ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಗೆ ಒತ್ತಾಯ
Team Udayavani, May 8, 2020, 11:30 AM IST
ಹರಿಹರ: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು
ಹರಿಹರ: ದಾವಣಗೆರೆಯಿಂದ ಮದ್ಯ ಖರೀದಿಗೆಂದು ಬರುವವರನ್ನು ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಗುರುವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ದಿನ ನಿತ್ಯ ದಾವಣಗೆರೆಯಿಂದ ನೂರಾರು ಸಂಖ್ಯೆಯ ಮದ್ಯಪ್ರಿಯರು ಬಂದು ನಗರದ ಮದ್ಯದಂಗಡಿಗಳ ಮುಂದೆ ತಾಲೂಕಿನ ಜನರೊಂದಿಗೆಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇವರಿಂದ ಇಲ್ಲಿನ ಜನರಿಗೂ ಕೋವಿಡ್ ವೈರಸ್ ಹರಡುವ ಅಪಾಯವಿದೆ. ಆದ್ದರಿಂದ ಅಧಿಕಾರಿಗಳು ಕೂಡಲೆ ಎಚ್ಚೆತ್ತು ತಾಲೂಕಿನ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಮಾಡಬೇಕು. ಮದ್ಯದಂಗಡಿ ಮುಂದೆ ಸಾಲಿನಲ್ಲಿ ನಿಂತವರ ಆಧಾರ್ ಕಾರ್ಡ್ ಪರಿಶೀಲಿಸಬೇಕು. ಸಾಧ್ಯವಾಗದಿದ್ದರೆ ತಾಲೂಕಿನ ಮದ್ಯದಂಗಡಿಗಳನ್ನು ಮುಂದಿನ 15 ದಿನಗಳವರೆಗೆ ಬಂದ್ ಮಾಡಿಸಬೇಕೆಂದು ಆಗ್ರಹಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಮಾತನಾಡಿ, ಮುಖ್ಯ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕೆಲವೆಡೆ ಪೊಲೀಸ್ ಚೌಕಿ, ತಪಾಸಣೆ ಮಾಡಲಾಗುತ್ತಿದೆ. ರೈತರು ಹೊಲ-ಗದ್ದೆಗಳಿಗೆ ಹೋಗಲು ಬಳಸುವ ಬಂಡಿ ರಸ್ತೆಗಳ ಮೂಲಕ ದಾವಣಗೆರೆ ಜನರು ಬರುತ್ತಿರುವ ಮಾಹಿತಿಯಿದೆ. ಆದರೆ ಮದ್ಯದಂಗಡಿ ಬಂದ್ ಮಾಡಿಸಲು ನಮಗೆ ಅಧಿಕಾರವಿಲ್ಲ. ಪರಸ್ಥಳದವರು ಬರದಂತೆ ತಡೆಯಲು ಪೊಲೀಸರಿಗೆ ಸೂಚಿಸುವುದಾಗಿ ತಿಳಿಸಿದರು. ಕರವೇ ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ಮೆಹರವಾಡೆ, ತಾಲೂಕುಅಧ್ಯಕ್ಷ ನಾಗರಾಜ್ ಗೌಡ, ಬಿ. ಮಗ್ದುಂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ