ಡಿಸ್ಚಾರ್ಜ್‌

ಕೋವಿಡ್ ಗುಣಪಡಿಸಿದ ವೈದ್ಯರು,ಸಿಬ್ಬಂದಿ-ಜಿಲ್ಲಾಡಳಿತಕ್ಕೆ ಸೋಂಕು ಮುಕ್ತನಿಂದ ನಮನ

Team Udayavani, May 22, 2020, 11:33 AM IST

22-May-03

ದಾವಣಗೆರೆ: ಕೋವಿಡ್ ಸೋಂಕಿನಿಂದ ಗುಣಮುಖರಾದ ವ್ಯಕ್ತಿ ಬೀಳ್ಕೊಟ್ಟ ಸಂದರ್ಭದಲ್ಲಿ ಗುರುವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು.

ದಾವಣಗೆರೆ: ಗುರುವಾರ ಸಹ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಗುಣಮುಖರಾದ ಐವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ. 6 ವರ್ಷದ ಬಾಲಕಿ, 15 ವರ್ಷದ ಬಾಲಕ ಹಾಗೂ 68 ವರ್ಷದ ಮಹಿಳೆಗೆ ಸೋಂಕು ವ್ಯಾಪಿಸಿರುವುದು ದೃಢಪಟ್ಟಿದ್ದು, ಈ ಮಧ್ಯೆ ಚಿಕಿತ್ಸೆಯಿಂದ ಗುಣಮುಖರಾದ ಐವರನ್ನು ಡಿಸ್ಚಾರ್ಜ್‌ ಮಾಡಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಸಂಜೆ ಸರಳ ಕಾರ್ಯಕ್ರಮದ ಮೂಲಕ ಐವರಿಗೆ ಚಪ್ಪಾಳೆ ತಟ್ಟುತ್ತಾ, ಪುಷ್ಪವೃಷ್ಟಿಗೈದು ಅಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಆಧಿಕಾರಿಗಳು, ಸಿಬ್ಬಂದಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲೆಯಲ್ಲಿ ಮೂರು ಕೋವಿಡ್ ಪಾಸಿಟಿವ್‌ ಪ್ರಕರಣ ವರದಿಯಾಗಿದೆ. ರೋಗಿ-1483, 1485 ಹಾಗೂ 1488 ಜಾಲಿನಗರಕ್ಕೆ ಸಂಬಂಧಟ್ಟವರು. ಕಂಟೈನ್‌ಮೆಂಟ್‌ ಝೋನ್‌ನಲ್ಲಿರುವ ಎಪಿಸೆಂಟರ್‌ ವಾಸಿಯಾದ 15 ವರ್ಷದ ಬಾಲಕ (ರೋಗಿ-1483)ನಿಗೆ ಪಾಸಿಟಿವ್‌ ದೃಢಪಟ್ಟಿದೆ. 68 ವರ್ಷದ ಮಹಿಳೆ (ರೋಗಿ-1485)ಗೆ ರೋಗಿ-667ರ ದ್ವಿತೀಯ ಸಂಪರ್ಕ ಹಾಗೂ 6 ವರ್ಷದ ಬಾಲಕಿ (ರೋಗಿ-1489)ಗೆ ರೋಗಿ-634ರ ಸಂಪರ್ಕದಿಂದ ಸೋಂಕು ವ್ಯಾಪಿಸಿದೆ ಎಂದರು.

ಕೋವಿಡ್ ಸೋಂಕಿನಿಂದ ಗುಣಮುಖರಾದ ಐವರನ್ನು (ಪಿ-618, 620, 623, 628, 664) ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಇವರಲ್ಲಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರಾಗಿದ್ದು, ಇದುವರೆಗೆ ಚಿಕಿತ್ಸೆಯಿಂದ ಗುಣಮುಖರಾದ ಒಟ್ಟು 14 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕೋವಿಡ್ ಸೋಂಕಿತ ಒಟ್ಟು 115 ಮಂದಿಯಲ್ಲಿ ನಾಲ್ವರು ಮೃತಪಟ್ಟಿದ್ದು, 97 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು.

ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ, ಅವರಲ್ಲಿ ರೋಗ ನಿರೋಧಕಶಕ್ತಿ ಹೆಚ್ಚಿಸಿ ಆದಷ್ಟು ಬೇಗ ಗುಣಮುಖರಾನ್ನಾಗಿಸುವ ಪ್ರಯತ್ನ ಮಾಡಲಾಗುತ್ತಿದೆ. 14 ದಿನ ಚಿಕಿತ್ಸೆ ಮುಗಿದವರದ್ದು ಮೊತ್ತೂಮ್ಮೆ ಸ್ಯಾಂಪಲ್‌ ಸಂಗ್ರಹಿಸಿ ಕಳುಹಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಆದಷ್ಟು ಬೇಗ ಎಲ್ಲರೂ ಗುಣಮುಖರಾಗುವ ವಿಶ್ವಾಸ ಇದೆ ಎಂದರು. ಒಟ್ಟು 1400 ಸ್ಯಾಂಪಲ್‌ ವರದಿ ಬರಬೇಕಿದೆ. ಇಂದು 601 ಸ್ಯಾಂಪಲ್‌ ಸಂಗ್ರಹಿಸಲಾಗಿದ್ದು, ಅದರಲ್ಲಿ ಶಿವಮೊಗ್ಗಕ್ಕೆ 200 ಸ್ಯಾಂಪಲ್‌ ಕಳುಹಿಸಿ ಕೊಡಲಾಗಿದೆ. ಕೆಲವು ಸ್ಯಾಂಪಲ್‌ಗ‌ಳನ್ನು ಖಾಸಗಿ ಆನಂದ್‌ ಡಯಾಗ್ನೋಸ್ಟಿಕ್‌ ಸೆಂಟರ್‌ ಹಾಗೂ ಉಳಿದ 60 ರಿಂದ 70 ಸ್ಯಾಂಪಲ್‌ಗ‌ಳನ್ನು ಸ್ಥಳೀಯ ಲ್ಯಾಬ್‌ಗ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದ ಜೆಜೆಎಂ ಲ್ಯಾಬ್‌ ತೆರೆಯಲಿದ್ದು, ಅಲ್ಲಿಗೂ ಕಳುಹಿಸಲಾಗುವುದು ಎಂದು ತಿಳಿಸಿದರು.

ಪಾಲಿಕೆ ಮೇಯರ್‌ ಬಿ.ಜಿ.ಅಜಯಕುಮಾರ್‌ ಮಾತನಾಡಿ, ಲಾಕ್‌ಡೌನ್‌ ಸಡಿಲಿಕೆ ನಂತರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದೆ. ಹಾಗಾಗಿ ಎಲ್ಲರೂ ಬಹಳಷ್ಟು ಜಾಗರೂಕತೆ ವಹಿಸಬೇಕು. ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಿ, ಸ್ಯಾನಿಟೆ„ಸರ್‌ ಉಪಯೋಗಿಸುವ ಮೂಲಕ ಕೋವಿಡ್ ನಿಯಂತ್ರಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು. ದಾವಣಗೆರೆಯಲ್ಲಿ ಈಗಾಗಲೇ ಸಕ್ರಿಯವಾದ 97 ಪ್ರಕರಣಗಳಿವೆ. ವೈದ್ಯರ ಪ್ರಕಾರ ಅವರಲ್ಲಿ 50 ಜನ 14 ದಿನ ಚಿಕಿತ್ಸೆ ಮುಗಿಸಿರುವವರು ಇದ್ದಾರೆ. ಅವರ ಎರಡನೇ ಸುತ್ತಿನ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ನಿಯಮಾನುಸಾರ ಅವರನ್ನು ಬಿಡುಗಡೆಗೊಳಿಸಲಾಗುವುದು. ಈ ಮಧ್ಯೆ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಮಮತಾ ಹೊಸಗೌಡರ್‌, ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ. ರಾಘವನ್‌, ಜಿಲ್ಲಾ ಶಸ್ತ್ರಚಿತ್ಸಕ ಸುಭಾಷಚಂದ್ರ, ತಹಶೀಲ್ದಾರ್‌ ಗಿರೀಶ್‌ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.