ವಾಹನ ಸಂಚಾರಕ್ಕೆ ಬೀಳದ ಮೂಗುದಾರ

ಕಟ್ಟುನಿಟ್ಟಾಗಿ ಪಾಲನೆ ಆಗದ ಲಾಕ್‌ಡೌನ್‌ ನಿಯಮ ವಸ್ತುಗಳ ಖರೀದಿಗೆ ಬೀದಿಗಿಳಿದ ಜನರು

Team Udayavani, Apr 16, 2020, 11:22 AM IST

16-April-02

ದಾವಣಗೆರೆ: 2ನೇ ಹಂತದ ಲಾಕ್‌ಡೌನ್‌ ನಡುವೆ ಜನರ ಮುಕ್ತ ಸಂಚಾರ.

ದಾವಣಗೆರೆ: ಮಹಾಮಾರಿ ಕೋವಿಡ್ ವೈರಸ್‌ ಹರಡುವ ಕದಂಬಬಾಹು ತಡೆಗಟ್ಟುವ ನಿಟ್ಟಿನಲ್ಲಿ ಎರಡನೇ ಹಂತದ ಲಾಕ್‌ ಡೌನ್‌ 2.0 ನಡುವೆಯೂ ದಾವಣಗೆರೆಯ ಅನೇಕ ರಸ್ತೆಯಲ್ಲಿ ಜನರು, ವಾಹನ ಸಂಚಾರ ಸಾಮಾನ್ಯವಾಗಿದೆ.

ಮೊದಲ ಹಂತದ ಲಾಕ್‌ಡೌನ್‌ ಏ.14ಕ್ಕೆ ಮುಗಿಯುತ್ತದೆ ಎಂದೇ ಭಾವಿಸಿದ್ದ ಜನರು ಸೋಮವಾರದಿಂದಲೇ ಓಡಾಟ ಹೆಚ್ಚಿಸಿದ್ದರು. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮೇ 3ರ ವರೆಗೆ ಎರಡನೇ ಹಂತದ ಲಾಕ್‌ಡೌನ್‌ ಘೋಷಣೆ ನಂತರ ಪರಿಸ್ಥಿತಿ ಬದಲಾಗುವ ನಿರೀಕ್ಷೆ ಇತ್ತು. ಏ.20ರ ವರೆಗೆ ಲಾಕ್‌ಡೌನ್‌ ಕಠಿಣವಾಗಿ ಇರಲಿದೆ ಎಂದು ಹೇಳಿದ ನಂತರ ಮೊದಲಗಿಂತಲೂ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಪಾಲನೆ ಆಗಲಿದೆ ಎಂಬ ನಿರೀಕ್ಷೆ ಅಕ್ಷರಶಃ ಠುಸ್‌ ಆಗುತ್ತಿದೆ.

ತರಕಾರಿ ಒಳಗೊಂಡಂತೆ ಅಗತ್ಯ ವಸ್ತುಗಳ ಖರೀದಿಗೆ ನೂರಾರು ಜನರು ಬೀದಿಗಿಳಿಯುತ್ತಿದ್ದಾರೆ. ದ್ವಿಚಕ್ರ ವಾಹನ, ಆಟೋರಿಕ್ಷಾ, ತರಕಾರಿ ಹೊತ್ತು ತಂದ ವಾಹನಗಳಿಂದ ಮಾರುಕಟ್ಟೆಯಲ್ಲಿನ ಜನಸಂದಣಿ ಹೆಚ್ಚಾಗಿದೆ. ರಸ್ತೆಗಳು ರಾಜಾರೋಷವಾಗಿಯೇ ಜನರು ಓಡಾಡಿದರು. ಬುಧವಾರ ಮಧ್ಯಾಹ್ನದ ವೇಳೆಗೆ ಕೆಲವೆಡೆ ಪೊಲೀಸರು ರಸ್ತೆಗೆ ಇಳಿದು ವಾಹನ ಸವಾರರ ಮುಕ್ತ ಓಡಾಟಕ್ಕೆ ಬ್ರೇಕ್‌ ಹಾಕತೊಡಗಿದರು. ಕೆಲವಾರು ವಾಹನ ವಶಕ್ಕೆ ತೆಗೆದು ಕೊಂಡರು. ದಾವಣಗೆರೆಯ ಪ್ರಮುಖ ರಸ್ತೆಯ ಅನೇಕ ಕಡೆ ಬ್ಯಾರಿಕೇಡ್‌ ಹಾಕಿ, ಸಂಚಾರ ನಿರ್ಬಂಧಿಸಿದ್ದರೂ ಪರ್ಯಾಯ ಮಾರ್ಗದಲ್ಲಿ ಜನರು ಒಂದಿಲ್ಲ ಒಂದು ಕೆಲಸದ ಬಗ್ಗೆ ಹೇಳುತ್ತಾ ರಸ್ತೆಗೆ ಇಳಿಯುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಡಾವಣೆಗಳಲ್ಲಿ ಯಾವುದೇ ನಿರ್ಬಂಧ ಇಲ್ಲದೆ ವಾಹನ, ಜನರ ಸಂಚಾರ ಇದ್ದೇ ಇರುತ್ತದೆ. ಸಂಜೆಯಾಯಿತೆಂದರೆ ಲಾಕ್‌ಡೌನ್‌… ಎಂಬುದೇ ಇರದಂತಾಗುತ್ತಿದೆ. ಜನರು ಬಹಳ ರಿಲ್ಯಾಕ್ಸ್‌ ಮೂಡ್‌ ನಲ್ಲಿ ಓಡಾಡುವುದು ಕಂಡು ಬರುತ್ತದೆ. ಕೋವಿಡ್ ಮಹಾಮಾರಿ ವಕ್ಕರಿಸುವುದ ತಡೆಯಲು ಎಲ್ಲರೂ ಮನೆಯಲ್ಲೇ ಇರಬೇಕು. ತೀರಾ ತೀರಾ ತುರ್ತು ಸಂದರ್ಭ ಇದ್ದಾಗ ಮಾತ್ರ ಮನೆಯಿಂದ ಹೊರ ಬರಬೇಕು… ಎಂದು ಗೋಗರೆದರೂ ಜನರು ಮಾತ್ರ ಕೇಳುವ ಸ್ಥಿತಿಯಲ್ಲೇ ಇಲ್ಲ. ಲಾಕ್‌ಡೌನ್‌ ಇದೇನಾ ಎಂಬ ಅನುಮಾನ ಬರುವಂತೆ ಮುಕ್ತವಾಗಿ, ಮನಸೋಇಚ್ಛೆಯಂತೆ ಓಡಾಡುವುದು ಕಂಡು ಬರುತ್ತಿದೆ.

ಲಾಕ್‌ಡೌನ್‌ ಜಾರಿ ನಂತರದ 22 ದಿನಗಳಲ್ಲಿ ಈವರೆಗೆ 3,496 ವಾಹನ ವಶಪಡಿಸಿಕೊಂಡು 14,73,500 ರೂಪಾಯಿಯಷ್ಟು ದಾಖಲೆ ಮೊತ್ತದ ದಂಡ ವಸೂಲಿ ಮಾಡಲಾಗಿದೆ. ಪ್ರತಿ ದಿನ 100ಕ್ಕೂ ಹೆಚ್ಚು ವಾಹನ ವಶಪಡಿಸಿಕೊಳ್ಳಲಾಗುತ್ತಿದೆ. ಪದೆ ಪದೇ ಲಾಕ್‌ಡೌನ್‌ ಉಲ್ಲಂಘಿಸುವರ ವಿರುದ್ಧ ಕ್ರಿಮಿನಲ್‌ ದಾವೆ ಹೂಡಲಾಗವುದು. ವಿಪತ್ತು ನಿರ್ವಹಣಾ ಕಾಯ್ದೆ-2005ರ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆಯ ಎಚ್ಚರಿಕೆಯ ನಡುವೆಯೂ ವಾಹನ ಸಂಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಈಗ ಕೃಷಿ ಸಂಬಂಧಿತ ಚಟುವಟಿಕೆಗೆ ವಿನಾಯತಿ ನೀಡಿರುವುದು ಸಂಚಾರ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಕೊರೊನಾ ಮಹಾಮಾರಿಯ ಎಚ್ಚರಿಕೆ ಗಂಟೆಯ ನಡುವೆಯೂ ಜನರು, ವಾಹನ ಸಂಚಾರಕ್ಕೆ ಕಡಿವಾಣ ಹಾಕುವುದು ಬೆಕ್ಕಿಗೆ ಗಂಟೆ ಕಟ್ಟುವವರು ಯಾರು… ಎನ್ನುವಂತಾಗುತ್ತಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.