ಗುರು ತಿಪ್ಪೇರುದ್ರಸ್ವಾಮಿ ಮರಿ ಪರಿಷೆ

ಅಕ್ಕಿ, ಬೇಳೆ,ಹೂವು ಸೇರಿದಂತೆ ನಾನಾ ವಸ್ತುಗಳನ್ನು ಅರ್ಪಿಸಿ ಪೂಜೆ ಸಲ್ಲಿಸಿದರು

Team Udayavani, Mar 29, 2022, 6:30 PM IST

ಗುರು ತಿಪ್ಪೇರುದ್ರಸ್ವಾಮಿ ಮರಿ ಪರಿಷೆ

ನಾಯಕನಹಟ್ಟಿ: ಗುರು ತಿಪ್ಪೇರುದ್ರಸ್ವಾಮಿ ಮರಿ ಪರಿಷೆ (ಮರಿ ಜಾತ್ರೆ) ಸೋಮವಾರ ಸಾಂಪ್ರದಾಯಿಕ ಸಂಭ್ರಮ-ಸಡಗರದಿಂದ ನೆರವೇರಿತು. ಜಾತ್ರೆಯ ನಂತರದ ಸೋಮವಾರವನ್ನು ಮರಿ ಪರಿಷೆ ಎಂದು ಆಚರಿಸಲಾಗುತ್ತದೆ. ಜಾತ್ರೆಗೆ ಬರಲು ಸಾಧ್ಯವಾಗದ ಜನರು ಮರಿ ಪರಿಷೆಗೆ ಬಂದು ದೇವರ ದರ್ಶನ ಪಡೆಯುವುದು ವಾಡಿಕೆ. ಮಾ. 21 ರಂದು ವಿಜೃಂಭಣೆಯ ರಥೋತ್ಸವ ಜರುಗಿತ್ತು. ಈ ಹಿನ್ನೆಲೆಯಲ್ಲಿ ಮರಿ ಪರಿಷೆಗೆ ಭಾರೀ ಪ್ರಮಾಣದಲ್ಲಿ ಜನರು ಆಗಮಿಸಿದ್ದರು. ನೆರೆ ಜಿಲ್ಲೆ ಹಾಗೂ ಸುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಎತ್ತಿನಗಾಡಿ, ಟ್ರ್ಯಾಕ್ಟರ್, ಸರಕು ಸಾಗಾಣಿಕೆ ವಾಹನ ಸೇರಿದಂತೆ ನಾನಾ ವಾಹನಗಳಲ್ಲಿ ಆಗಮಿಸಿದ್ದರು. ಬೀಡು ಬಿಟ್ಟ ಭಕ್ತರು ಪಟ್ಟಣದ ಹೊರವಲಯಗಳಲ್ಲಿ ತಂಗಿದ್ದರು. ಸ್ಥಳದಲ್ಲಿಯೇ ಅಡುಗೆ ಮಾಡಿ ನೈವೇದ್ಯ ಅರ್ಪಿಸಿದರು.

ಬೆಳಗ್ಗೆಯಿಂದಲೇ ಹೊರಮಠ ಹಾಗೂ ಒಳಮಠಗಳು ಭಕ್ತರಿಂದ ತುಂಬಿತ್ತು. ಸರದಿ ಸಾಲಿನಲ್ಲಿ ನಿಂತ ಭಕ್ತರು ದೇವರ ದರ್ಶನ ಪಡೆದರು. ಹಣ್ಣು, ಕಾಯಿ, ಕೊಬ್ಬರಿ, ಅಕ್ಕಿ, ಬೇಳೆ,ಹೂವು ಸೇರಿದಂತೆ ನಾನಾ ವಸ್ತುಗಳನ್ನು ಅರ್ಪಿಸಿ ಪೂಜೆ ಸಲ್ಲಿಸಿದರು. ರಥ ಹಾಗೂ ದೇವಾಲಯಗಳ ಮುಂಭಾಗದಲ್ಲಿ ಸಾವಿರಾರು ಭಕ್ತರು ಕೊಬ್ಬರಿ ಸುಟ್ಟು ಹರಕೆ ಸಲ್ಲಿಸಿದರು.

ಪ್ರತಿ ವರ್ಷ ಮರಿ ಪರಿಷೆಯಲ್ಲಿ ಎಲೆಬೇತೂರು ಪ್ರಭಣ್ಣನವರ ಕುಟುಂಬ ಅನ್ನ ಸಂತರ್ಪಣೆ ಹಮ್ಮಿಕೊಳ್ಳುತ್ತಿತ್ತು. ಆದರೆ ಈ ಬಾರಿ ತಾಲೂಕು ಆಡಳಿತ ಕೊರೊನಾ ಹಿನ್ನೆಲೆಯಲ್ಲಿ ಇದಕ್ಕೆ ಅವಕಾಶ ನೀಡಿರಲಿಲ್ಲ. ಮರಿ ಪರಿಷೆ ನಿಮಿತ್ತ ಜಾತ್ರೆಗೆ ಆಗಮಿಸಿದ್ದ ಸಿಹಿತಿಂಡಿ, ಮಕ್ಕಳ ಆಟಿಕೆ, ದಿನಬಳಕೆ ವಸ್ತುಗಳು ಸೇರಿದಂತೆ ನಾನಾ ಅಂಗಡಿಗಳ ಮಾಲೀಕರು ಭರ್ಜರಿ ವ್ಯಾಪಾರ ನಡೆಸಿದರು. ಮರಿ ಪರಿಷೆ ಅಂಗವಾಗಿ ವಿಶೇಷ ವಾರೋತ್ಸವ ಜರುಗಿತು.

ಅಲಂಕೃತ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ದೇವಾಲಯದ ಸಾಂಪ್ರದಾಯಿಕ ವಾದ್ಯಗಳು, ನಂದೀಧ್ವಜ ಸೇರಿದಂತೆ ನಾನಾ ವಾದ್ಯಗಳು ಉತ್ಸವದಲ್ಲಿದ್ದವು. ಕಂದಾಯ ಹಾಗೂ ದೇವಾಲಯ ಸಿಬ್ಬಂದಿ ದೇವರ ದರ್ಶನ ಹಾಗೂ ಸರದಿ ಸಾಲಿನ ವ್ಯವಸ್ಥೆ  ಒದಗಿಸಿದ್ದರು. ಪೊಲೀಸ್‌ ಇಲಾಖೆ ದೇವಾಲಯ ಹಾಗೂ ಜಾತ್ರೆಯಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಿತ್ತು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.