ರೈತರಿಗೆ ತೊಗರಿ ಬೀಜ ವಿತರಣೆ
Team Udayavani, Jun 5, 2020, 11:27 AM IST
ಹೊಸದುರ್ಗ: ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರು ರೈತರಿಗೆ ಮೆಕ್ಕೆಜೋಳ ಬೀಜ ವಿತರಿಸಿದರು.
ಹೊಸದುರ್ಗ: ರೈತರು ಉತ್ತಮ ತಳಿಯ ಬಿತ್ತನೆ ಬೀಜ ಖರೀದಿಸಿ ಅಧಿಕ ಇಳುವರಿಗಾಗಿ ಕಾಲ ಕಾಲಕ್ಕೆ ಕೃಷಿ ಇಲಾಖೆ ಅಧಿಕಾರಿಗಳಿಂದ ತಾಂತ್ರಿಕ ಸಲಹೆ ಪಡೆದುಕೊಳ್ಳಬೇಕು ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದರು.
ಪಟ್ಟಣದ ಕೃಷಿ ಇಲಾಖೆ ವತಿಯಿಂದ ಮುಸುಕಿನ ಜೋಳ ಮತ್ತು ತೊಗರಿ ಬೀಜ ರೈತರಿಗೆ ವಿತರಿಸಿ ಅವರು ಮಾತನಾಡಿದರು. ಬಿತ್ತನೆ ಪೂರ್ವದಲ್ಲಿ ಬೀಜೋಪಚಾರಮ ಲಘು ಪೋಷಕಾಂಶಗಳ ಸಮರ್ಥ ಬಳಕೆಯಿಂದ ಅಧಿಕ ಇಳುವರಿ ಪಡೆಯಬಹುದು. ಈ ನಿಟ್ಟಿನಲ್ಲಿ ರೈತರು ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದು ಯಶಸ್ಸು ಸಾಧಿಸುವಂತೆ ರೈತರಿಗೆ ತಿಳಿಸಿದರು.
ರೈತರು ಜಮೀನುಗಳಲ್ಲಿ ಏಕಬೆಳೆ ಪದ್ದತಿಯ ಬದಲಾಗಿ ಬಹುಬೆಳೆ ಪದ್ಧತಿ ಅನುಸರಿಸಬೇಕು. ಮುಸುಕಿನ ಜೋಳದಲ್ಲಿ ಅಕ್ಕಡಿ ಬೆಳೆಯಾಗಿ ತೊಗರಿ ಹಾಕಬೇಕು. ಬಹುಬೆಳೆ ಪದ್ದತಿಯಿಂದ ಒಂದು ಬೆಳೆ ನಷ್ಟವಾದರೂ ಮತ್ತೊಂದು ಬೆಳೆಯಿಂದ ಲಾಭ ಪಡೆಯಬಹುದಾಗಿದೆಎಂದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ ಮಾತನಾಡಿದರು. ತಾಂತ್ರಿಕ ಅಧಿಕಾರಿ ವೆಂಕಟೇಶ್, ಮುಖಂಡರಾದ ಶೀತಲ್ ಕುಮಾರ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ