ದಾವಣಗೆರೆ ಜಿಲ್ಲೆಗೆ ಮೂರು ಲ್ಯಾಬ್
Team Udayavani, May 10, 2020, 11:13 AM IST
ದಾವಣಗೆರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ನಗರದ ಎಸ್ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್ ಉದ್ಘಾಟಿಸಿದ ಸಂದರ್ಭ
ದಾವಣಗೆರೆ: ನಗರದ ಹೊರವಲಯದಲ್ಲಿರುವ ಎಸ್ಎಸ್ ಆಸ್ಪತ್ರೆಯಲ್ಲಿನ ಪಿಸಿಆರ್ ಲ್ಯಾಬ್ನಲ್ಲಿ ಶನಿವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಕೋವಿಡ್ ವೈರಸ್ ಪರೀಕ್ಷಾ ಲ್ಯಾಬ್ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಲ್ಯಾಬ್ ಅನಿವಾರ್ಯತೆ ಬಗ್ಗೆ ಎಲ್ಲ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸಭೆ ನಡೆಸಿ, ಸರ್ಕಾರದ ವ್ಯವಸ್ಥೆ ಜೊತೆಗೆ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ ಲ್ಯಾಬ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದ್ದೆ.
ಈ ನಿಟ್ಟಿನಲ್ಲಿ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪನವರು ಅವರ ಕಾಲೇಜಿನಲ್ಲಿ ಕೋವಿಡ್ ಪರೀಕ್ಷೆಗೆ ಲ್ಯಾಬ್ ಸಜ್ಜುಗೊಳಿಸಿದ್ದಾರೆ ಎಂದರು. ಲ್ಯಾಬ್ ಪ್ರಾರಂಭಿಸಿದ್ದಕ್ಕಾಗಿ ಅವರಿಗೂ ಹಾಗೂ ಸಂಸ್ಥೆಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುವೆ. ದಾವಣಗೆರೆ ಜನತೆ ಇನ್ನು ಸ್ವಲ್ಪ ಸಮಾಧಾನದಿಂದ ಇರಬಹುದಾಗಿದೆ. ಹೆಚ್ಚುವರಿ ಪರೀಕ್ಷೆಗೆ ಇದರಿಂದ ಸಾಧ್ಯವಾಗಲಿದೆ. ದಾವಣಗೆರೆಜಿಲ್ಲೆಯಲ್ಲಿ ಇನ್ನೂ 2 ಲ್ಯಾಬ್ ಆರಂಭವಾಗಲಿವೆ.
ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಆರ್ ಎನ್ಟಿಸಿಪಿ ಮಷೀನ್ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವಾರದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರು ಅದನ್ನು ಉದ್ಘಾಟಿಸಲಿದ್ದಾರೆ. ಜತೆಗೆ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಕೂಡ ಇನ್ನೊಂದು ಲ್ಯಾಬ್ ತೆರೆಯಲಾಗುತ್ತಿದ್ದು, ಒಟ್ಟು ಮೂರು ಲ್ಯಾಬ್ ಜಿಲ್ಲೆಗೆ ಒದಗಿದಂತಾಗುತ್ತದೆ ಎಂದರು.
ಸಚಿವ ಬಿ.ಎ. ಬಸವರಾಜ್, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ, ಮೇಯರ್ ಅಜಯಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್ಪಿ ಹನುಮಂತರಾಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ