ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಪಿಂಚಣಿಗಾಗಿ ಸಂಘದ ನೇತೃತ್ವದಲ್ಲಿ ನಿರಂತರವಾಗಿ ಸಂಬಂಧಪಟ್ಟವರಿಗೆ ಮನವಿಗಳನ್ನು ಸಲ್ಲಿಸುವುದು

Team Udayavani, Oct 19, 2021, 4:54 PM IST

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ದಾವಣಗೆರೆ: ನೌಕರರ ಮೂಲಭೂತ ಹಕ್ಕಾಗಿರುವಂತಹ ಪಿಂಚಣಿಯನ್ನು ನೀಡಲೇಬೇಕು ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಜಿ. ಹನುಮಂತಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಸೋಮವಾರ ಜಿಲ್ಲಾ ಗುರುಭವನದಲ್ಲಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಏರ್ಪಡಿಸಿದ್ದ ಪಿಂಚಣಿ ಹೋರಾಟದ ಕುರಿತು ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಪಿಂಚಣಿ ಎಲ್ಲ ನೌಕರರ ಮೂಲಭೂತ ಹಕ್ಕು. ಸರ್ಕಾರ ನೌಕರರ ಮುಂದಿನ ಜೀವನ ಭವಿಷ್ಯದ ದೃಷ್ಟಿಯಿಂದ ಪಿಂಚಣಿ ನೀಡಬೇಕು ಎಂದರು.

ಪಿಂಚಣಿ ವ್ಯವಸ್ಥೆ ಜಾರಿಗಾಗಿ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ನಿರಂತರವಾಗಿ ಮನವಿ ಸಲ್ಲಿಕೆ, ವಿವಿಧ ಹಂತದ ಹೋರಾಟ ನಡೆಸಲಾಗುತ್ತಿದೆ. ಆದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿಲ್ಲ. ಸರ್ಕಾರ ಶೀಘ್ರವೇ ಪಿಂಚಣಿ ವ್ಯವಸ್ಥೆ ಮಾಡಬೇಕು. ಪಿಂಚಣಿ ನೀಡುವುದರಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆ ಮತ್ತು ಕಾನೂನು ತೊಡಕು ಆಗುವುದೇ ಇಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ನೀಡುವ ಮೂಲಕ ವೇತನ ನೀಡುತ್ತಿರುವ ಸರ್ಕಾರ ನೌಕರರಿಗೆ ಪಿಂಚಣಿ ಸಹ ಕೊಡಬೇಕು. ಪಿಂಚಣಿಗಾಗಿ ಅನುದಾನ ರಹಿತ ಅವಧಿಯ ಸೇವೆಯನ್ನೂ ಪರಿಗಣಿಸಬೇಕು ಎಂದರು.

ಸಂಘದ ಕಾರ್ಯದರ್ಶಿ ಮುತ್ತುರಾಜ್‌ ಮತ್ತಿಕೊಪ್ಪ ಮಾತನಾಡಿ, ನಿವೃ ತ್ತಿಯ ನಂತರ ಪಿಂಚಣಿ ಇಲ್ಲದೇ ಹೋದರೆ ನೌಕರರು ಜೀವನ ನಡೆಸುವುದೇ ಬಹಳ ಕಷ್ಟವಾಗುತ್ತದೆ. ಇಂದಿನ ಬೆಲೆ ಏರಿಕೆ ದಿನಮಾನಗಳಲ್ಲಿ ಇನ್ನೂ ಸಮಸ್ಯೆ ಆಗಲಿದೆ. ಈಗಾಗಲೇ ನಿವೃತ್ತರಾದಂತಹವರು ಪಿಂಚಣಿ ಇಲ್ಲದೆ ಅನುಭವಿಸುತ್ತಿರುವ ಸಮಸ್ಯೆ, ನೋವು ನಮ್ಮ ಕಣ್ಣ ಮುಂದೆಯೇ ಇವೆ. ನಾವು ಸಹ ಅವರಂತೆ ಆಗಬಾರದು. ಪಿಂಚಣಿ ಸೌಲಭ್ಯವಿಲ್ಲದೆ ತೊಂದರೆಗೆ ಒಳಗಾಗುವುದನ್ನ ತಪ್ಪಿಸಲು ಸರ್ಕಾರ ಪಿಂಚಣಿ ವ್ಯವಸ್ಥೆ ಮಾಡಬೇಕು ಎನ್ನುವುದು ಎಲ್ಲ ನೌಕರರ ಒತ್ತಾಯ ಎಂದು ತಿಳಿಸಿದರು.

ಪಿಂಚಣಿಗಾಗಿ ಸಂಘದ ನೇತೃತ್ವದಲ್ಲಿ ನಿರಂತರವಾಗಿ ಸಂಬಂಧಪಟ್ಟವರಿಗೆ ಮನವಿಗಳನ್ನು ಸಲ್ಲಿಸುವುದು, ಪತ್ರ ಚಳವಳಿ, ಸತ್ಯಾಗ್ರಹ, ಹತ್ತಾರು ಸಭೆಗಳು ಆಗಿವೆ. ಆದರೂ ಕಲ್ಲು ಹೃದಯದ ಜನಪ್ರತಿನಿಧಿ ಗಳು ಮತ್ತು ಅಧಿ ಕಾರಿಗಳು ಸ್ಪಂದಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಿಂಚಣಿಗಾಗಿ ಇರುವಂತಹ ಸಮಸ್ಯೆ ಏನು ಎಂಬುದು ತಿಳಿದಿದೆ, ಪರಿಹಾರದ ಮಾರ್ಗ ಹುಡುಕಬೇಕಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೋರಾಟವನ್ನ ಬೆಳೆಸಬೇಕಿದೆ, ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕಿದೆ. ಹಾಗಾಗಿ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಾಲಮಂಗಲ ನಾಗರಾಜ್‌ ಮಾತನಾಡಿ, ಪಿಂಚಣಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕಾದರೆ ನೌಕರರು ಸಂಘಟಿತ ಹೋರಾಟ ಮಾಡಬೇಕು. ಸಾವಿರಾರು ಸಂಖ್ಯೆಯಲ್ಲಿ ಸೇರುವ ಮೂಲಕ ಸಂಘಟನೆಯ ಶಕ್ತಿಯನ್ನು ಪ್ರದರ್ಶಿಸಬೇಕು ಎಂದ ದರು. ಸಂಘದ ಮುಖಂಡರಾದ ಅರುಣ್‌ ಕುಮಾರ್‌, ಮಂಜಾ ನಾಯ್ಕ, ಕೆ. ಈಶಾ ನಾಯ್ಕ, ಎಸ್‌.ಎಂ. ಮಡಿವಾಳರ, ಎಸ್‌.ಎಚ್‌. ಮಲ್ಲಮ್ಮ, ಕೆ.ಸಿ. ಶ್ರೀನಿವಾಸ ಮೂರ್ತಿ, ಆರ್‌. ನಾಗೇಂದ್ರಪ್ಪ, ಸೌಭಾಗ್ಯ ಇತರರು ಇದ್ದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.