ದಾನಿಗಳು ಸರ್ಕಾರದೊಂದಿಗೆ ಕೈಜೋಡಿಸಿ
Team Udayavani, May 4, 2020, 11:16 AM IST
ಹೊನ್ನಾಳಿ: ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕುಂದೂರು ಹನುಮಂತಪ್ಪ ಆಹಾರ ಪದಾರ್ಥ ವಿತರಿಸಿದರು
ಹೊನ್ನಾಳಿ: ಲಾಕ್ಡೌನ್ ಹಿನ್ನೆಲೆಯಲ್ಲಿ ತೊಂದರೆಗೊಳಗಾದವರಿಗೆ ಸರ್ಕಾರ ನೀಡುತ್ತಿರುವ ನೆರವಿಗೆ ಸಮಾಜದ ದಾನಿಗಳು ಕೈಜೋಡಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕುಂದೂರು ಜಿ. ಹನುಮಂತಪ್ಪ ಮನವಿ ಮಾಡಿದರು.
ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಆಸ್ಪತ್ರೆ, ಪೊಲೀಸ್, ಬೆಸ್ಕಾಂ ಹಾಗೂ ಇತರೆ ಸಿಬ್ಬಂದಿ ವರ್ಗದವರಿಗೆ ಪ್ರತಿದಿನ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನೀಡುತ್ತಿರುವ ಮಧ್ಯಾಹ್ನದ ದಾಸೋಹಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ತಯಾರಿಸಿದ ರೊಟ್ಟಿ, ಪಲ್ಯ, ಚಟ್ನಿ ಆಹಾರ ಪದಾರ್ಥಗಳನ್ನು ನೀಡಿ ಅವರು ಮಾತನಾಡಿದರು. ಸರ್ಕಾರವೇ ಎಲ್ಲ ಕೆಲಸಗಳನ್ನು ಮಾಡಲಿ ಎನ್ನುವುದಕ್ಕಿಂತ ಉಳ್ಳವರು , ದಾನಿಗಳು ಸಮಾಜಮುಖೀ ಕೆಲಸಗಳಲ್ಲಿ ತೊಡಗಿಕೊಳ್ಳಬೇಕು. ಕೋವಿಡ್ -19 ಹೋರಾಟಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕೆಂದರು. ಪೇಟೆ ಬಸವೇಶ್ವರ ಯುವಕ ಸಂಘದ ಪದಾಧಿಕಾರಿಗಳು, ಕಸಾಪ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ