ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಮಹಾಮಾರಿ
Team Udayavani, Jul 9, 2020, 11:19 AM IST
ಹರಿಹರ: ಐದು ಕೋವಿಡ್ ಸೋಂಕಿತರು ಪತ್ತೆಯಾದ ಗೌಸಿಯಾ ಕಾಲೋನಿಯ ಕಂಟೇನ್ಮೆಂಟ್ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಿದರು.
ಹರಿಹರ: ತಾಲೂಕಿನ ಎಳೆಹೊಳೆ ಗ್ರಾಮದ 55 ವರ್ಷದ ಪುರುಷ ಹಾಗೂ ಕೊಂಡಜ್ಜಿ ಗ್ರಾಮದ 24 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.
ಕೊಂಡಜ್ಜಿ ಗ್ರಾಮದ ಯುವಕ ದಾವಣಗೆರೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆ ಅಂಗಡಿಯ ಮಾಲೀಕನಲ್ಲಿ ಇತ್ತೀಚಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತನೆಂದು ಈ ಯುವಕನ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎಳೆಹೊಳೆ ಗ್ರಾಮದ ವ್ಯಕ್ತಿಯ ಸೋಂಕಿನ ಹಿನ್ನೆಲೆ ಇನ್ನೂ ತಿಳಿದುಬಂದಿಲ್ಲ. ಬುಧವಾರ ಈ ಎರಡೂ ಗ್ರಾಮಗಳಿಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ, ಸೋಂಕಿತರನ್ನು ದಾವಣಗೆರೆ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಅವರ ಸಂಪರ್ಕಿತರ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿದರು.
ಇದುವರೆಗೆ ತಾಲೂಕಿನಲ್ಲಿ ಒಟ್ಟು 32 ಪ್ರಕರಣಗಳು ವರದಿಯಾಗಿದ್ದು, 22 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದಆದರೆ. 10 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಸಂಖ್ಯೆ ಏರುತ್ತಿರುವುದರಿಂದ ನಗರದಲ್ಲಿ ಮಂಗಳವಾರದಿಂದ ಮಧ್ಯಾಹ್ನ 2ರಿಂದ ಲಾಕ್ಡೌನ್ ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್