ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸೂಕ್ತ

ಬಿಜೆಪಿ ಆಡಳಿತದಲ್ಲಿ ಪೊಲೀಸ್‌ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ.

Team Udayavani, Oct 20, 2021, 6:30 PM IST

ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸೂಕ್ತ

ದಾವಣಗೆರೆ: ಚುನಾವಣೆಗಳಲ್ಲಿ ಜಾತ್ಯತೀತ ಜನತಾದಳ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸುವ ಬದಲಿಗೆ ಪಕ್ಷವನ್ನೇ ಬಿಜೆಪಿಯೊಂದಿಗೆ ಅಧಿಕೃತವಾಗಿ ವಿಲೀನಗೊಳಿಸುವುದು ಸೂಕ್ತ. ಈ ಕಾರಣಕ್ಕಾಗಿ ಜೆಡಿಎಸ್‌ ಪಕ್ಷವನ್ನು ರಾಜ್ಯದಲ್ಲಿ ವಿಸರ್ಜಿಸುವುದೇ ಒಳ್ಳೆಯದು ಎಂದು ಕೆಪಿಸಿಸಿ ರಾಜ್ಯ ವಕ್ತಾರ ಡಿ. ಬಸವರಾಜ್‌ ಟೀಕಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕಾಂಗ್ರೆಸ್‌ನ್ನು ಸೋಲಿಸುವ ಒಂದೇ ಗುರಿಯಿಟ್ಟುಕೊಂಡು ಅನೇಕ ಚುನಾವಣೆಗಳಲ್ಲಿ ಜೆಡಿಎಸ್‌ ಬಿಜೆಪಿ ಪರವಾಗಿ ಕೆಲಸ ಮಾಡಿದೆ. ಕಾಂಗ್ರೆಸ್‌ನ ಅಲ್ಪಸಂಖ್ಯಾತ ಮತಗಳನ್ನು ಸೆಳೆದು ಸೋಲಿಸಲೆಂದೇ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸುತ್ತಿದೆ. ಈಗ ನಡೆಯುತ್ತಿರುವ ಹಾನಗಲ್ಲ, ಸಿಂದಗಿ ಉಪಚುನಾವಣೆಯೂ ಇದಕ್ಕೆ ಹೊರತಾಗಿಲ್ಲ. ಕುಮಾರಸ್ವಾಮಿಯವರಿಗೆ ನಿಜವಾಗಿಯೂ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ಕೊಟ್ಟು ಗೆಲ್ಲಿಸಲಿ ಎಂದು ಸವಾಲು ಹಾಕಿದರು.

ಹಾನಗಲ್‌ ಮತ್ತು ಸಿಂಧಗಿ ಉಪಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‌ ಕೊಟ್ಟ ಪುಟಗೋಸಿ ಅಧಿಕಾರದಿಂದಲೇ ಇವತ್ತಿಗೂ ಜೆಡಿಎಸ್‌ ಜೀವಂತವಾಗಿದೆ. ಜತೆಗೆ ಆ ಪುಟಗೋಸಿಯೇ ಜೆಡಿಎಸ್‌ ಮಾನ ಕಾಪಾಡಿದೆ. ಇಲ್ಲದಿದ್ದರೆ ಇಷ್ಟೋತ್ತಿಗಾಗಲೇ ಜೆಡಿಎಸ್‌ ಬೆತ್ತಲಾಗಿ ನಾಮಾವಶೇಷ ವಾಗುತ್ತಿತ್ತು.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಕುಟುಂಬದ ರಾಜಕಾರಣ, ದುರಂಹಕಾರ ಹಾಗೂ ದುರಾಡಳಿತ ಮಾಡಿದ ಪರಿಣಾಮ ಶಾಸಕರು ಬೇಸತ್ತು ಆಪರೇಷನ್‌ ಕಮಲಕ್ಕೆ ಒಳಗಾದರು. ಅವರು ಸರಿಯಾಗಿ ಆಡಳಿತ ಮಾಡಿದ್ದರೆ ಮೈತ್ರಿ ಸರ್ಕಾರ ಉಳಿಯುತ್ತಿತ್ತು ಎಂದರು.

ಸಿಎಂ ಕ್ಷಮೆಯಾಚಿಸಲಿ: ಅನೈತಿಕ ಪೊಲೀಸ್‌ಗಿರಿ ವಿಚಾರದಲ್ಲಿ ಮುಖ್ಯಮಂತ್ರಿಗಳ ಸಮರ್ಥನೆ ಸರಿಯಲ್ಲ. ಈ ಕುರಿತು ಮುಖ್ಯಮಂತ್ರಿಯವರ ಹೇಳಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆ. ರಾಜ್ಯದ ಪೊಲೀಸ್‌ ವ್ಯವಸ್ಥೆಗೆ ತನ್ನದೇ ಆದ ಗೌರವ ಹೊಂದಿದ್ದು ಬಿಜೆಪಿ ಆಡಳಿತದಲ್ಲಿ ಪೊಲೀಸ್‌ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ. ಮುಖ್ಯಮಂತ್ರಿಗಳ ಹೇಳಿಕೆ ಧರ್ಮದ ಹೆಸರಿನಲ್ಲಿ ಕಾನೂನನ್ನು ಕೈಗೆ ತೆಗೆದುಕೊಳ್ಳುವ ವ್ಯಕ್ತಿಗಳಿಗೆ ಕುಮ್ಮಕ್ಕು ನೀಡಿದಂತಿದೆ. ಅನೈತಿಕ ಪೊಲೀಸ್‌ಗಿರಿ
ವಿಚಾರದಲ್ಲಿ ಮುಖ್ಯಮಂತ್ರಿಗಳ ಮೃಧುಧೋರಣೆ ಅಪಾಯಕಾರಿಯಾಗಿದೆ. ಮುಖ್ಯಮಂತ್ರಿಯವರು ಈ ವಿಚಾರವಾಗಿ ಕೂಡಲೇ ಕ್ಷಮೆಯಾಚಿಸಿ, ಹೇಳಿಕೆ ವಾಪಸ್‌ ಪಡೆಯಬೇಕು ಎಂದರು.

ಜಿಲ್ಲಾ ಕಾಂಗ್ರೆಸ್‌ ಇನ್‌ಟೆಕ್‌ ವಿಭಾಗದ ಅಧ್ಯಕ್ಷ ಕೆ.ಎಂ. ಮಂಜುನಾಥ್‌, ಕಾಂಗ್ರೆಸ್‌ ಪ್ರಮುಖರಾದ ಎಂ.ಕೆ. ಲಿಯಾಖತ್‌ ಅಲಿ, ಡಿ. ಶಿವಕುಮಾರ್‌, ಮಹ್ಮದ್‌ ಜಿಕ್ರಿಯಾ, ಆರ್‌.ಬಿ.ಝಡ್‌, ಬಾಷಾ, ಮಹ್ಮದ್‌ ಜುಬೇರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಮೋದಿ ಆಡಳಿತ ವೈಫಲ್ಯ
ಪ್ರಧಾನಿ ಮೋದಿಯವರ ಆಡಳಿತ ವೈಫಲ್ಯದಿಂದ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ಪ್ರಜೆಗಳ ಹಸಿವು ನೀಗಿಸುವಲ್ಲಿ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನೇಪಾಳಕ್ಕಿಂತಲೂ ಕಳಪೆ ಸಾಧನೆ ಮಾಡಿದೆ. ವಯಸ್ಸಿಗೆ ತಕ್ಕ ದೇಹದ ತೂಕವಿಲ್ಲದ ಮಕ್ಕಳ ಸಂಖ್ಯೆ ಭಾರತದಲ್ಲಿಯೇ ಅತ್ಯಧಿಕವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಅವರ ಹಿಂಬಾಲಕರು ಮೋದಿ ಆಡಳಿತ ವೈಫಲ್ಯವನ್ನು ಖಂಡಿಸದೇ ಮೋದಿಯನ್ನು ವಿಶ್ವಗುರು ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಹಾನಗರ ಪಾಲಿಕೆಯ ಹಿರಿಯ ಸದಸ್ಯ ಕೆ.
ಚಮನ್‌ಸಾಬ್‌ ಇದೇ ಸಂದರ್ಭದಲ್ಲಿ ಆರೋಪಿಸಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.