ಭೂ ಅಕ್ರಮ ಸ್ವಾಧೀನ ವಿರುದ್ಧ ಉಪವಾಸ ಸತ್ಯಾಗ್ರಹ: ಶಿವಾನಂದ
Team Udayavani, Oct 20, 2021, 6:14 PM IST
ಸಾಗರ: ತಾಲೂಕಿನ ಬಳಸಗೋಡು ಸರ್ವೇ ನಂ.36ರಲ್ಲಿ 3.20 ಎಕರೆ ಜಾಗವನ್ನು ಅಕ್ರಮವಾಗಿ ಸ್ವಾ ಧೀನಪಡಿಸಿಕೊಂಡಿದ್ದಾರೆಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಮೊದಲಾದ ಜನಪರ ಸಂಘಟನೆಗಳ ಆಶ್ರಯದಲ್ಲಿ ಅ. 21ರಂದು ಬೆಳಗ್ಗೆ 11 ಗಂಟೆಯಿಂದ ಉಪವಿಭಾಗಾ ಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಬಳಸಗೋಡು ಅವರು ಹಿಂದೆ ಜಾಗ ಒತ್ತುವರಿ ಬಗ್ಗೆ ಉಪವಿಭಾಗಾಧಿ ಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಜಿಲ್ಲಾ ಧಿಕಾರಿಗಳ ಆದೇಶದಂತೆ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಮತ್ತೆ ಒತ್ತುವರಿ ಮಾಡಿ ರಾತ್ರೋರಾತ್ರಿ ಮನೆ ಕಟ್ಟಲಾಗಿದೆ. ಇದಕ್ಕೆ ಕೆಲವು ಅಧಿ ಕಾರಿಗಳು ಬೆಂಬಲ ನೀಡುತ್ತಿದ್ದು, ತಕ್ಷಣ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವ ಧಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು.
ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಬಳಸಗೋಡು ಮಾತನಾಡಿ, ಕೆಲವರು ಈ ಅಕ್ರಮ ಒತ್ತುವರಿಯ ಹಿಂದೆ ಇದ್ದಾರೆ. ಈ ಜಾಗವು ಕೋಟ್ಯಂತರ ರೂಪಾಯಿ ಬೆಲೆ ಬಾಳುತ್ತಿದ್ದು, ಹಿಂದಿನ ಉಪ ವಿಭಾಗಾಧಿ ಕಾರಿಗಳಾಗಿದ್ದ ಪ್ರಸನ್ನ ಅವರು ಜಾಗ ತೆರವಿಗೆ ಸೂಚನೆ ನೀಡಿದ್ದರು. ಉಪವಾಸ ಸತ್ಯಾಗ್ರಹ ಕುಳಿತಿದ್ದಾಗ ಜಿಲ್ಲಾ ಧಿಕಾರಿಗಳು ತೆರವಿಗೆ ಆದೇಶ ಮಾಡಿದ್ದರು. ಸ್ವಲ್ಪದಿನಗಳ ಕಾಲ ಸುಮ್ಮನಿದ್ದ ಭೂ ಒತ್ತುವರಿದಾರರು ಈಗ ಅದೇ ಜಾಗದಲ್ಲಿ ಯಾರಧ್ದೋ ಕುಮ್ಮಕ್ಕಿನಿಂದ ರಾತ್ರೋರಾತ್ರಿ ಕಟ್ಟಡ ನಿರ್ಮಿಸಿ ಭೂ ಕಬಳಿಕೆ ಮಾಡುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳ ಕೈವಾಡದ ಜೊತೆಗೆ ರಿಯಲ್ ಎಸ್ಟೇಟ್ ಮಾμಯಾ ಇದೆ ಎಂದು ದೂರಿದರು. ಗೋಷ್ಠಿಯಲ್ಲಿ ಅರಣ್ಯ ಮೂಲ ಬುಡಕಟ್ಟು ಒಕ್ಕೂಟದ ಜಿಲ್ಲಾ ಸಂಚಾಲಕ ರಾಮಣ್ಣ ಹಸಲರು, ಸಾಮಾಜಿಕ ಕಾರ್ಯಕರ್ತರಾದ ರಮೇಶ್ ಐಗಿನಬೈಲು, ಎಂ.ಎಸ್. ಶಶಿಕಾಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ
Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ
ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ
MUST WATCH
ಹೊಸ ಸೇರ್ಪಡೆ
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ