
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ
Team Udayavani, Mar 23, 2023, 7:54 PM IST

ದಾವಣಗೆರೆ: ವ್ಯಕ್ತಿಯೊಬ್ಬನ ಕತ್ತು ಕೊಯ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಎಸ್.ಎಸ್.ಬಡಾವಣೆ ರಿಂಗ್ ರಸ್ತೆಯ ಆಫೀರ್ಸ್ ಕ್ಲಬ್ ಸಮೀಪ ಗುರುವಾರ ಬೆಳಗಿನ ಜಾವ ನಡೆದಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ (35) ಕೊಲೆಯಾದವ ಎಂದು ಗುರುತಿಸಲಾಗಿದೆ.
ಮಹಾಂತೇಶ್ ಪುಟ್ಟಪ್ಪ ಚೌರದ ದಾವಣಗೆರೆಯಲ್ಲಿ ವಿವಾಹವಾಗಿದ್ದು, ಆಗಾಗ ದಾವಣಗೆರೆಯ ಬುದ್ಧ ಬಸವ ನಗರಕ್ಕೆ ಬರುತ್ತಿದ್ದ. ಯುಗಾದಿ ಹಬ್ಬಕ್ಕಾಗಿ ದಾವಣಗೆರೆಗೆ ಆಗಮಿಸಿದ್ದನು. ಪತ್ನಿಯ ಮನೆಯಿಂದ ನಾಪತ್ತೆಯಾಗಿದ್ದವ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆಗೀಡಾಗಿರುವ ಮಹಾಂತೇಶ್ ಪುಟ್ಟಪ್ಪ ಚೌರದ ವಿರುದ್ಧ ಈಗಾಗಲೇ ಹಾವೇರಿ ಪೊಲೀಸ್ ಠಾಣೆಯಲ್ಲಿ ೧೦೯ ರಡಿ ಒಂದು ಪ್ರಕರಣ ದಾಖಲಾಗಿತ್ತು. ಅಲ್ಲದೆ ಈತ ಮದ್ಯವ್ಯಸನಿಯಾಗಿದ್ದನು ಎನ್ನಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ