ಮರಳು ಅಕ್ರಮ ತಡೆಯಲು ರಸ್ತೆಗಳಲ್ಲಿ ಟ್ರೆಂಚ್
Team Udayavani, Jun 6, 2020, 11:25 AM IST
ಹರಿಹರ: ನದಿ ಸಂಪರ್ಕಿಸುವ ರಸ್ತೆಗಳನ್ನು ಬಗೆದು ಕಂದಕ ತೋಡಿರುವುದು.
ಹರಿಹರ: ತಾಲೂಕಿನ ವಿವಿಧೆಡೆ ತುಂಗಭದ್ರಾ ನದಿ ಪಾತ್ರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ತಡೆಯಲು ಅಧಿಕಾರಿಗಳು ಅಲ್ಲಲ್ಲಿ ನದಿ ಸಂಪರ್ಕಿಸುವ ಗ್ರಾಮೀಣ ರಸ್ತೆಗಳನ್ನು ಬಗೆದು ಕಂದಕ ತೋಡುತ್ತಿದ್ದಾರೆ.
ಮರಳು ಅಕ್ರಮದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ನದಿಯಿಂದ ಮರಳು ತುಂಬಿಕೊಂಡು ಬರುವ ಟ್ರ್ಯಾಕ್ಟರ್, ಲಾರಿ ಮುಂತಾದ ವಾಹನಗಳಿಗೆ ಆಸ್ಪದವಾಗದಂತೆ ನದಿ ಸಂಪರ್ಕಿಸುವ ರಸ್ತೆಗಳನ್ನು ಅಡ್ಡಲಾಗಿ 5 ಅಗಲ, 5 ಅಳದ ಕಂದಕ ನಿರ್ಮಿಸುತ್ತಿದ್ದಾರೆ. ಅಕ್ರಮ ಮರಳುಗಾರಿಕೆ ಮಾಡುವವರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವುದು, ಮರಳುಗಾರಿಕೆ ನಡೆಸದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವ ಬದಲು ಶೀತವಾದರೆ ಮೂಗನ್ನೆ ಕೊಯ್ಯುವಂತೆ ಅಧಿಕಾರಿಗಳು ರಸ್ತೆ ಅಗೆಯುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ