ಮತದಾರರಿಗೆ ಅಭ್ಯರ್ಥಿಗಳ ಜಾತಕ: ಸ್ಪರ್ಧಿಸಿದವರ ಮಾಹಿತಿ ಅರಿಯಲು ಕೆವೈಸಿ ಆ್ಯಪ್‌


Team Udayavani, Mar 13, 2023, 7:42 AM IST

ಮತದಾರರಿಗೆ ಅಭ್ಯರ್ಥಿಗಳ ಜಾತಕ: ಸ್ಪರ್ಧಿಸಿದವರ ಮಾಹಿತಿ ಅರಿಯಲು ಕೆವೈಸಿ ಆ್ಯಪ್‌

ದಾವಣಗೆರೆ: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವಿವರ ಹಾಗೂ ಅವರ ಅಪರಾಧದ ಪೂರ್ವಾಪರ ಕುರಿತ ಮಾಹಿತಿಯನ್ನು ಮತದಾರರಿಗೆ ನೀಡಲು ಭಾರತೀಯ ಚುನಾವಣ ಆಯೋಗ ಅಭಿವೃದ್ಧಿ ಪಡಿಸಿರುವ “ಕೆವೈಸಿ’ (ನೊ ಯುವರ್‌ ಕ್ಯಾಂಡಿಡೇಟ್‌-ನಿಮ್ಮ ಅಭ್ಯರ್ಥಿಯನ್ನು ತಿಳಿಯಿರಿ) ಆ್ಯಪ್‌ ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಪ್ರಚಲಿತವಾಗುವ ಸಾಧ್ಯತೆಯಿದೆ.

ಚುನಾವಣ ಆಯೋಗ 2022ರಲ್ಲಿಯೇ ಕೆವೈಸಿ ಆ್ಯಪ್‌ ಅಭಿವೃದ್ಧಿಪಡಿಸಿದ್ದು, ಒಂದು ವರ್ಷದಲ್ಲಿ ನಡೆಸಿದ ಬಹುತೇಕ ಎಲ್ಲ ಸಾರ್ವತ್ರಿಕ ಚುನಾವಣೆಗಳಲ್ಲಿ ಈ ಆ್ಯಪ್‌ನಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಿ ಮತದಾರರಿಗೆ ಅವರ ಅಭ್ಯರ್ಥಿಗಳ ವಿವರ ದೊರಕುವಂತೆ ಮಾಡಿದೆ.

ರಾಜ್ಯದಲ್ಲಿ ನಡೆದ ಹಿಂದಿನ ಚುನಾವಣೆಗಳಲ್ಲಿ ಅಪರಾಧ ಹಿನ್ನೆಲೆಯ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್‌ ಪ್ರಕರಣಗಳ ಕುರಿತು ಮಾಧ್ಯಮದ ಮೂಲಕ ಮತ ದಾರರಿಗೆ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿ ಸಿದ್ದ ಆಯೋಗ, ಈಗ ಕೆವೈಸಿ ಆ್ಯಪ್‌ ಮೂಲಕ ನಾಗರಿಕರಿಗೆ ಅಭ್ಯರ್ಥಿಗಳ ಕುರಿತು ಸಮಗ್ರ ಮಾಹಿತಿ ನೀಡುತ್ತಿದೆ. ಜತೆಗೆ ಚುನಾವಣೆ ಕುರಿತು ಹಲವು ಅಂಕಿ-ಅಂಶಗಳನ್ನೂ ನೀಡಲಿದ್ದು, ಚುನಾವಣೆ ಪ್ರಕ್ರಿಯೆ ಎಲ್ಲರಿಗೂ ಸುಲಭವಾಗಿ ತಲುಪುವಲ್ಲಿ ಆ್ಯಪ್‌ ಸಹಕಾರಿಯಾಗಲಿದೆ. ಅಭ್ಯರ್ಥಿಗಳ ಅಧಿಕೃತ ಮಾಹಿತಿ ಪಡೆದು ಮತದಾರರು ತಮ್ಮ ನಿರ್ಧಾರ ಕೈಗೊಳ್ಳಲು ಅನುಕೂಲವಾಗಲಿದೆ.

ಹೇಗಿದೆ ಕೆವೈಸಿ ಆ್ಯಪ್‌?
ಆ್ಯಪ್‌ ಅನ್ನು ಆ್ಯಂಡ್ರಾಯ್ಡ ಹಾಗೂ ಐಒಎಸ್‌ ತಂತ್ರಾಂಶದಲ್ಲಿ ಅಭಿವೃದ್ಧಿಪಡಿಸ ಲಾಗಿದೆ. ಈ ಅಪ್ಲಿಕೇಶನ್‌ ಅನ್ನು ಗೂಗಲ್‌ ಪ್ಲೇಸ್ಟೋರ್‌ ಮತ್ತು ಆ್ಯಪಲ್‌ ಸ್ಟೋರ್‌ಗಳಿಂದ ಸುಲಭವಾಗಿ ಡೌನ್‌ಲೋಡ್‌ ಮಾಡಿ ಕೊಳ್ಳಬಹುದು. ಇದರ ಲಿಂಕ್‌ ಹಾಗೂ ಕ್ಯು ಆರ್‌ ಕೋಡ್‌ ಭಾರತೀಯ ಚುನಾವಣ ಆಯೋಗದ ವೆಬ್‌ಸೈಟ್‌ನಲ್ಲೂ ಲಭ್ಯವಿದೆ.

ಯಾವೆಲ್ಲ ಮಾಹಿತಿ ಸಿಗುತ್ತದೆ?
– ಕ್ಷೇತ್ರವಾರು ಅಭ್ಯರ್ಥಿಗಳ ಫೋಟೋ
– ಸ್ಪರ್ಧಿಸುವ ಕ್ಷೇತ್ರ, ಪಕ್ಷದ ಮಾಹಿತಿ
– ನಾಮಪತ್ರ ಸ್ವೀಕಾರ, ತಿರಸ್ಕಾರ
– ಅಪರಾಧ ಹಿನ್ನೆಲೆ ಮಾಹಿತಿ
– ಆಸ್ತಿ ವಿವರದ ಅಫಿದವಿತ್‌
– ಒಟ್ಟಾರೆ ಅಭ್ಯರ್ಥಿಗಳ ಸಂಖ್ಯೆ

–  ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.