ಕರ್ತವ್ಯನಿರತ ಪೊಲೀಸ್ಗೆ ಕೋವಿಡ್ !
Team Udayavani, Jun 26, 2020, 11:06 AM IST
ಹರಪನಹಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪರೀಕ್ಷೆಗೆ ಹಾಜರಾದ ಮಕ್ಕಳಲ್ಲಿ ಆತಂಕ ಶುರುವಾಗಿದೆ.
ಉಚ್ಚಂಗಿದುರ್ಗ ಗ್ರಾಮದ ಶ್ರೀಉತ್ಸವಾಂಬ ಪ್ರೌಢಶಾಲೆಯಲ್ಲಿ ಪರೀûಾ ಕೇಂದ್ರ ತೆರೆಯಲಾಗಿದ್ದು, ಸಾಮಾಜಿಕ ಅಂತರ ಕಾಯ್ದಕೊಳ್ಳುವ ದೃಷ್ಟಿಯಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪರೀಕ್ಷೆ ಕೇಂದ್ರಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು. ಇಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅರಸೀಕೆರೆ ಠಾಣೆಯ ಹೆಡ್ಕಾನ್ಸ್ಟೆàಬಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ವಾರ ಜಿಂದಾಲ್ ಆಸ್ಪತ್ರೆಯ ಕರ್ತವ್ಯಕ್ಕೆ ಅವರನ್ನು ನಿಯೋಜಿಸಲಾಗಿತ್ತು. ಅಲ್ಲಿಂದ ಮಂಗಳವಾರ ಅರಸೀಕೆರೆ ಗ್ರಾಮಕ್ಕೆ ಮರಳಿದ್ದರು. ಬುಧವಾರ ವಿಶ್ರಾಂತಿ ಪಡೆದು ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಕರ್ತವ್ಯಕ್ಕೆ ಹಾಜರಾಗಿದ್ದು, ಸಂಜೆ ವೇಳೆಗೆ ಅವರ ವರದಿ ಪಾಸಿಟಿವ್ ಬಂದಿದೆ.
ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗುವ ವಾಹನದಲ್ಲಿ ಹರಪನಹಳ್ಳಿಯಿಂದ ಉಚ್ಚಂಗಿದುರ್ಗ ಗ್ರಾಮಕ್ಕೆ ಹೋಗಿದ್ದಾರೆ. ಹೀಗಾಗಿ ವಾಹನದಲ್ಲಿ ಜತೆಗೆ ತೆರಳಿದ ನಾಲ್ವರನ್ನು ಹೋಂ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ. ಹೆಡ್ಕಾನ್ ಸ್ಟೇಬಲ್ ಪರೀûಾ ಕೇಂದ್ರದ ಒಳಗಡೆ ಸುತ್ತಾಡದ ಹಿನ್ನೆಲೆಯಲ್ಲಿ ಸ್ಯಾನಿಟೈಜರ್ ಮಾಡಿ ಪರೀಕ್ಷೆ ನಡೆಸಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ ಎಂದು ಬಿಇಒ ವೀರಭದ್ರಯ್ಯ ತಿಳಿಸಿದ್ದಾರೆ. ಹೆಡ್ಕಾನ್ ಸ್ಟೇಬಲ್ ಸಂಪರ್ಕಿತರನ್ನು ಕಿತ್ತೂರು ರಾಣಿ ಚೆನ್ನಮ್ಮ ಕ್ವಾರಂಟೈನ್ ಕೇಂದ್ರಕ್ಕೆ ರವಾನಿಸಲಾಗುವುದು ಎಂದು ಸಿಪಿಐ ಕೆ.ಕುಮಾರ್ ತಿಳಿಸಿದ್ದಾರೆ.
ಬಳ್ಳಾರಿ ಸಂಜೀವಿನಿ ಆಸ್ಪತ್ರೆಗೆ ಸೋಂಕಿತರನ್ನು ಸ್ಥಳಾಂತರಿಸಲಾಗಿದ್ದು, ಇವರ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರನ್ನು ಗುರುತಿಸಿ, ಪ್ರಥಮ ಸಂಪರ್ಕಿತರನ್ನು ಸಾಂಸ್ಥಿಕ ಕ್ವಾರಂಟೈನ್ಗೆ ರವಾನಿಸಲಾಗುವುದು. ದ್ವಿತೀಯ ಸಂಪರ್ಕಿತರನ್ನು ಹೋಂ ಕ್ವಾರಂಟೈನ್ ಮಾಡಬೇಕಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದ್ದಾರೆ. ಅರಸೀಕೆರೆ ಗ್ರಾಮಕ್ಕೆ ಉಪವಿಭಾಗಾಧಿಕಾರಿ ವಿ.ಕೆ.ಪ್ರಸನ್ನಕುಮಾರ್, ತಹಶೀಲ್ದಾರ್ ಡಾ.ನಾಗವೇಣಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ, ಸಿಪಿಐ ಕೆ.ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ