ಸುರಕ್ಷತಾ ಕ್ರಮ ಮರೆತರೆ ಇನ್ಮುಂದೆ ಬೀಳಲಿದೆ ಭಾರೀ ದಂಡ


Team Udayavani, Mar 4, 2021, 7:21 PM IST

If you forget safety measures, you will get a heavy fine

ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳಲ್ಲಿರುವಂತೆ ಇನ್ನು ಮುಂದೆ ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುವ ಸ್ವತ್ಛತಾ ಸಿಬ್ಬಂದಿಯೂ ಕೆಲಸ ಮಾಡುವಾಗ ಕಡ್ಡಾಯವಾಗಿ ಅಗತ್ಯ ರಕ್ಷಣಾತ್ಮಕ ಸಾಮಗ್ರಿ ಹಾಗೂ ಸುರಕ್ಷತಾ ಸಲಕರಣೆ ಉಪಯೋಗಿಸಬೇಕು.

ಇಲ್ಲದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿ ಇಲ್ಲವೇ ಗುತ್ತಿಗೆದಾರ 10ರಿಂದ 50 ಸಾವಿರ ರೂ. ವರೆಗೂ ದಂಡ ಕಟ್ಟಬೇಕಾಗುತ್ತದೆ! ಹೌದು, ಇಂಥದ್ದೊಂದು ಕಠಿಣ ಆದೇಶವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಹೊರಡಿಸಿದ್ದು, ಇದರ ಕಡ್ಡಾಯ ಪಾಲನೆಗೆ ಸೂಚಿಸಿದೆ. ಈವರೆಗೆ ನಗರ, ಪಟ್ಟಣ, ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುವ ಸ್ವತ್ಛತಾ ಕಾರ್ಮಿಕರಿಗೆ ಇದ್ದ ಈ ನಿಯಮವನ್ನು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ಸ್ವತ್ಛತಾ ಕಾರ್ಮಿಕ ಸಿಬ್ಬಂದಿಗೂ ವಿಸ್ತರಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಗಳಲ್ಲಿ ವೈಯಕ್ತಿಕ, ಸಾರ್ವಜನಿಕ ಶೌಚಗೃಹ, ಮಲಗುಂಡಿಗಳು, ಸೆಪ್ಟಿಕ್‌ ಟ್ಯಾಂಕ್‌, ಚರಂಡಿ ಹಾಗೂಇನ್ನಿತರ ಸ್ವತ್ಛತಾ ಕಾರ್ಯಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸಿಬ್ಬಂದಿಗೆ ಅಗತ್ಯ ರಕ್ಷಣಾತ್ಮಕ ಸಾಮಗ್ರಿ ಮತ್ತು ಸುರಕ್ಷತಾ ಸಲಕರಣೆಗಳಿಲ್ಲದೇ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದರೆ ಇನ್ನು ಮುಂದೆ ಸಂಬಂಧಿಸಿದ ಅಧಿಕಾರಿಗಳು ಅಥವಾ ಗುತ್ತಿಗೆದಾರರು ಇಲ್ಲವೇ ಏಜೆನ್ಸಿಗಳು ದಂಡ ತೆತ್ತಬೇಕಾಗಿದೆ.

ದೈನಂದಿನ ಸ್ವತ್ಛತಾ ಕಾರ್ಯ ನಿರ್ವಹಿಸುವ ಕಾಯಂ ಸಿಬ್ಬಂದಿಯಾಗಲಿ, ತಾತ್ಕಾಲಿಕ ಸಿಬ್ಬಂದಿಯಾಗಲಿ ಗುತ್ತಿಗೆ, ಹೊರಗುತ್ತಿಗೆ ಹೀಗೆ ಎಲ್ಲ ವರ್ಗದ ಸ್ವತ್ಛತಾ ಸಿಬ್ಬಂದಿಗೆ ರಕ್ಷಣಾತ್ಮಕ ಸಾಮಗ್ರಿ ಹಾಗೂ ಸುರಕ್ಷತಾ ಸಲಕರಣೆ ನೀಡುವುದು ಕಡ್ಡಾಯವಾಗಿದ್ದು, ಇದರ ಕಟ್ಟುನಿಟ್ಟಿನ ಪಾಲನೆಗಾಗಿ ಈ ದಂಡ ವಿಧಿಸುವ ಆದೇಶ ಹೊರಡಿಸಲಾಗಿದೆ.

ದಂಡ, ಶಿಸ್ತು ಕ್ರಮ: ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಸ್ವತ್ಛತಾ ಸಿಬ್ಬಂದಿಗೆ ಅಗತ್ಯ ರಕ್ಷಣಾತ್ಮಕ ಸಾಮಗ್ರಿ ಹಾಗೂ ಸುರಕ್ಷತಾ ಸಲಕರಣೆಗಳು ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವುದು ಹಾಗೂ ಸ್ವತ್ಛತಾ ಕಾರ್ಯ ವೈಫಲ್ಯ ಪ್ರಕರಣಗಳಲ್ಲಿ ಜಿಲ್ಲಾ, ತಾಲೂಕು, ಗ್ರಾಪಂಗಳು ಸಂಬಂಧಿಸಿದ ಅಧಿಕಾರಿಗಳು ಅಥವಾ ಗುತ್ತಿಗೆದಾರರು ಇಲ್ಲವೇ ಏಜೆನ್ಸಿಗಳಿಗೆ ದಂಡ ವಿಧಿಸಬೇಕು. ಎಸ್‌ಟಿಪಿ/ಸೆಪ್ಟಿಕ್‌ zಪ್ರಕರಣಗಳಲ್ಲಿ 50,000 ರೂ., ಸ್ವತ್ಛತಾ ಕೆಲಸಗಾರರು ಹ್ಯಾಂಡ್‌ಗ್ಲೌಸ್‌, ಗಮ್‌ ಬೂಟ್ಸ್‌, ಹೆಲ್ಮೆಟ್‌, ಗಾಗಲ್‌, ಮಾಸ್ಕ್, ಸ್ಯಾನಿಟೈಸರ್‌ ಇತ್ಯಾದಿಗಳನ್ನು ಉಪಯೋಗಿಸದೆ ಕಾರ್ಯ ನಿರ್ವಹಿಸುವ ವೈಫಲ್ಯ ಪ್ರಕರಣಗಳಲ್ಲಿ 10,000ರೂ. ದಂಡ ವಿಧಿಸಲು ಆದೇಶದಲ್ಲಿ  ಸೂಚಿಸಲಾಗಿದೆ. ಸಿಬ್ಬಂದಿ ಸುರಕ್ಷತೆ ವಿಚಾರದಲ್ಲಿ ನಿರ್ಲಕ್ಷ ತೋರಿದರೆ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಬೇಕು ಹಾಗೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಹ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ನವೀನಕುಮಾರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.