ಬ್ರಾಹ್ಮಣ ಸಂಘದ ಅಭಿವೃದ್ಧಿಗೆ ಮುಂದಾಗಿ
Team Udayavani, Dec 2, 2021, 3:36 PM IST
ಶೃಂಗೇರಿ: ಬ್ರಾಹ್ಮಣ ಮಹಾಸಭೆಯಲ್ಲಿ ಬದಲಾವಣೆಗೆ ಪರ್ವ ಕಾಲವಾಗಿದೆ. ಬ್ರಾಹ್ಮಣರ ಮೇಲಿನ ಗೌರವ ಕುಸಿಯುತ್ತಿದೆ ಎಂದು ರಾಜ್ಯ ಬ್ರಾಹ್ಮಣ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದರು. ಪಟ್ಟಣದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್ ಮುಳುಗಡೆಗೆ ಕಾರಣರಾದವರ ಕೈಯಲ್ಲಿ ಮಹಾಸಭೆ ನಲುಗುತ್ತಿದ್ದು, ಬ್ಯಾಂಕಿನಲ್ಲಿ ಠೇವಣಿ ಇರಿಸಿದ್ದ 27 ಜನರು ಆತ್ಮಹತ್ಯೆ ಮಾಡಿಕೊಂಡಿದ್ದ ಅವರ ಜೀವಕ್ಕೆ ಬೆಲೆ ಇಲ್ಲವೇ. ಇಂತಹವರ ಕೈಯಲ್ಲಿ ಮಹಾಸಭಾ ಉಳಿಯುತ್ತದೆಯೇ. ಯಾವುದೇ ಸಂಘಟನೆ ಇರಲಿ ಉತ್ತಮ ನಾಯಕತ್ವದ ಅಗತ್ಯತೆ ಇದೆ. ಸಂಘದ ಅಭಿವೃದ್ಧಿಗಾಗಿ ಹಾಗೂ ಸದಸ್ಯರ ಸಮಸ್ಯೆಗಳನ್ನು ಅರಿತು ಅದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ದುಡಿಯುವ ಮನಸ್ಥಿತಿಃ ಇರಬೇಕು ಎಂದರು.
ತ್ರಿಮತಸ್ಥ ಬ್ರಾಹ್ಮಣರು ಒಗ್ಗೂಡಿ ಸಮುದಾಯಕ್ಕೆ ಅನನ್ಯ ಕೊಡುಗೆ ನೀಡುತ್ತಿದ್ದು, ಸಂಸ್ಕೃತಿ, ಸಂಸ್ಕಾರದ ಉನ್ನತಿಗಾಗಿ ನಾವು ಕಾರ್ಯನಿರ್ವಹಿಸಬೇಕು. ಶೈಕ್ಷಣಿಕವಾಗಿ ಪ್ರಗತಿ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಆರ್ಥಿಕ ಸಹಕಾರ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಬೇಕಿದೆ ಎಂದರು. ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್ ಮಾತನಾಡಿ, ಬ್ರಾಹ್ಮಣ ಸಮಾಜದಲ್ಲಿ 44 ಉಪ ಪಂಗಡಗಳಿದ್ದು, 40 ಲಕ್ಷ ಬ್ರಾಹ್ಮಣ ಸದಸ್ಯರು ರಾಜ್ಯದಲ್ಲಿದ್ದಾರೆ. ಕೇವಲ 40 ಸಾವಿರ ಸದಸ್ಯರು ನೋಂದಾಯಿಸಿದ್ದು, ಇದರಲ್ಲಿ 25 ಸಾವಿರ ಬೆಂಗಳೂರಿನಲ್ಲಿದ್ದಾರೆ. ಉಳಿದ 15 ಸಾವಿರ ಸದಸ್ಯರು ರಾಜ್ಯದಲ್ಲಿದ್ದಾರೆ. ಇದು ಬ್ರಾಹ್ಮಣ ಸಂಘಟನೆಯೇ ಎಂದು ಪ್ರಶ್ನಿಸಿದರು.
ಅಭ್ಯರ್ಥಿ ಎಸ್. ರಘುನಾಥ್ ಮಾತನಾಡಿ, ಕೋವಿಡ್ ಮಹಾಮಾರಿ ಸಮಯದಲ್ಲಿ ಅರ್ಚಕರು, ಅಡುಗೆಯವರು, ಹಿರಿಯ ನಾಗರಿಕರು, ಇನ್ನಿತರ ಬ್ರಾಹ್ಮಣ ಕುಟುಂಬಗಳಿಗೆ ದಿನಸಿ ಕಿಟ್ ನೀಡಲಾಗಿದೆ. ಹಿರಿಯರು, ಉತ್ಸಾಹಿ ಯುವ ಪೀಳಿಗೆ ನಮ್ಮ ತಂಡದ ಜೊತೆ ನಿರಂತರ ಸಮುದಾಯದ ಸೇವೆಗೆ ಶ್ರಮಿಸುತ್ತಿದೆ. ಅಧ್ಯಕ್ಷನಾಗಿ ಆಯ್ಕೆ ಆದಲ್ಲಿ ಸಂಘಟನೆಗೆ ಹಾಗೂ ಅಭಿವೃದ್ಧಿಗೆ ದಿನಕ್ಕೆ ಆರು ಗಂಟೆಗಳ ಕಾಲ ಮೀಸಲಿಡಲಾಗುವುದು ಎಂದರು. ಸಭೆಯಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಜಿ.ಎಂ. ಸತೀಶ್, ಪ್ರಧಾನ ಕಾರ್ಯದರ್ಶಿ ಬಿ.ಎಲ್. ರವಿಕುಮಾರ್, ಕೂಟ ಮಹಾಜಗತ್ತಿನ ಅಧ್ಯಕ್ಷ ನಾಗರಾಜ್, ಶಿವಳ್ಳಿ ಬ್ರಾಹ್ಮಣ ಸಂಘದ ವಿವೇಕಾನಂದ ಸುಂಕುರ್ಡಿ ಹಾಗೂ ಹೆಬ್ಟಾರ್ ಬ್ರಾಹ್ಮಣ ಸಭಾದ ಶ್ರೀಧರ್ ಅಣ್ಣುಕೊಡಿಗೆ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ