ಕಳೆದ ಬಾರಿ ಸೋತರೂ ನುಡಿದಂತೆ ನಡೆದಿದ್ದೇನೆ: ಶ್ರೀನಿವಾಸ ಮಾನೆ
Team Udayavani, Oct 22, 2021, 11:28 AM IST
ಹಾನಗಲ್ಲ: ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು ಎನ್ನುವುದನ್ನು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದಿರುವ ನಾನು, ಕಳೆದ ಚುನಾವಣೆಯ ಸಮಯದಲ್ಲಿ ಏನೇ ಆದರೂ ಈ ಕ್ಷೇತ್ರದಲ್ಲೇ ಇದ್ದು ನಿಮ್ಮ ಸೇವಕನಾಗಿ ಇರುತ್ತೇನೆಂದು ಹೇಳಿದ್ದೆ. ನುಡಿದಂತೆ ಇಲ್ಲಿಯೇ ಇದ್ದು, ಪ್ರೀತಿ ಪಾತ್ರರಾದ ಜನರ ಮಧ್ಯೆಯೇ ಸೇವೆ ಸಲ್ಲಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹೇಳಿದರು.
ಹಾನಗಲ್ಲ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಚಿಕ್ಕಾಂಶಿ ಹೊಸೂರು, ಹುಲ್ಲತ್ತಿ ಸೇರಿದಂತೆ ಹಲವೆಡೆ ಮತಯಾಚಿಸಿ ಅವರು ಮಾತನಾಡಿದರು. ಕ್ಷೇತ್ರದ ಸಮಸ್ಯೆಗಳನ್ನು ಅರಿತು ಸ್ಪಂದಿಸುವ ಕೆಲಸ ಕಳೆದ ಮೂರೂವರೆ ವರ್ಷಗಳಿಂದ ನನ್ನಿಂದ ಆಗಿದೆ ಎಂದು ಭಾವಿಸಿದ್ದೇನೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವ ಧಿಯಲ್ಲಿ ಮಹತ್ವಾಕಾಂಕ್ಷಿ ಜನಪರ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ್ದೇನೆ. ಪ್ರದೇಶಾಭಿವೃದ್ಧಿ ಅನುದಾನವನ್ನು ಜನಕಲ್ಯಾಣಕ್ಕೆ ಬಳಿಸಿದ ತೃಪ್ತಿ ನನ್ನದಾಗಿದೆ. ಕ್ಷೇತ್ರದ ಭವಿಷ್ಯದ ದಿನಗಳನ್ನು ಸುಂದರವಾಗಿಸಬೇಕೆನ್ನುವುದು ನನ್ನ ಬಯಕೆಯಾಗಿದೆ. ತಾವೆಲ್ಲ ಜೊತೆಗಿದ್ದು, ಬೆಂಬಲದ ರಕ್ಷೆಯಾದರೆ ಕಂಡ ಕನಸು ನನಸಾಗಿಸಲು ಶಕ್ತಿ ಮೀರಿ ಪ್ರಯತ್ನಿಸುವೆ ಎಂದರು. ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ, ಮನೋಹರ ತಹಶೀಲ್ದಾರ, ಕೃಷ್ಣಭೈರೇಗೌಡ, ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಮಧು ಬಂಗಾರಪ್ಪ, ಮಾಜಿ ಶಾಸಕ ಸಂಪಂಗಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಭೀಮಣ್ಣ ನಾಯಕ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ