Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
Team Udayavani, May 21, 2024, 12:11 PM IST
ದಾವಣಗೆರೆ: ಮರ ಬಿದ್ದು ಕಾರು ಜಖಂಗೊಂಡ ಘಟನೆ ಮೇ.21ರ ಮಂಗಳವಾರ ಬೆಳಗ್ಗೆ ಕೆ.ಆರ್. ರಸ್ತೆಯಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಕಾರಿನ ಚಾಲಕ ಹರಪನಹಳ್ಳಿ ತಾಲೂಕಿನ ಕವಲಹಳ್ಳಿ ಗ್ರಾಮದ ಜನಾರ್ದನ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದವವರು.
ದಾವಣಗೆರೆಯಿಂದ ಕವಲಹಳ್ಳಿಗೆ ತೆರಳುತ್ತಿದ್ದಾಗ ಅಶೋಕ ಚಿತ್ರಮಂದಿರ ಹಿಂಭಾಗದಲ್ಲಿ ಮರದ ಬೃಹತ್ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಕ್ಷಣಾರ್ಧದಲ್ಲಿ ವಿದ್ಯುತ್ ಕಂಬವೂ ಕಾರಿನ ಮೇಲೆ ಬಿದ್ದಿದೆ. ಆದರೆ, ಯಾವುದೇ ಅಪಾಯವಾಗಿಲ್ಲ.
ದಾವಣಗೆರೆಯಲ್ಲಿ ಗೊಬ್ಬರದ ಅಂಗಡಿ ಇದೆ. ಎಂದಿನಂತೆ ಕವಲಹಳ್ಳಿಗೆ ಹೋಗುತ್ತಿದ್ದೆ. ನನ್ನ ಮುಂದೆ ಹೋಗುತ್ತಿದ್ದ ವಾಹನದ ಮೇಲೆ ಸಣ್ಣ ಅರೆ ಬಿತ್ತು. ನೋಡ ನೋಡುತ್ತಿದ್ದಂತೆಯೇ ಮರದ ದೊಡ್ಡ ಕೊಂಬೆ, ವಿದ್ಯುತ್ ಕಂಬ ಬಿದ್ದವು. ದೇವರು ದೊಡ್ಡವನು ಏನೂ ಅಪಾಯ ಆಗಲಿಲ್ಲ ಎಂದು ಚಾಲಕ ಜನಾರ್ದನ್ ತಿಳಿಸಿದರು.
ಮರ ಬಿದ್ದ ಪರಿಣಾಮ ಸಂಚಾರಕ್ಕೆ ವ್ಯತ್ಯಯ ಆಗಿತ್ತು. ನಗರಪಾಲಿಕೆ, ಪೊಲೀಸ್ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.