ಪಡಿತರ ಅಕ್ಕಿ -ಗೋಧಿ ಪ್ರಮಾಣ ಹೆಚ್ಚಿಸಿ: ಶಾಸಕ ರಾಮಪ್ಪ


Team Udayavani, Apr 22, 2020, 11:22 AM IST

22-April-04

ಮಲೇಬೆನ್ನೂರು: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶಾಸಕ ಎಸ್‌. ರಾಮಪ್ಪ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮಲೇಬೆನ್ನೂರು: ಶಾಸಕ ಎಸ್‌. ರಾಮಪ್ಪ ಅವರು ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ, ಆರಕ್ಷಕ ಇಲಾಖೆ, ಕಂದಾಯ ಇಲಾಖೆ ಮತ್ತು ಪುರಸಭೆ ಇಲಾಖೆಗಳು ಕೋವಿಡ್  ನಿಯಂತ್ರಣದ ಬಗ್ಗೆ ಕೈಗೊಂಡ ಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ನಮ್ಮ ಜಿಲ್ಲೆಯಲ್ಲಿ ಮೂವರು ಕ್ವಾರಂಟೈನ್‌ನಲ್ಲಿದ್ದರು. ಅವರೆಲ್ಲಾ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸ್ಥಳೀಯ ಸಂಘ ಸಂಸ್ಥೆಗಳು ನಿರ್ಗತಿಕರನ್ನು ಗುರುತಿಸಿ ವಿವಿಧ ರೀತಿಯ ಸೌಲಭ್ಯಗಳ ಕಿಟ್‌ ನೀಡುತ್ತಿವೆ. ಸರ್ಕಾರದಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಸರ್ಕಾರ ಪಡಿತರ ಅಕ್ಕಿ ಮತ್ತು ಗೋಧಿ  ಯನ್ನು ಕಡಿಮೆ ಕೊಡುತ್ತಿದೆ. ಈ ಸಮಯದಲ್ಲಿ ಈ ರೀತಿ ಮಾಡಬಾರದಿತ್ತು ಎಂದರು.

ಸರ್ಕಾರದ ಆದೇಶದ ಮೇರೆಗೆ ಭದ್ರಾ ಜಲಾಶಯದಿಂದ ನಾಲೆಗೆ ಮೇ 6 ರಂದು ನೀರು ನಿಲುಗಡೆಯಾಗುತ್ತದೆ ಆದರೆ ಕೊನೆ ಭಾಗದ ಜಮೀನುಗಳಿಗೆ ನೀರು ತಡವಾಗಿ ಸಿಕ್ಕಿದ್ದು ಇನ್ನೂ ನೀರು ಬೇಕು ಎಂದು ರೈತರು ಬೇಡಿಕೆ ಮುಂದಿಟ್ಟಿದ್ದಾರೆ. ಆದ್ದರಿಂದ ಮೇ 30ರ ವರೆಗೆ ನೀರು ಹರಿಸುವಂತೆ ಜಲ ಸಂಪನ್ಮೂಲ ಇಲಾಖೆಗೆ ಮತ್ತು ಕಾಡಾ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದರು.

ಕೃಷಿಗೆ ಸಂಬಂಧಿಸಿದ ಆಟೋಮೊಬೈಲ್‌ ಅಂಗಡಿ ಮತ್ತು ಗ್ಯಾರೇಜ್‌ಗಳನ್ನು ಓಪನ್‌ ಮಾಡಿಸುವಂತೆ ಪುರಸಭೆ ಸದಸ್ಯ ಬಿ. ಸುರೇಶ್‌ ಶಾಸಕರಲ್ಲಿ ಮನವಿ ಮಾಡಿದರು. ಡಾ| ಬಿ. ಚಂದ್ರಶೇಖರ್‌ ಮಾತನಾಡಿ, ಯಾವುದೇ ಅಂಜಿಕೆಯಿಲ್ಲದೆ ರಸಎತಗಳಲ್ಲಿ ಐದಾರು ಜನ ಗುಂಪು ಸೇರುತ್ತಾರೆ. ದ್ವಿಚಕ್ರ ವಾಹನದಲ್ಲಿ ಮಾಸ್ಕ್ ಹಾಕಿಕೊಳ್ಳದೆ ಹೆಲ್ಮೆಟ್‌ ಧರಿಸದೆ 3 ಜನ ಪ್ರಯಾಣಿಸುತ್ತಾರೆ. ಪೊಲೀಸ್‌ ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕು ಎಂದರು. ಪಟ್ಟಣದಲ್ಲೂ ಸಹ ಪ್ರತಿಯೊಂದು ವಾರ್ಡ್‌ನ ಸದಸ್ಯರು, ಆಶಾ ಕಾರ್ಯಕರ್ತೆ, ಪೊಲೀಸ್‌, ಆರೋಗ್ಯ ಇಲಾಖೆ ಹಾಗೂ ಪುರಸಭೆ ಸಿಬ್ಬಂದಿಯನ್ನೊಳಗೊಂಡ ಟಾಸ್ಕ್ ಫೋರ್ಸ್
ರಚನೆ ಮಾಡಬೇಕು ಆಗ ಕೊರೊನಾ ವೈರಸ್‌ ನಿಯಂತ್ರಣ ಸುಭವಾಗುತ್ತದೆ ಎಂದು ಸಲಹೆ ನೀಡಿದರು.

ಮಲೇಬೆನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದುವರೆಗೆ ಸುಮಾರು 327 ಜನರನ್ನು ಪರೀಕ್ಷಿಸಿ ಕ್ವಾರಂಟೈನ್‌ ಮಾಡಲಾಗಿತ್ತು ಅವರಲ್ಲಿ 310 ಜನ ಬಿಡುಗಡೆಯಾಗಿದ್ದು ಇನ್ನುಳಿದ 27 ಜನರು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ| ಲಕ್ಷ್ಮೀದೇವಿ ತಿಳಿಸಿದರು.

ಪರಸ್ಥಳದಿಂದ ಬಂದವರು ಕಡ್ಡಾಯವಾಗಿ ಆಸ್ಪತ್ರೆಗೆ ಬಂದು ಪರೀಕ್ಷೆಗೊಳಪಡಬೇಕು. ನಿರ್ಗತಿಕರ, ಅಲೆಮಾರಿ ಕುಟುಂಬಗಳ ಮನೆಗಳಿಗೆ ಹೋಗಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿ ಬರುತ್ತಿದ್ದೇವೆ. ಅಗ್ನಿಶಾಮಕ ದಳದವರ ಸಹಾಯದಿಂದ ಪಟ್ಟಣದಲ್ಲಿ ಔಷ ಧ ಸಿಂಪಡಣೆ ಮಾಡಿಸಿದ್ದೇವೆ. ಸುಡುಗಾಡು ಸಿದ್ಧರು ಹಾಗೂ ನಿರ್ಗತಿಕರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಹಾಲು ಹಾಗೂ ಆಹಾರದ ಕಿಟ್‌ ವಿತರಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ್‌, ಉಪತಹಶೀಲ್ದಾರ್‌ ರವಿ, ಪಿಎಸ್‌ಐ ಕಿರಣ್‌ಕುಮಾರ್‌, ನೀರಾವರಿ ಇಲಾಖೆ ಎಇಇ ರವಿಕುಮಾರ್‌, ಎಪಿಎಂಸಿ ಸದಸ್ಯ ಮಂಜುನಾಥ ಪಟೇಲ್‌, ಎಸ್‌.ಕೆ. ಅಲ್ತಾಫ್‌, ಪುರಸಭೆ ಸಿಬ್ಬಂದಿ ಗುರುಪ್ರಸಾದ್‌, ಉಮೇಶ್‌, ನವೀನ್‌ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.