ಕುವೆಂಪು ಸಂದೇಶದ ಪುನರ್‌ ಮನನ ಅಗತ್ಯ :ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಜಾತಿ-ಧರ್ಮಕ್ಕೆ ಕಟ್ಟು ಬೀಳದೆ ಸೌಹಾರ್ದತೆಯಿಂದ ಬದುಕೋಣ

Team Udayavani, Dec 30, 2021, 1:30 PM IST

1-aaaa

ದಾವಣಗೆರೆ: ರಾಷ್ಟ್ರಕವಿ ಕುವೆಂಪುರವರು ನೀಡಿರುವ ಮಾನವೀಯ ಮೌಲ್ಯಗಳು ಮತ್ತು ಬದುಕಿನ ಸಂದೇಶಗಳನ್ನು ಪುನರ್‌ ಮನನ ಮಾಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುವೆಂಪುರವರ ಮಾನವೀಯ ಮೌಲ್ಯಗಳು, ಬದುಕಿನ ಸಂದೇಶಗಳ ಪುನರ್‌ ಮನನ ಮಾಡುವ ಮೂಲಕ ನಮ್ಮನ್ನು ನಾವು ಯಾವುದೇ ಧರ್ಮ, ಜಾತಿಗೂ ಕಟ್ಟಿ ಹಾಕಿಕೊಳ್ಳದೆ ನಿಜ ಮನುಷ್ಯರಾಗಿ ಬದುಕೋಣ ಎಂದರು. ಹಿರಿಯ ಪತ್ರಕರ್ತ ಬಿ.ಎನ್‌. ಮಲ್ಲೇಶ್‌ ಮಾತನಾಡಿ, ಕುವೆಂಪುರವರು ನಾವುಗಳು ಕೇವಲ ಮನುಷ್ಯ ಅಥವಾ ಮಾನವರಾಗದೇ ವಿಶ್ವ ಮಾನವರಾಗೋಣ ಎಂದಿದ್ದಾರೆ. ಅಂತಹ ಮಹನೀಯರನ್ನು ಫೋಟೋಗಷ್ಟೇ ಸೀಮಿತಗೊಳಿಸದೆ ಅವರ ವಿಚಾರಧಾರೆ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ, ನಮ್ಮ ನಡವಳಿಕೆಗಳಲ್ಲೂ ಬದಲಾವಣೆ ಮಾಡಿಕೊಳ್ಳೋಣ ಎಂದು ತಿಳಿಸಿದರು.

ರಾಷ್ಟ್ರಕವಿ ಕುವೆಂಪುರವರು ಕನ್ನಡ ನಾಡು ನುಡಿಯ ಬಗೆಗೆ ಅಪಾರ ಅಭಿಮಾನ ಹೊಂದಿದ್ದರು. ಕನ್ನಡ ಹೆಸರಷ್ಟೇ ಅಲ್ಲ, ಅದೊಂದು ಮಂತ್ರ, ಶಕ್ತಿ, ಮೈಮನಗಳನ್ನ ರೋಮಾಂಚನಗೊಳಿಸುವ ದಿವ್ಯ ಶಕ್ತಿ ಎಂದು ನಂಬಿದ್ದರು. ಮಹಿಳೆಯರ ಬಗೆಗೂ ಅಪಾರ ಗೌರವ ಹೊಂದಿದ್ದರು ಎಂದು ಸ್ಮರಿಸಿದರು. ಕುವೆಂಪುರವರು ಹಾಸ್ಯ ಪ್ರಜ್ಞೆಯ ಮೂಲಕ ಪ್ರಸಂಗವೊಂದನ್ನು ಹೇಳುತ್ತಿದ್ದರು. ಕಾಲ್ಪನಿಕವಾಗಿ ತಾವು ಮರಣ ಹೊಂದಿ ಸ್ವರ್ಗದ ಬಾಗಿಲಿಗೆ ಹೋದಾಗ ನಾನು ರಾಷ್ಟ್ರ ಕವಿ ಎಂದರೂ ಸ್ವರ್ಗದ ಬಾಗಿಲು ತೆರೆಯಲಿಲ್ಲ. ನಾನು “ರಾಮಾಯಣ ದರ್ಶನಂ’ಪುಸ್ತಕ ಬರೆದಿದ್ದೇನೆಂದರೂ ಬಾಗಿಲು ತೆರೆಯಲಿಲ್ಲ. ಕೊನೆಗೆ ನಾನು ಹೇಮಾವತಿಯ ಗಂಡ ಎಂದಾಗ ಸ್ವರ್ಗದ ಬಾಗಿಲು ತೆರೆಯಿತು ಎಂದು ಹೇಳುತ್ತಿದ್ದರು.

ನಾವು ಮಹಿಳೆಯರಿಗೆ ಗೌರವ ಕೊಡಬೇಕು, ಅದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬುದನ್ನು ಈ ಮೂಲಕ ಹೇಳಿದ್ದಾರೆ ಎಂದರು. ಅಪರ ಜಿಲ್ಲಾಧಿ ಕಾರಿ ಸದಾಶಿವ ಪ್ರಭು, ಒಕ್ಕಲಿಗ ಸಮಾಜದ ಮುಖಂಡರಾದ ಅಶೋಕ್‌, ಕೆ.ಟಿ. ಗೋಪಾಲಗೌಡ, ಯೋಗೇಶ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಇತರರು ಇದ್ದರು. ಕಾರ್ಯಕ್ರಮದ ಅಂಗವಾಗಿ ಕುವೆಂಪುರವರ ವಿಶ್ವ ಮಾನವ ಗೀತೆಗಳನ್ನು ಕಲಾವಿದರು ಪ್ರಸ್ತುತಪಡಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.