ಎಲ್ಲೆಂದರಲ್ಲಿ ಉಗಿದವರಿಗೆ ದಂಡ
Team Udayavani, May 1, 2020, 12:55 PM IST
ದಂಡ ಕಟ್ಟಿದ ಬಿಲ್ಗಳು.
ಶಿವಮೊಗ್ಗ: ಎಲ್ಲೆಂದರಲ್ಲಿ ಉಗಿಯುವವರು, ಮಾಸ್ಕ್ ಹಾಕದೆ ನಗರದಾದ್ಯಂತ ಓಡಾಡುತ್ತಿರುವವರಿಗೆ ಈಗ ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತ್ತಿದೆ. ದಿಢೀರ್ ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿ ಕಾರಿಗಳು ರಸ್ತೆಯಲ್ಲಿ ಉಗುಳಿದವರಿಗೆ ದಂಡ ಹಾಕಿದೆ.
ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ಗುರುವಾರ ಬೆಳಗ್ಗೆಯಿಂದ ನಗರದಾದ್ಯಂತ ಕಾರ್ಯಾಚರಣೆ ನಡೆಸಿದ್ದಾರೆ. ಕಂಡ ಕಂಡಲ್ಲಿ ಉಗಿಯುವವರನ್ನು ಹಿಡಿದು, ಸ್ಥಳದಲ್ಲೇ ದಂಡ ಕಟ್ಟಸಿಕೊಂಡು, ಎಚ್ಚರಿಕೆ ನೀಡಿ ಕಳುಹಿಸಲಾಗುತ್ತಿದೆ. ನಗರದಲ್ಲಿ ಬೆಳಗ್ಗೆಯಿಂದ 12 ಕೇಸುಗಳನ್ನು ಹಾಕಲಾಗಿದೆ. ಎರಡು ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಬಳಕೆಗೆ 500 ರೂ., ರಸ್ತೆ ಮೇಲೆ ಉಗುಳಿದ್ದಕ್ಕೆ 500 ರೂ., ಮಾಸ್ಕ್ ತೊಡದೆ ಓಡಾಡುತ್ತಿದ್ದಕ್ಕೆ ಹತ್ತು ಕೇಸುಗಳನ್ನು ಹಾಕಿ ಒಂದು ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಮೊದಲ ಬಾರಿಗೆ ದಂಡ ಕಟ್ಟಿದವರ ಹೆಸರು, ವಿಳಾಸ, ಮೊಬೈಲ್ ನಂಬರ್ಗಳನ್ನು ಪಾಲಿಕೆ ಸಿಬ್ಬಂದಿ ಪಡೆದುಕೊಳ್ಳುತ್ತಾರೆ.
ಸ್ಥಳದಲ್ಲೇ ದಂಡ ಕಟ್ಟಿದ್ದಕ್ಕೆ ಡಿಜಿಟಲ್ ರಶೀದಿ ಕೊಡುತ್ತಿದ್ದಾರೆ. ಸಾರ್ವಜನಿಕ ಸ್ಥಳ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಉಗುಳಿದರೆ ಮೊದಲ ಬಾರಿಗೆ 500 ರೂ. ದಂಡ. ಎರಡನೇ ಬಾರಿಗೆ 1000 ರೂ. ದಂಡ, ತಂಬಾಕು, ಗುಟ್ಕಾ ಮತ್ತು ಮದ್ಯ ಮಾರಾಟ ಮಾಡಿದರೆ 500 ರೂ. ದಂಡ, ಎರಡನೇ ಬಾರಿಗೆ 1000 ರೂ. ದಂಡ, ಸಾರ್ವಜನಿಕ ಸ್ಥಳ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮಾಸ್ಕ್ ಧರಿಸದೆ ಇದ್ದರೆ ಮೊದಲ ಬಾರಿಗೆ 100 ರೂ. ದಂಡ, ಎರಡನೇ ಬಾರಿಗೆ 200 ರೂ. ದಂಡ ಕಟ್ಟಬೇಕಾಗುತ್ತದೆ ಅಂತಾ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ