ಜಿಲ್ಲೆಯಲ್ಲೇ ಅತಿ ಹೆಚ್ಚು ಭತ್ತ ಖರೀದಿ
Team Udayavani, Jun 19, 2020, 1:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸನಗರ: ಕೋವಿಡ್ ಆತಂಕದ ನಡುವೆಯೂ ಬೆಂಬಲ ಬೆಲೆಯಲ್ಲಿ ಅತಿ ಹೆಚ್ಚು ಭತ್ತ ಖರೀದಿ ಮಾಡುವ ಮೂಲಕ ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಾಧನೆ ಮಾಡಿದೆ ಎಂದು ಎಪಿಎಂಸಿ ಅಧ್ಯಕ್ಷ ಈಶ್ವರಪ್ಪ ಗೌಡ ಹೇಳಿದರು.
ಹೋಬಳಿ ಕೇಂದ್ರ ನಗರದಲ್ಲಿ ರೂ.75 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಸಂತೆ ಮಾರುಕಟ್ಟೆ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹೊಸನಗರ ಎಪಿಎಂಸಿ ವತಿಯಿಂದ 7500 ಕ್ವಿಂಟಲ್ ಭತ್ತವನ್ನು 1850 ಬೆಂಬಲ ಬೆಲೆ ನೀಡಿ ಖರೀದಿಸಲಾಗಿದೆ. ರೂ.75 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸರ್ಕಾರದಿಂದ ಬಂದಿದ್ದು ಅಂದಾಜು 17 ಲಕ್ಷ ಮಾತ್ರ. ಉಳಿದ ಹಣವನ್ನು ಎಪಿಎಂಸಿಯೇ ಭರಿಸಿದೆ. ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಎಪಿಎಂಸಿಯ ನಗರ ಭಾಗದ ನಿರ್ದೇಶಕ ಎಚ್.ಜಿ. ರಮಾಕಾಂತ್ ಮಾತನಾಡಿ, ನಗರ ಸಂತೆ ಮಾರುಕಟ್ಟೆ ಅಭಿವೃದ್ಧಿ ನಮ್ಮ ಕನಸಾಗಿತ್ತು. ಇದಕ್ಕೆ ಹಿಂದಿನ ಅಧ್ಯಕ್ಷ ಬಂಡಿ ರಾಮಚಂದ್ರ, ಹಾಲಿ ಅಧ್ಯಕ್ಷ ಈಶ್ವರಪ್ಪ ಗೌಡ, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರು ಸಹಕಾರ ಕೊಟ್ಟ ಹಿನ್ನೆಲೆಯಲ್ಲಿ ಮಾರುಕಟ್ಟೆ ಅಭಿವೃದ್ಧಿಗೆ ಕಾರಣವಾಗಿದೆ. ಇದು ಎಪಿಎಂಸಿಯ ಸಾಧನೆ ಎಂದರು. ಉಪಾಧ್ಯಕ್ಷ ಕುನ್ನೂರು ಮಂಜಪ್ಪ, ನಿರ್ದೇಶಕರಾದ ದುಮ್ಮ ಅಶೋಕಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ